ಶಿವಮೊಗ್ಗ ಲೈವ್.ಕಾಂ | SHIMOGA | 3 ಅಕ್ಟೋಬರ್ 2019
ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್(ಎಸ್ಎಸ್ಎಫ್) ಶಿವಮೊಗ್ಗ ವಿಭಾಗದ ಕ್ಯೂ ಟಿಮ್ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಗಾಂಧಿಜಿಯ ಕನಸು ನನಸಾಗಲಿ ಎಂಬ ಘೋಷಣೆಯೊಂದಿಗೆ ಗೋಪಿ ವೃತ್ತದಲ್ಲಿ ಮಾದಕ ದ್ರವ್ಯ ವಿರುದ್ಧ ಜನಜಾಗೃತಿ ಹಾಗೂ ಬೀದಿ ಭಾಷಣ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ಎಸ್ಎಸ್ಎಫ್ ರಾಜ್ಯ ಉಪಾಧ್ಯಕ್ಷ ಸುಫಿಯಾನ್ ಸಖಾಫಿ, ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಗೆ ಬಲಿಯಾಗಿ ಸುಂದರ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಲೇಜು ಕ್ಯಾಂಪಸ್’ಗಳಲ್ಲಿ ಮಾದಕದ್ರವ್ಯ ಮಾಫಿಯಾಗಳು ಹೆಚ್ಚಾಗುತ್ತಿವೆ. ಇವುಗಳನ್ನು ಕೂಡಲೇ ತಡೆಗಟ್ಟಬೇಕು. ಈ ಕುರಿತು ಅಧಿಕಾರಿಗಳ ಜೊತೆಗೆ ಚರ್ಚಿಸಿದ್ದೇವೆ ಎಂದರು.
ಎಸ್ಎಸ್ಎಫ್ ರಾಜ್ಯ ಸದಸ್ಯರಾದ ಅಬ್ದುಲ್ ಲತೀಫ್ ಸಅದಿ, ಜಿಲ್ಲಾ ಅಧ್ಯಕ್ಷರಾದ ಡಿ.ಎಂ.ಮದನಿ, ಶಿವಮೊಗ್ಗ ಡಿವಿಷನ್ ಅಧ್ಯಕ್ಷ ರಹೀಂ ಶಿವಮೊಗ್ಗ, ಪ್ರಧಾನ ಕಾರ್ಯದರ್ಶಿ ಅಕ್ಬರ್ ಶಿವಮೊಗ್ಗ , ಅಶ್ರಫ್ ಶಿವಮೊಗ್ಗ, ಕ್ಯೂ ಟೀಂ ಡಿವಿಷನ್ ಕಂಟ್ರೋಲರ್ ಸಾದತ್ ಶಿವಮೊಗ್ಗ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]