ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 OCTOBER 2023
SHIMOGA : ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ (Stone Pelting) ನಡೆಸಿದ ಘಟನೆ ಖಂಡಿಸಿ ಅ.12ರಂದು ಬೆಳಿಗ್ಗೆ 11ಕ್ಕೆ ಬಾಲರಾಜ್ ಅರಸ್ ರಸ್ತೆಯ ಮಥುರಾ ಪ್ಯಾರಡೈಸ್ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿದರು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟಿ.ಡಿ.ಮೇಘರಾಜ್, ಪ್ರತಿಭಟನೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಆರಗ ಜ್ಞಾನೇಂದ್ರ, ಬಿ.ವೈ.ವಿಜಯೇಂದ್ರ, ಎಸ್.ಎನ್.ಚನ್ನಬಸ್ಪ ಪಾಲ್ಗೊಳ್ಳುವರು ಎಂದರು.
ಇದನ್ನೂ ಓದಿ – ವೀರಶೈವ ಲಿಂಗಾಯತ ಸಮುದಾಯ ಶಾಮನೂರು ಹೇಳಿಕೆಗೆ ಧ್ವನಿಗೂಡಿಸಬೇಕು
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ರಾಗಿಗುಡ್ಡದಲ್ಲಿ ನಡೆದದ್ದೂ ಇದೇ. ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಓಲೈಸುತ್ತಿದೆ ಎಂದು ಆರೋಪಿಸಿದರು.
ಪ್ರಮುಖರಾದ ಎಸ್.ದತ್ತಾತ್ರಿ, ಶಿವರಾಜ್, ಬಿ.ಕೆ.ಶ್ರೀನಾಥ್, ಹೃಷಿಕೇಶ್ ಪೈ, ಜಗದೀಶ್, ವಿಶ್ವಾಸ್, ಶಶಿಧರ್, ಕೆ.ವಿ. ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿ ಇದ್ದರು.
ಶಿವಮೊಗ್ಗ ಲೈವ್.ಕಾಂ