ಶಿವಮೊಗ್ಗ ಲೈವ್.ಕಾಂ | SAGARA NEWS | 28 ನವೆಂಬರ್ 2021
ರೈಲುಗೆ ಸಿಲುಕಿ ವ್ಯಕ್ತಿಯೊಬ್ಬರು ರಾತ್ರಿ ಮೃತಪಟ್ಟಿದ್ದಾರೆ. ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ.
ಸಾಗರ ತಾಲೂಕು ಕುಗ್ವೆ – ಶಿರವಾಳ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ.
ಮೃತರನ್ನು ಸಾಗರ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಎಂದು ಹೇಳಲಾಗುತ್ತಿದೆ. ಇದು ಆತ್ಮಹತ್ಯೆಯೋ, ಅಪಘಾತವೋ ಅನ್ನುವುದು ತನಿಖೆಯಿಂದ ತಿಳಿಯಬೇಕಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.