SHIVAMOGGA LIVE NEWS | 16 MARCH 2023
SHIMOGA : ಶಿಕಾರಿಪುರದಲ್ಲಿ ಮಾ.17ರಂದು ವಿವಿಧ ಅಭಿವೃದ್ಧಿ ಕಾಮಗಾರಿ, ನೂತನ ಬಸ್ (Bus) ಘಟಕ ಮತ್ತು ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ತಾಲೂಕಿನ ವಿವಿಧೆಡೆಯಿಂದ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಸರ್ಕಾರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಜಿಲ್ಲೆಯ ವ್ಯಪ್ತಿಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ.
ಮಾ.17ರ ಉಡುಗಣಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿಕಾರಿಪುರ ತಾಲೂಕಿನ ವಿವಿಧೆಡೆಯಿಂದ ಸಾರ್ವಜನಿಕರನ್ನು ಕಾರ್ಯಕ್ರಮದ ಸ್ಥಳಕ್ಕೆ ಕರೆದೊಯ್ಯಲು ಬಸ್ (Bus) ವ್ಯವಸ್ಥೆ ಮಾಡಲಾಗಿದೆ. 125 ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.
ಇದೆ ಕಾರಣಕ್ಕೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಪ್ರಯಾಣಿಕರು ಹಾಗೂ ಶಾಲೆ, ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸಬೇಕು ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಇದನ್ನೂ ಓದಿ – ಶಿಕಾರಿಪುರಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ?