ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 9 ಸೆಪ್ಟೆಂಬರ್ 2019
ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಭದ್ರಾ ಕಾಲೋನಿಯಲ್ಲಿ ಸಂಜೆ ಘಟನೆ ನಡೆದಿದೆ.
ಮಣೆ ಮತ್ತು ವಿದ್ಯಾರಾಜ್ ಎಂಬುವವರು ಹಲ್ಲೆಗೊಳಗಾದವರು. ಕುತ್ತಿಗೆ ಭಾಗದಲ್ಲಿ ಮಾರಕಾಸ್ತ್ರಗಳಿಂದ ಗಂಭೀರ ಸ್ವರೂಪದ ಹಲ್ಲೆ ನಡೆಸಲಾಗಿದೆ. ಕೂಡಲೆ ಇಬ್ಬರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಕೂಡಲೆ ಇಬ್ಬರನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ವೈಯಕ್ತಿಕ ವಿಚಾರವಾಗಿ ಗಲಾಟೆಯಾಗಿರುವ ಕುರಿತು ಶಂಕೆ ಇದೆ. ಘಟನೆ ಕುರಿತು ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]