ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 9 ಸೆಪ್ಟೆಂಬರ್ 2019
ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.
ಭದ್ರಾವತಿ ನಗರದ ಕನಕ ಮಂಟಪದಿಂದ ರಂಗಪ್ಪ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ಶಿವಾಜಿ ಸರ್ಕಲ್, ಸಿ.ಎನ್. ರಸ್ತೆ ಮೂಲಕ ಬಸ್ ನಿಲ್ದಾಣದವರೆಗೆ ಪಥಸಂಚಲನ ನಡೆಯಿತು.
ಭದ್ರಾವತಿ ಡಿವೈಎಸ್ಪಿ ನೇತೃತ್ವದಲ್ಲಿ ಕೆ.ಎಸ್.ಆರ್.ಪಿ., ಆರ್.ಎ.ಎಪ್., ಡಿ.ಎ.ಆರ್. ಮತ್ತು ಸಿವಿಲ್ ಪೊಲೀಸ್ ಮತ್ತು ಅಧಿಕಾರಿಗಳಿಂದ ಪಥಸಂಚಲನ ನಡೆಸಲಾಯಿತು. ಗಣಪತಿ ವಿಸರ್ಜನಾ ಮೆರವಣಿಗೆಯ ಪ್ರಯುಕ್ತ ಭದ್ರಾವತಿ ನಗರದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿಕೊಂಡು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]