ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟಂಬರ್ 2020
ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಡುತ್ತಿರುವುದರಿಂದ ಭದ್ರಾವತಿಯಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ಕಾಳಜಿ ಕೇಂದ್ರದಲ್ಲಿ ನೂರಕ್ಕು ಹೆಚ್ಚು ಜನರಿಗೆ ಆಶ್ರಯ ನೀಡಲಾಗಿದೆ.
32 ಕುಟುಂಬದ 100ಕ್ಕೂ ಅಧಿಕ ಜನರಿಗೆ ಭದ್ರಾವತಿಯ ಒಕ್ಕಲಿಗ ಸಮುದಾಯ ಭವನದ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ. ಇವರಿಗೆ ಊಟ ಮತ್ತು ಸುರಕ್ಷಿತ ವಸತಿಗೆ ವ್ಯವಸ್ಥೆ ಮಾಡಲಾಗಿದೆ.
30ಕ್ಕೂ ಹೆಚ್ಚು ಮನೆ ಜಲಾವೃತ
ಭದ್ರಾವತಿಯ ಕವಲಗುಂದಿಯ 30ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಭದ್ರಾ ನದಿಯಲ್ಲಿ ನೀರನ ಮಟ್ಟ ಹೆಚ್ಚಳವಾದರೆ ಇನ್ನಷ್ಟು ಮನೆಗಳು ಜಲಾವೃತವಾಗುವ ಆತಂಕವಿದೆ. ಈ ಮನೆಗಳಲ್ಲಿ ಇದ್ದವರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.
ಹೊಸ ಸೇತುವೆ ಮೇಲೆ ನೀರು
ಭದ್ರಾವತಿ ಹೊಸ ಸೇತುವೆ ಮೇಲೆ ಇನ್ನೂ ನೀರು ಹರಿಯುತ್ತಿದೆ. ಹಾಗಾಗಿ ಇವತ್ತು ಕೂಡ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸೇತುವೆಯ ಎರಡು ಬದಿಯಲ್ಲೂ ಬ್ಯಾರಿಕೇಡ್ ಹಾಕಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]