ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022
ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಾಯಗೊಂಡಿದ್ದು, ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಾಗರ ರಸ್ತೆಯ ಪಿಇಎಸ್ ಕಾಲೇಜು ಬಳಿ ಘಟನೆ ಸಂಭವಿಸಿದೆ. ಅರುಣ್ ಕುಮಾರ್ ಎಂಬುವವರು ಸಮೀಪದ ಫಾರಂಗೆ ಹೋಗಿ ಕೆಲಸ ಮುಗಿಸಿ ಶಿವಮೊಗ್ಗಕ್ಕೆ ಮರಳುತ್ತಿದ್ದರು. ಅರುಣ್ ಕುಮಾರ್ ಅವರು ಚಲಿಸುತ್ತಿದ್ದ ಬೈಕಿಗೆ ಅದೆ ಮಾರ್ಗದಲ್ಲಿ ವೇಗವಾಗಿ ಬಂದ ಮತ್ತೊಂದು ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದಿದ್ದರಿಂದ ಅರುಣ್ ಕುಮಾರ್ ಅವರು ಕೆಳಗೆ ಬಿದ್ದಿದ್ದು ಕಾಲು, ಭುಜ, ಕೈಗೆ ಗಾಯವಾಗಿದೆ. ಕೂಡಲೆ ಅವರನ್ನು ನಂಜಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.
ಡಿಕ್ಕಿ ಹೊಡೆದ ಬೈಕ್ ಸವಾರನ ವಿರುದ್ಧ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.