ಶಿವಮೊಗ್ಗ ಲೈವ್.ಕಾಂ | SHIMOGA | 22 ಅಕ್ಟೋಬರ್ 2019
ಬ್ಯಾಂಕುಗಳ ವಿಲೀನ ಸೇರಿದಂತೆ ವಿವಿಧ ಬೇಡಿಕೆಗಳನ್ನು ವಿರೋಧಿಸಿ ಬ್ಯಾಂಕ್ ನೌಕರರು ಇವತ್ತು ಮುಷ್ಕರ ನಡೆಸಿದರು. ಜಿಲ್ಲಾ ಪಂಚಾಯಿತಿ ಬಳಿ ಇರುವ ಲೀಡ್ ಬ್ಯಾಂಕ್ ಮುಂದೆ ನೌಕರರು ಪ್ರತಿಭಟನೆ ನಡೆಸಿದರು.
ಬ್ಯಾಂಕುಗಳ ವಿಲೀನ ಮಾಡಬಾರದು. ಸಾಲ ಹಿಂತಿರುಗಿಸದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ದಂಡ, ಸರ್ವಿಸ್ ಚಾರ್ಜ್ ಹೆಚ್ಚಳ ಮಾಡಿ ಗ್ರಾಹಕರಿಗೆ ತೊಂದರೆ ಉಂಟು ಮಾಡಬಾರದು. ಬ್ಯಾಂಕ್ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು. ಎಲ್ಲ ಬ್ಯಾಂಕುಗಳಲ್ಲಿ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್, ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]