ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021
ವೇಗವಾಗಿ ಬಂದ ಬೈಕ್ ಒಂದು ನಡೆದು ಹೋಗುತ್ತಿದ್ದ ಜೆಸಿಬಿ ಚಾಲಕನಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾಲುಗಳಿಗೆ ಗಂಭೀರ ಗಾಯವಾಗಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗೋಂದಿಚಟ್ನಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ವೇಗವಾಗಿ ಬಂದ ಬೈಕ್ ಜೆಸಿಬಿ ಚಾಲಕ ರಾಘವೇಂದ್ರ (32) ಅವರಿಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ರಾಘವೇಂದ್ರ ಅವರ ಬಲಗಾಲಿನ ತೊಡೆ ಮತ್ತು ಎಡಗಾಲಿಗೆ ಪೆಟ್ಟು ಬಿದ್ದು ಗಾಯಗೊಂಡಿದ್ದಾರೆ. ಅಪಘಾತದ ಸ್ಥಳದಲ್ಲಿ ರಾಘವೇಂದ್ರ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಸ್ಥಳೀಯರು ಆಂಬುಲೆನ್ಸ್ ಮೂಲಕ ರಾಘವೇಂದ್ರ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು.
ಅಪಘಾತವಾಗುತ್ತಿದ್ದಂತೆ ಬೈಕ್ ಸವಾರ, ಬೈಕನ್ನು ನಿಲ್ಲಿಸದ ಪರಾರಿಯಾಗಿದ್ದಾನೆ ಎಂದು ರಾಘವೇಂದ್ರ ಅವರು ದೂರಿನಲ್ಲಿ ತಿಳಿಸಿದ್ದರೆ.
ಸೋಮವಾರ ಸಂಜೆ ಘಟನೆ ಸಂಭವಿಸಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಬೈಕ್ ಚಾಲಕನ ವಿರುದ್ಧ ಕೇಸ್ ದಾಖಲಾಗಿದೆ.