ಶಿವಮೊಗ್ಗ ಲೈವ್.ಕಾಂ |HOLEHONNURU NEWS | 26 NOVEMBER 2020
ವಿದ್ಯುತ್ ಕಂಬಕ್ಕೆ ಬೈಕ್ ಗುದ್ದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರಹತೊಳಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಉಮೇಶ್ (28) ಮೃತ ದುರ್ದೈವಿ. ಈತ ಚನ್ನಗಿರಿ ತಾಲೂಕು ಹೊದಿಗೆರೆ ಗ್ರಾಮದವರು. ಪತ್ನಿ ಮತ್ತು ಮಕ್ಕಳನ್ನು ಭದ್ರಾವತಿ ತಾಲೂಕು ತಟ್ಟೆಹಳ್ಳಿ ಗ್ರಾಮದಲ್ಲಿ ಕಾರ್ಯಕ್ರಮವೊಂದಕ್ಕೆ ಬಿಟ್ಟು ಹಿಂತಿರುಗುತ್ತಿದ್ದರು. ಆಗ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]