SHIVAMOGGA LIVE NEWS | 28 FEBRUARY 2024
SHIMOGA : ನಗರದ ಗೋಪಾಲಗೌಡ ಬಡಾವಣೆಯಲ್ಲಿ ಕರಡಿ ಪ್ರತ್ಯಕ್ಷವಾಗಿದೆ. ಬೆಳಗ್ಗೆ ವಾಕಿಂಗ್ಗೆ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಕೂಡಲೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಗೋಪಾಲಗೌಡ ಬಡಾವಣೆಯ ಎಫ್ ಬ್ಲಾಕ್ನಲ್ಲಿರವ ಡಿವಿಜಿ ಪಾರ್ಕ್ ಸಮೀಪ ಕರಡಿ ಪ್ರತ್ಯಕ್ಷವಾಗಿದೆ. ಬೆಳಗ್ಗೆ ವಾಕಿಂಗ್ಗೆ ತೆರಳಿದ್ದ ಸ್ಥಳೀಯರಾದ ತುಕಾರಂ ಶೆಟ್ಟಿ ಎಂಬುವವರ ಮೇಲೆ ಕರಡಿ ದಾಳಿ ಮಾಡಿ ಅವರ ಹೊಟ್ಟೆ ಮೇಲೆ ಪರಚಿದೆ. ಇನ್ನು ಶಿವಮೊಗ್ಗ ಲೈವ್.ಕಾಂಗೆ ಪ್ರತಿಕ್ರಿಯೆ ನೀಡಿದೆ ತುಕಾರಾಂ ಶೆಟ್ಟಿ, ‘ನಾಯಿಗಳು ಓಡಿಸಿಕೊಂಡು ಬಂದಿದ್ದರಿಂದ ಕರಡಿ ನನ್ನ ಕಡೆಗೆ ಓಡಿ ಬಂತು. ಪರಚಿ ಓಡಿ ಹೋಯಿತುʼ ಎಂದು ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕರಡಿ ಕಾಣಿಸಿಕೊಂಡ ವಿಚಾರ ತಿಳಿದು ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ಇದನ್ನೂ ಓದಿ – ಸಾಗರ ತಾಲೂಕಿನ ಮೂವರು ಸೇರಿ 10 ಮಂದಿಗೆ ಮಂಗನ ಕಾಯಿಲೆ