ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಭದ್ರಾವತಿಯ ಯುವಕ ರಾಷ್ಟ್ರೀಯ ಪಕ್ಷವೊಂದರ ಉನ್ನತ ಹುದ್ದೆಗೇರಿದ್ದಾರೆ. ಬಿ.ವಿ.ಶ್ರೀನಿವಾಸ್ ಅವರನ್ನು ರಾಷ್ಟ್ರೀಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈವರೆಗೂ ಹಂಗಾಮಿ ಅಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರನ್ನು ಪೂರ್ಣಾವಧಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
- ಬಿ.ವಿ.ಶ್ರೀನಿವಾಸ್ ಅವರು ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು.
- ಜುಲೈ ತಿಂಗಳಲ್ಲಿ ಶ್ರೀನಿವಾಸ್ ಅವರಿಗೆ ಹಂಗಾಮಿ ಅಧ್ಯಕ್ಷ ಜವಾಬ್ದಾರಿ ನೀಡಲಾಗಿತ್ತು.
- ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು, ಉದ್ಯೋಗ ಸೃಷ್ಟಿಸದ ಕ್ರಮ ಖಂಡಿಸಿ ನಿರಂತರ ಪ್ರತಿಭಟನೆಗಳನ್ನು ನಡೆಸಿದ್ದರು.
- ಲಾಕ್ ಡೌನ್ ಅವಧಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಜನರು, ಕಾರ್ಮಿಕರಿಗೆ ಯುವ ಕಾಂಗ್ರೆಸ್ನಿಂದ ನೆರವು ನೀಡಿದ್ದರು.
- ಬಿ.ವಿ.ಶ್ರೀನಿವಾಸ್ ಅವರ ಕಾರ್ಯವೈಖರಿ ಗಮನಿಸಿ ಅವರನ್ನೇ ಪೂರ್ಣಾವಧಿ ಅಧ್ಯಕ್ಷರಾಗಿ ನೇಮಿಸಲಾಗಿದೆ.
ಭದ್ರಾವತಿಯ ಶ್ರೀನಿವಾಸ್ ಅವರು ಕಳೆದ ಆರು ವರ್ಷದಿಂದ ಯುವ ಕಾಂಗ್ರೆಸ್ನ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಈಗ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]