SHIVAMOGGA LIVE NEWS | 2 FEBRUARY 2023
THIRTHAHALLI | ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ವಾಹನವೊಂದು ಆಗುಂಬೆ (Agumbe) ಘಾಟಿಯ ತಿರುವಿನಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೆ ಅನಾಹುತ ಸಂಭವಿಸಿಲ್ಲ.
ಘಾಟಿಯ 9ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದಯಿಂದ ಘಾಟಿ ಇಳಿಯುತ್ತಿದ್ದ ಕ್ಯಾಂಟರ್ ವಾಹನ ಅಪಘಾತಕ್ಕೀಡಾಗಿದೆ. ಇದರಿಂದ ಘಾಟಿಯಲ್ಲಿ ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು.
ತೀರ್ಥಹಳ್ಳಿಯಿಂದ ಉಡುಪಿ, ಮಣಿಪಾಲಕ್ಕೆ ತೆರಳುವ ವಾಹನಗಳು, ಆ ಭಾಗದಿಂದ ತೀರ್ಥಹಳ್ಳಿಗೆ ಬರುವ ವಾಹನಗಳು ಘಾಟಿಯಲ್ಲಿ (Agumbe) ಸಾಲುಗಟ್ಟಿ ನಿಲ್ಲುವಂತಾಯಿತು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸದ ವಿಚಾರ, ಪೋಸ್ಟ್ ವೈರಲ್ ಬೆನ್ನಿಗೆ ಪೊಲೀಸರು ಅಲರ್ಟ್