SHIVAMOGGA LIVE | 8 JULY 2023
BHADRAVATHI : ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ (Bike Theft) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಿದ್ದು, ಆತನಿಂದ ನಾಲ್ಕು ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿಯ ದಾನವಾಡಿಯ ಉಮೇಶ್ (41) ಬಂಧಿತ. ಜೂ.2ರಂದು ಚನ್ನಗಿರಿ ನಿವಾಸಿ ಗಂಗಾಧರಪ್ಪ ಎಂಬುವವರು ಭದ್ರಾವತಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಪ್ಲಾಟೀನ ಬೈಕ್ ಕಳ್ಳತನವಾಗಿತ್ತು. ಈ ಸಂಬಂಧ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಾಲ್ಕು ಬೈಕ್ ಸಹಿತ ಸಿಕ್ಕಿಬಿದ್ದ ಕಳ್ಳ
ತನಿಖೆ ನಡೆಸಿದ ಪೊಲೀಸರು ಉಮೇಶ್ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ನಾಲ್ಕು ಬೈಕ್ಗಳನ್ನು (Bike Theft) ವಶಕ್ಕೆ ಪಡೆಯಲಾಗಿದೆ. ಇವುಗಳ ಮೌಲ್ಯ 1.25 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈತನ ವಿರುದ್ಧ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಮತ್ತು ಚನ್ನಗಿರಿ ಪೊಲೀಸ್ ಠಾಣೆಯ ಒಂದು ಪ್ರಕರಣ ದಾಖಲಾಗಿವೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಯುವಕನ ಕಾಲು ಕಟ್
ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ ಕಾಂಡಿಕೆ ಮೇಲ್ವಿಚಾರಣೆಯಲ್ಲಿ ನ್ಯೂ ಟೌನ್ ಠಾಣೆ ಪಿಎಸ್ಐಗಳಾದ ರಮೇಶ್ ಮತ್ತು ಭಾರತಿ, ಎಎಸ್ಐ ವೆಂಕಟೇಶ್, ಸಿಬ್ಬಂದಿ ರಂಗನಾಥ್, ತೀರ್ಥಲಿಂಗಪ್ಪ, ಪ್ರವೀಣ್ ಕುಮಾರ್ ಅವರ ತಂಡ ಆರೋಪಿಯನ್ನು ಬಂಧಿಸಿದೆ.