ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ, ಶಿವಮೊಗ್ಗ ನಗರದಲ್ಲಿ 50 ಸಾವಿರಕ್ಕೂ ಹೆಚ್ಚಿನ ಮತಗಳು ಸಿಗಲಿವೆ ಅಂತಾ ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಉಪ ಚುನಾವಣೆ ಸಂದರ್ಭ, ಬಿ.ವೈ.ರಾಘವೇಂದ್ರ ಅವರಿಗೆ 50 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಶಿವಮೊಗ್ಗ ನಗರದಲ್ಲೇ ಅಷ್ಟು ಮತಗಳ ಅಂತರ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಗುಲಾಮರಲ್ಲ, ರಾಷ್ಟ್ರಭಕ್ತರನ್ನು ಸೃಷ್ಟಿಸುತ್ತಿದೆ
ಇನ್ನು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ ಹರಿಹಾಯ್ದಿದ್ದಾರೆ. ಈಶ್ವರಪ್ಪ RSS ಗುಲಾಮ ಅಂತಾ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಈಶ್ವರಪ್ಪ, RSS ಗುಲಾಮರನ್ನು ಸೃಷ್ಟಿಸುವುದಿಲ್ಲ. ಅದು ರಾಷ್ಟ್ರಭಕ್ತರನ್ನು ತಯಾರು ಮಾಡುತ್ತದೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]