ಶಿವಮೊಗ್ಗ ಲೈವ್.ಕಾಂ | SAGARA NEWS | 30 NOVEMBER 2020
ಸೇತುವೆ ಸಮೀಪ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಲೆ ಭಾಗಕ್ಕೆ ಗಾಯವಾಗಿದ್ದು, ತೀವ್ರ ರಕ್ತಸ್ರಾವ ಸಂಭವಿಸಿ ಅಸುನೀಗಿರುವ ಸಾಧ್ಯತೆ ಇದೆ.
ಆಲಳ್ಳಿಯ ಜಯಂತ್ ಮೃತ ದುರ್ದೈವಿ. ಸಾಗರ ತಾಲೂಕು ಕೆಲುವೆ – ಸೈದೂರು ನಡುವಿನ ಕನ್ನೊಳೆ ಸೇತುವೆ ಸಮೀಪ ಕಂಬಕ್ಕೆ ಜಯಂತ್ ಚಲಾಯಿಸುತ್ತಿದ್ದ ಬೈಕ್ ಗುದ್ದಿದೆ. ರಾತ್ರಿ ಘಟನೆ ನಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಹೆಲ್ಮೆಟ್ ಧರಿಸದೆ ಇದ್ದುದರಿಂದ ಜಯಂತ್ ತಲೆಗೆ ತೀವ್ರ ಪೆಟ್ಟಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]