ಭದ್ರಾವತಿ | ಕುದುರೆಮುಖ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಆದ್ದರಿಂದ ಭದ್ರಾ ಜಲಾಶಯದ (BHADRA DAM) ಒಳ ಹರಿವು ಹೆಚ್ಚಳವಾಗಿದೆ.
ಭಾರಿ ಪ್ರಮಾಣದ ನೀರು ಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವುದರಿಂದ ದೊಡ್ಡ ಪ್ರಮಾಣದಲ್ಲಿ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಪ್ರಸ್ತುತ ಭದ್ರಾ ಜಲಾಶಯಕ್ಕೆ 65 ಸಾವಿರ ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ 55 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಪದೇ ಪದೇ ಹೆಚ್ಚುತ್ತಿದೆ ನೀರು
ಇವತ್ತು ಬೆಳಗ್ಗೆ ಭದ್ರಾ ಜಲಾಶಯಕ್ಕೆ 40,194 ಕ್ಯೂಸೆಕ್ ಒಳ ಹರಿವು ಇತ್ತು. 41,386 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿತ್ತು. ಸಂಜೆ ವೇಳೆಗೆ 55 ಸಾವಿರ ಕ್ಯೂಸೆಕ್ ನೀರು ಹರಿದು ಬಂದಿದೆ. ಹಾಗಾಗಿ 45 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತು. ಈಗ ಮತ್ತೆ ಒಳ ಹರಿವು ಏರಿಕೆಯಾಗಿದೆ.
ಭದ್ರಾವತಿಯಲ್ಲಿ ಮುಳುಗಡೆ ಭಯ
ಜಲಾಶಯದಿಂದ (BHADRA DAM) ಭಾರಿ ಪ್ರಮಾಣದ ನೀರನ್ನು ಹೊರ ಬಿಡುತ್ತಿರುವುದರಿಂದ ಭದ್ರಾವತಿಯಲ್ಲಿ ಮುಳುಗಡೆ ಭೀತಿ ಶುರುವಾಗಿದೆ. ಭದ್ರಾ ಜಲಾನಯನ ಪ್ರದೇಶದಲ್ಲಿ ಇದೆ ಪ್ರಮಾಣದಲ್ಲಿ ಮಳೆಯಾದರೆ ರಾತ್ರಿ ಭದ್ರಾ ಜಲಾಶಯದಿಂದ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ನೀರು ಹೊಳೆಗೆ ಹರಿಸುವ ಸಾಧ್ಯತೆ ಇದೆ.
ಕಾಳಜಿ ಕೇಂದ್ರ ಸ್ಥಾಪನೆ
ಮುಳುಗಡೆ ಭೀತಿ ಹಿನ್ನೆಲೆ ಭದ್ರಾವತಿಯ ತಗ್ಗು ಪ್ರದೇಶದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರವನ್ನು ಸ್ಥಾಪನೆ ಮಾಡಲಾಗಿದೆ. ಭದ್ರಾವತಿಯಲ್ಲಿ ಪ್ರಸ್ತುತ ಜಿಲ್ಲಾಡಳಿತದ ವತಿಯಿಂದ ಒಂದು ಕಾಳಜಿ ಕೇಂದ್ರವನ್ನು ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಳೆಯೋ ಮಳೆ, ಹಳದಿ ಅಲರ್ಟ್ ಘೋಷಣೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.