ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ಮತ್ತು ಸಮಾವೇಶದ ಸಂದರ್ಭ, ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆ ಎರಡು ಬಸ್ ಸೇರಿ ಮೂರು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ, ಶಿವಮೊಗ್ಗ ಲೈವ್.ಕಾಂಗೆ ಮಾಹಿತಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್, ಎನ್ಇಎಸ್ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶಕ್ಕೆ, ಬಿಜೆಪಿ ಧ್ವಜ ಮತ್ತು ಬ್ಯಾನರ್ ಹಾಕಿಕೊಂಡು ಖಾಸಗಿ ಬಸ್’ಗಳಲ್ಲಿ ಜನರನ್ನು ಕರೆತರಲಾಗುತ್ತಿತ್ತು. ಈ ಸಂಬಂಧ ಎರಡು ಬಸ್’ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮತ್ತೊಂದೆಡೆ ಸಮಾವೇಶಕ್ಕೆ ಬರುತ್ತಿದ್ದ ಜನರಿಗೆ, ಎನ್.ಡಿ.ವಿ ಹಾಸ್ಟೆಲ್ ಬಳಿ, ವಾಹನವೊಂದರಲ್ಲಿ ಊಟ ವಿತರಿಸಲಾಗುತ್ತಿತ್ತು. ಉಚಿತವಾಗಿ ಊಟ ಹಂಚುತ್ತಿರುವ ಕುರಿತು ಚುನಾವಣಾಧಿಕಾರಿಗಳು ವಿಚಾರಿಸಿದಾಗ, ಸ್ಪಷ್ಟ ಉತ್ತರ ಲಭ್ಯವಾಗಿಲ್ಲ. ಅಲ್ಲದೆ, ಟೋಕನ್ ಪಡೆದು ಊಟ ವಿತರಿಸುತ್ತಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ವಾಹನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]