ಶಿವಮೊಗ್ಗ ಲೈವ್.ಕಾಂ | SHIMOGA NEWS | 2 NOVEMBER 2020
ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಎಂಟು ಮಂದಿಗೆ ಗಾಯವಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೇಗಾಯ್ತು ಘಟನೆ?
ಜಮೀನು ಒಂದರಲ್ಲಿ ಇಸ್ಪೀಟ್ ಆಡಲು ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ದಿಢೀರ್ ಸ್ಫೋಟ ಸಂಭವಿಸಿದ್ದು, ಎಂಟು ಮಂದಿಗೆ ಗಾಯವಾಗಿದೆ. ಜಮೀನಿನ ಮಾಲೀಕನಿಗೆ ಗಂಭೀರ ಗಾಯವಾಗಿದೆ.
ಅಲ್ಲಿ ನಾಡ ಬಾಂಬ್ ಏಕಿತ್ತು?
ಹಂದಿ ಬೇಟೆಗಾಗಿ ನಾಡಬಾಂಬ್ ಇರಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಹೆಚ್ಚಿನ ತನಿಖೆ ನಡೆಯಬೇಕಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]