ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಸೆಪ್ಟೆಂಬರ್ 2021
ಭಾರತೀಯ ಕಿಸಾನ್ ಮಂಚ್ ಘೋಷಣೆ ಮಾಡಿರುವ ಭಾರತ್ ಬಂದ್’ಗೆ ಬೆಂಬಲ ನೀಡುವಂತೆ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಮನವಿ ಮಾಡಿದರು. ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ವ್ಯಾಪಾರಿಗಳಿಗೆ ಕರಪತ್ರ ಹಂಚಿ ಮನವಿ ಮಾಡಿದರು.
ಅಶೋಕ ಸರ್ಕಲ್ ಸೇರಿದಂತೆ ವಿವಿಧೆಡೆ ರೈತರ ಸಂಘದ ಪ್ರಮುಖರಾದ ಕೆ.ಟಿ.ಗಂಗಾಧರ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ತರಕಾರ ಮಂಡಿ ಅಧ್ಯಕ್ಷ ಎನ್.ರಮೇಶ್ ಸೇರಿದಂತೆ ಹಲವರು ಅಂಗಡಿಗಳು, ಹೊಟೇಲ್’ಗಳಿಗೆ ತೆರಳಿ ಮನವಿ ಮಾಡಿದರು.
ಇನ್ನು, ರೈತ ಸಂಘದ ಕಾರ್ಯಕರ್ತರು ಶಿವಮೊಗ್ಗದ ನಗರದಾದ್ಯಂತ ಬೈಕ್ ಜಾಥಾ ನಡೆಸಿದರು. ಬಂದ್’ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200