SHIVAMOGGA LIVE NEWS
ಶಿವಮೊಗ್ಗ | ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗದಲ್ಲಿ ಬೈಕ್ ರಾಲಿ ನಾಡೆಸಲಾಯಿತು. ನೂರಾರು ಬೈಕುಗಳಲ್ಲಿ ತ್ರಿವರ್ಣ ಧ್ವಜ (INDIAN FLAG) ಹಿಡಿದು ಮೆರವಣಿಗೆ ನಡೆಸಲಾಯಿತು.
ಬಿಜೆಪಿ ನಗರ ಘಟಕದ ವತಿಯಿಂದ ತ್ರಿವರ್ಣ ಬೈಕ್ ರಾಲಿ ಆಯೋಜಿಸಲಾಗಿದೆ. ಶಿವಮೊಗ್ಗ ಎಂ.ಆರ್.ಎಸ್ ಸರ್ಕಲ್’ನಿಂದ ಮೆರವಣಿಗೆ ನಡೆಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್’ಗಳಲ್ಲಿ ಬಿಜೆಪಿ ಕಾರ್ಯಕರ್ತರು ತ್ರಿವರ್ಣ ಧ್ವಜ (INDIAN FLAG) ಹಿಡಿದು ಮೆರವಣಿಗೆ ಮಾಡಿದರು. ದೇಶ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಪರವಾಗಿ ಘೋಷಣೆ ಕೂಗಿದರು.
ಬೈಕ್ ಚಲಾಯಿಸಿದ ಈಶ್ವರಪ್ಪ
ಎಂ.ಆರ್.ಎಸ್ ಸರ್ಕಲ್’ನಿಂದ ಆರಂಭವಾದ ಬೈಕ್ ಜಾಥಾದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಸೇರಿದಂತೆ ಹಲವು ಪ್ರಮುಖರು ಬೈಕ್ ಚಲಾಯಿಸಿದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಬೈಕ್ ಚಲಾಯಿಸಿದ್ದು ಗಮನ ಸೆಳೆಯಿತು. ಈಶ್ವರಪ್ಪ ಅವರೊಂದಿಗೆ ಸಂಸದ ಬಿ.ವೈ.ರಾಘವೇಂದ್ರ ಅವರು ಬೈಕ್ ಏರಿ ಗಮನ ಸೆಳೆದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಆರುಣ್ ಸೇರಿದಂತೆ ಹಲವು ಪ್ರಮುಖರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮೀಡಿಯಾ ಹೌಸ್ ಸ್ಥಾಪನೆ, ಇವತ್ತಿಂದ ಚಾಲನೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.