ಶಿವಮೊಗ್ಗ ಲೈವ್.ಕಾಂ | HOSANAGARA | 12 ಮಾರ್ಚ್ 2020
ಶಾರ್ಟ್ ಸರ್ಕಿಟ್’ನಿಂದಾಗಿ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಲದಲ್ಲಿ ಕಾರಿನ ಒಳಭಾಗ ಸುಟ್ಟು ಹೋಗಿದೆ. ಹೊಸನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಘಟನೆಯಲ್ಲಿ ಸಂಭವಿಸಿದೆ.
ಚರ್ಚ್ ರಸ್ತೆ ನಿವಾಸಿ ಅಬ್ದುಲ್ ರೆಹಮಾನ್ ಅವರು ತಮ್ಮ ದಿನಸಿ ಅಂಗಡಿ ಮುಂದೆ ಕಾರು ನಿಲ್ಲಿಸಿ, ಮನೆಗೆ ಹೊರಡುವಾಗ ಬೆಂಕಿ ಕಾಣಿಸಿಕೊಂಡಿದೆ. ಅಬ್ದುಲ್ ರೆಹಮಾನ್ ಅವರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ತಿಳಿಸಿದರು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಆದರೆ ಕಾರಿನ ಒಳಭಾಗ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿ ಸುರೇಶ್, ಹೆಚ್.ಡಿ.ರಾಜೇಶ್, ಆಂಜನೇಯ, ಬಿ.ಸಿ.ಶಂಕರ್, ಭೀಷ್ಮಾಚಾರ್ ಅವರು ಬೆಂಕಿ ನಂದಿಸುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]