ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 9 ಜುಲೈ 2019
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಸರ್ಕಾರದ ನಡೆಯನ್ನು ವಿರೋಧಿಸಿ ಇವತ್ತು ಹೊಸನಗರದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ಜಾಥಾ ಆಯೋಜಿಸಲಾಗಿದೆ. ಮೂಲೆಗದ್ದೆ ಮಠದ ಸ್ವಾಮೀಜಿ ನೇತೃತ್ವದಲ್ಲಿ ಜಾಥಾ ನಡೆಯಿತು.
ಹೊಸನಗರದಿಂದ ಬೆಳಗ್ಗೆ ಹೊರಟ ಬೈಕ್ ಜಾಥಾಗೆ ದಾರಿ ಉದ್ದಕ್ಕೂ ಸಾರ್ವಜನಿಕರು ಸ್ವಾಗತ ನೀಡಿದರು. ಮಧ್ಯಾಹ್ನದ ವೇಳೆಗೆ ಬೈಕ್ ಜಾಥಾ ಶಿವಮೊಗ್ಗ ನಗರಕ್ಕೆ ಆಗಮಿಸಿತು. ನಗರದ ವಿವಿಧೆಡೆ ರಾಲಿ ನಡೆಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಬೈಕ್ ಜಾಥಾದ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]