ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021
ಮಿನರಲ್ ವಾಟರ್ ಬಾಟಲಿಯ ಬಾಕ್ಸ್’ಗಳನ್ನು ಕೊಟ್ಟು ಬರುವಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗದ KSRTC ಬಸ್ ನಿಲ್ದಾಣದ ಮುಂದೆ ಘಟನೆ ಸಂಭವಿಸಿದೆ.
ಬಸವನಗುಡಿಯ ಪ್ರಸನ್ನ ಕುಮಾರ್ ಎಂಬುವವರಿಗೆ ಸೇರಿದ ಬೈಕ್ ಕಳವಾಗಿದೆ. ಪ್ರಸನ್ನ ಕುಮಾರ್ ಅವರು ಮಿನರಲ್ ವಾಟರ್ ಬಾಟಲಿಗಳ ಬಾಕ್ಸನ್ನು ಅಂಗಡಿಗೆ ಪೂರೈಸಲು ತೆರಳಿದ್ದರು. ಕೀಯನ್ನು ತಮ್ಮ ಹೋಂಡಾ ಡಿಯೋ ಬೈಕ್’ನಲ್ಲೇ ಬಿಟ್ಟಿದ್ದರು. ಇದನ್ನು ಗಮನಿಸಿರುವ ಕಳ್ಳರು ಬೈಕ್ ಕೊಂಡೊಯ್ದಿದ್ದಾರೆ.
ಪ್ರಸನ್ನಕುಮಾರ್ ಅವರು ಹಿಂತಿರುಗಿದಾಗ ಬೈಕ್ ನಾಪತ್ತೆಯಾಗಿತ್ತು. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200