ಶಿವಮೊಗ್ಗ ಲೈವ್.ಕಾಂ | SAGARA NEWS | 09 FEBRUARY 2021
ಸೈಕಲ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯವಾಗಿದೆ.
ಸಾಗರ ತಾಲೂಕು ತಾಳಗುಪ್ಪದ ಮರತ್ತೂರು ಗ್ರಾಮದ ಸಮೀಪದ ತಿರುವಿನಲ್ಲಿ ಸಂಭವಿಸಿದೆ. ಸೈಕಲ್ ಸವಾರ ಮರತ್ತೂರಿನ ಅಣ್ಣಪ್ಪ (55) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಿದ್ದಾಪುರ ತಾಲೂಕು ನೆಜ್ಜೂರಿನ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮತ್ತೊಬ್ಬ ಬೈಕ್ ಸವಾರನಿಗೂ ಗಾಯವಾಗಿದೆ.
ಮರತ್ತೂರು ಕ್ರಾಸ್ನಲ್ಲಿ ವಿದ್ಯುತ್ ದೀಪವಿರದ ಕಾರಣ ಎದುರಿಗಿದ್ದವರು ಕಾಣಿಸದೆ ಅಪಘಾತ ಸಂಭವಿಸಿರುವ ಶಂಕೆ ಇದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]