ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 2 ಸೆಪ್ಟೆಂಬರ್ 2021
ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಶಿಕ್ಷಕರೊಬ್ಬರ ಬೈಕನ್ನು ಖದೀಮರು ಕದ್ದೊಯ್ದಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕ್ಷಕ ಮಲ್ಲೇಶ್ ಅವರ ಪಲ್ಸರ್ ಬೈಕನ್ನು ಕಳುವು ಮಾಡಲಾಗಿದೆ. ಶಿರಾಳಕೊಪ್ಪ ಬಸ್ ನಿಲ್ದಾಣದ ಮುಂದೆ ನಿಲ್ಲಿಸಿ ಕರ್ತವ್ಯ ನಿಮಿತ್ತ ಶಾಲೆಗೆ ಹೋಗಿದ್ದರು. ಸಂಜೆ ಬಂದು ನೋಡಿದಾಗ ಬಸ್ ನಿಲ್ದಾಣದ ಬಳಿ ಬೈಕ್ ನಾಪತ್ತೆಯಾಗಿತ್ತು.
ಪಲ್ಸರ್ ಬೈಕ್ ಕಣ್ಮರೆಯಾಗಿರುವ ಕುರಿತು ಮಲ್ಲೇಶ್ ಅವರು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200