ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021
ಸ್ನೇಹಿತನೊಂದಿಗೆ ಹೊಟೇಲ್’ಗೆ ಹೋಗಿ ಊಟ ಮುಗಿಸಿ ವಾಪಾಸ್ ಬರುಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗದ KSRTC ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ.
ಸಂತೆಕಡೂರು ನಿವಾಸಿ ಉಮೇಶ್ ಅವರು ತಮ್ಮ ಸ್ನೇಹಿತನೊಂದಿಗೆ KSRTC ಬಸ್ ನಿಲ್ದಾಣದ ಬಳಿ, ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದರು. ತಮ್ಮ ಹೋಂಡಾ ಶೈನ್ ಬೈಕನ್ನು ಹೊಟೇಲ್ ಮುಂಭಾಗ ನಿಲ್ಲಿಸಿದ್ದರು. ರಾತ್ರಿ 10.30ಕ್ಕೆ ಊಟಕ್ಕೆ ಹೋಗಿ 11.30ರ ಹೊತ್ತಿಗೆ ಹೊರಗೆ ಬಂದಿದ್ದಾರೆ.
ವಾಪಸ್ ಬಂದಾಗ ಬೈಕ್ ನಾಪತ್ತೆಯಾಗಿದೆ. ಸುತ್ತಮುತ್ತಲು ಹುಡುಕಿದರೂ ಬೈಕ್ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200