SHIVAMOGGA LIVE NEWS | SHIMOGA FM | 21 ಏಪ್ರಿಲ್ 2022
ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ತನ್ನೂರಿಗೆ ತೆರಳುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿ ಸವಾರ ಮೃತಪಟ್ಟಿದ್ದು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮೃತನನ್ನು ಎನ್.ಆರ್.ಪುರದ ಬಾಳೆಹೊನ್ನೂರು ರಸ್ತೆಯಲ್ಲಿ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಬಿ.ಎಚ್.ಕೈಮರದ ಶಿವಕುಮಾರ್ (24) ಎಂದು ಗುರುತಿಸಲಾಗಿದೆ. ಮನೋಜ್ ಎಂಬಾತ ಗಾಯಗೊಂಡಿದ್ದಾನೆ.
ಹೇಗಾಯ್ತು ಘಟನೆ?
ಶಿವಕುಮಾರ್ ಹಾಗೂ ಮನೋಜ್ ಸ್ನೇಹಿತರಾಗಿದ್ದು, ಚಲನಚಿತ್ರ ವೀಕ್ಷಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದರು. ಸಿನಿಮಾ ನೋಡಿದ ಬಳಿಕ ಶಿವಮೊಗ್ಗದಿಂದ ಭದ್ರಾವತಿಗೆ ಬಂದಿದ್ದರು. ರಾತ್ರಿ 1 ಗಂಟೆಗೆ ಭದ್ರಾವತಿಯಿಂದ ಎನ್.ಆರ್.ಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಗೊಂದಿ ಸರ್ಕಲ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡ ಶಿವಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಸವಾರ ಮನೋಜ್ ಗಾಯಗೊಂಡಿದ್ದಾನೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ