SHIVAMOGGA LIVE NEWS | 13 NOVEMBER 2023
THIRTHAHALLI : ಕಾರು ಮತ್ತು ಬುಲೆಟ್ ಬೈಕ್ ಡಿಕ್ಕಿಯಾಗಿ ಆಗುಂಬೆ ಫಾರೆಸ್ಟ್ ಗೇಟ್ ವಾಚರ್ ರಮೇಶ್ (55) ಮೃತಪಟ್ಟಿದ್ದಾರೆ. ತೀರ್ಥಹಳ್ಳಿ – ಆಗುಂಬೆ ಮಾರ್ಗದ ಬಾಳೆಬೈಲು ಸಮೀಪ ಘಟನೆ ಸಂಭವಿಸಿದೆ.
ಸ್ವಿಫ್ಟ್ ಕಾರು ಮತ್ತು ರಮೇಶ್ ಅವರು ಚಲಿಸುತ್ತಿದ್ದ ಬುಲೆಟ್ ಬೈಕ್ ಅಪಘಾತಕ್ಕೀಡಾಗಿವೆ. ಗಂಭೀರ ಗಾಯಗೊಂಡಿದ್ದ ರಮೇಶ್ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾರ್ಗ ಮಧ್ಯದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- 17 ವರ್ಷದ ಅಪ್ರಾಪ್ತನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, 10 ಸಾವಿರ ರೂ. ದಂಡ, ಶಿವಮೊಗ್ಗ ನ್ಯಾಯಾಲಯದ ಆದೇಶ