ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 30 ಸೆಪ್ಟೆಂಬರ್ 2021
ಕಾಡಿನಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದ ಕಾರಿನ ಮಾಲೀಕರ ಗುರುತು ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಮಿಟ್ಲಗೋಡು- ಹುಣಸೇಕೊಪ್ಪ ಕಾಡಿನಲ್ಲಿ ಮಂಗಳವಾರ ದಹನಗೊಂಡಿದ್ದ ಕಾರು ಸಿಕ್ಕಿತ್ತು.
ಈ ಕಾರು ಆನಂದಪುರದ ವಿನೋದ್ ಕುಮಾರ್ ಎಂಬುವರಿಗೆ ಸೇರಿದೆ ಎಂಬುದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಆದರೆ ಕಾರಿನಲ್ಲಿ ಸಜೀವವಾಗಿ ದಹನಗೊಂಡ ವ್ಯಕ್ತಿ ಯಾರೆಂಬುದು ಇನ್ನೂ ಖಚಿತಗೊಂಡಿಲ್ಲ.
ಕಾರಿನ ನೋಂದಣಿ ಸಂಖ್ಯೆ ಆಧರಿಸಿ ಮಾಲೀಕರನ್ನು ಪತ್ತೆ ಮಾಡಿದ್ದು, ಸ್ವಿಫ್ಟ್ ಕಾರು ಆನಂದಪುರ ವಿನೋದ್ಕುಮಾರ್ ಎಂಬುವರಿಗೆ ಸೇರಿದೆ. ತೀರ್ಥಹಳ್ಳಿ ಠಾಣಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200