SHIVAMOGGA LIVE NEWS | 12 APRIL 2024
THIRTHAHALLI : ಕಾರಿನ ಗ್ಯಾಸ್ ಸಿಲಿಂಡರ್ ಸ್ಪೋಟೊಗೊಂಡು ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮಾರುತಿ ಓಮ್ನಿ ಕಾರು ಸುಟ್ಟು ಕರಕಲಾಗಿದೆ. ಗ್ಯಾರೇಜಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮವಾಗಿವೆ.
ತೀರ್ಥಹಳ್ಳಿ ಕುವೆಂಪು ವೃತ್ತದ ಬಳಿ ಗ್ಯಾರೇಜಿನಲ್ಲಿ ಘಟನೆ ಸಂಭವಿಸಿದೆ. ಕೂಡಲೆ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಗ್ಯಾರೇಜ್ ಮಾಲೀಕ ವಿಠಲ್ ಗಾಯಗೊಂಡಿದ್ದಾರೆ. ಅವರನ್ನು ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿವೈಎಸ್ಪಿ ಗಜಾನನ ವಾಮನಾ ಸುತಾರ ಸ್ಥಳಕ್ಕಾಗಮಿಸಿ ಪರಿಶೀಲಿಸಿದರು.
ಇದನ್ನೂ ಓದಿ – ಭೀಕರ ಅಪಘಾತ, KSRTC ಬಸ್ ಡಿಕ್ಕಿ, ಓಮ್ನಿ ನಜ್ಜುಗುಜ್ಜು