ಶಿವಮೊಗ್ಗ ಲೈವ್.ಕಾಂ | SHIMOGA NEWS | 18 MAY 2021
ಲಾಕ್ ಡೌನ್ ಸಂದರ್ಭ ನಡುರಾತ್ರಿ ಪಟಾಕಿ ಹೊಡೆದ ಯುವಕರ ವಿರುದ್ದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಹೊಸಮನೆ ಬಡಾವಣೆಯಲ್ಲಿ ಮೂರನೆ ಕ್ರಾಸ್ನಲ್ಲಿರುವ ಚರ್ಚ್ ಸಮೀಪ ಯುವಕರ ಗುಂಪೊಂದು ಪಟಾಕಿ ಸಿಡಿಸಿದೆ. ಮೇ 15ರ ನಡುರಾತ್ರಿ ಘಟನೆ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪೊಲೀಸ್ ಜೀಪ್ ಬರುತ್ತಿರುವುದನ್ನು ಗಮನಿಸಿದ ಯುವಕರು ಪರಾರಿಯಾಗಿದ್ದಾರೆ.
ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]