SHIVAMOGGA LIVE NEWS | 7 SEPTEMBER 2023
BENGALURU : ಶಿಕಾರಿಪುರ ತಾಲೂಕಿನಲ್ಲಿ ಕೆಎಸ್ಆರ್ಟಿಸಿ (KSRTC) ಬಸ್ಗಳ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ಶಾಸಕ ಬಿ.ವೈ.ವಿಜಯೇಂದ್ರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ – BREAKING NEWS – ಭದ್ರಾ ನೀರು ನಿರ್ವಹಣಾ ಪ್ರಾಧಿಕಾರ ಸಭೆ, ಯಾರೆಲ್ಲ ಭಾಗಿಯಾಗಿದ್ದಾರೆ?
ಶಿಕಾರಿಪುರ ತಾಲೂಕಿನಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಸುಗಳ ಸಂಖ್ಯೆ ಹೆಚ್ಚಳ ಮಾಡಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಟ್ಟಣಕ್ಕೆ ಬರಲು ಸರ್ಕಾರಿ ಬಸ್ಸುಗಳು ಇಲ್ಲವಾಗಿದೆ. ಕೂಡಲೆ ಕೆಎಸ್ಆರ್ಟಿಸಿ (KSRTC) ಬಸ್ಸುಗಳ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ವಿಜಯೇಂದ್ರ ಮನವಿ ಸಲ್ಲಿಸಿದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇದಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.