SHIVAMOGGA LIVE NEWS | 1 JANUARY 2023
BHADRAVATHI : ಬೈಕ್ ಮತ್ತು ಬೊಲೇರೊ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ಭದ್ರಾವತಿ ತಾಲೂಕು ಸೀಗೆಬಾಗಿಯಲ್ಲಿ ಘಟನೆ ಸಂಭವಿಸಿದೆ.
ಭದ್ರಾವತಿ ತಾಲೂಕು ಹೊನ್ನವಿಲೆಯ ರಮೇಶ್ (23) ಮತ್ತು ಚೇತನ್ (23) ಮೃತರು. ಹೊನ್ನವಿಲೆಯಿಂದ ಬೈಕ್ನಲ್ಲಿ ಭದ್ರಾವತಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬೊಲೇರೊ ಪಿಕಪ್ ವಾಹನ ಚಾಲಕನಿಗೆ ಗಾಯವಾಗಿದೆ. ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಸ್ಮಾರ್ಟ್ ಸಿಟಿ ಗಡಿಯಾರದಲ್ಲಿ ದಿಕ್ಕಿಗೊಂದು ಟೈಮ್