SHIVAMOGGA LIVE NEWS
ಭದ್ರಾವತಿ | ನಗರದ ಬಸ್ ನಿಲ್ದಾಣ ಪಕ್ಕದಲ್ಲಿರುವ ಹೊಸ ಸೇತುವೆ ಪುನಃ ಮುಳುಗಡೆಯಾಗಿದೆ. ಭದ್ರಾ ನದಿಯ ನೀರು ಸೇತುವೆ (BRIDGE) ಮೇಲೆ ಹರಿಯುತ್ತಿದೆ. ಹಾಗಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಶನಿವಾರ ಸಂಜೆ ವೇಳೆಗೆ ಭದ್ರಾವತಿಯ ಹೊಸ ಸೇತುವೆ ಮುಳುಗಡೆಯಾಯಿತು. ಪೊಲೀಸರು ಸೇತುವೆಯ ಎರಡು ಬದಿಯಲ್ಲೂ ಬ್ಯಾರಿಕೇಡ್ ಇರಿಸಿದ್ದಾರೆ. ವಾಹನ ಮತ್ತು ಜನ ಸಂಚಾರವನ್ನು ನಿಷೇಧಿಸಲಾಗಿದೆ.
ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಭದ್ರಾವತಿಯಲ್ಲಿ ಭದ್ರಾ ನದಿಯಲ್ಲಿರುವ ಸಂಗಮೇಶ್ವರ ಮಂಟಪ ಮುಳುಗಡೆಯಾಗಿದೆ. ಹೊಸ ಸೇತುವೆ (BRIDGE) ಮೇಲೆ ನೀರು ಹರಿಯುತ್ತಿದೆ.
ಸಂಜೆವರೆಗೂ ವಾಹನ ಸಂಚಾರವಿತ್ತು
ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿತ್ತು. ಸೇತುವೆಯ ತಳಭಾಗದ ವರೆಗೂ ನೀರು ಹರಿಯುತ್ತಿತ್ತು. ಶನಿವಾರ ಸಂಜೆ ವೇಳೆಗೆ ಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಾಣದ ನೀರನ್ನು ಹೊಳೆಗೆ ಬಿಡಲಾಯಿತು. ಆ ಬಳಿಕ ವಾಹನ ಸಂಚಾರವನ್ನು ನಿಷೇಧಿಸಲಾಯಿತು.
ಜನರಲ್ಲಿ ಮಡುಗಟ್ಟಿದ ಆತಂಕ
ಕಳೆದ ತಿಂಗಳು ಭಾರಿ ಮಳೆಯಾಗಿ, ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಯಿತು. ಇದರಿಂದ ಭದ್ರಾ ನದಿ ಪಾತ್ರದ ಜನರಲ್ಲಿ ಆತಂಕ ಮೂಡಿತ್ತು. ಹೊಳೆ ನೀರು ಮನೆಗಳಿಗೆ ನುಗ್ಗಿ ಜನರು ಮನೆ ತೊರೆದು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತಾಗಿತ್ತು. ಈಗ ಪುನಃ ಅದೆ ಸ್ಥಿತಿ ನಿರ್ಮಾಣವಾಗಿದ್ದು, ಆತಂಕ ಹೆಚ್ಚಾಗಿದೆ. ತಾಲೂಕು ಆಡಳಿತ ಈಗಾಗಲೆ ಕಾಳಜಿ ಕೇಂದ್ರ ಸ್ಥಾಪನೆ ಮಾಡಿದೆ.
ಇದನ್ನೂ ಓದಿ – ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.