ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021
ಅನುಮತಿ ಪಡೆಯದೆ ಮರಗಳ ಕಡಿತಲೆ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಕಡಿದ ಮರಗಳು ಮತ್ತು ಟ್ರಾಕ್ಟರನ್ನು ವಶಪಡಿಸಿಕೊಳ್ಳಲಾಗಿದೆ.
ಉಂಬ್ಳೇಬೈಲು – ಕೈದೊಟ್ಲು ಗ್ರಾಮಗಳ ನಡುವೆ ಘಟನೆ ಸಂಭವಿಸಿದೆ. ಮರ ಕಡಿಯುತ್ತಿರುವ ಕುರಿತು ಗ್ರಾಮಸ್ಥರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಅನುಮತಿ ಪಡೆಯದೆ ಮರ ಕಡಿಯುತ್ತಿರುವುದು ಬೆಳಕಿಗೆ ಬಂದಿದೆ.
ನಿರಂತರ ಜ್ಯೋತಿ ವಿದ್ಯುತ್ ಮಾರ್ಗಕ್ಕೆ ಕಡಿತಲೆ
ನಿರಂತರ ಜ್ಯೋತಿ ವಿದ್ಯುತ್ ಮಾರ್ಗ ಅಳವಡಿಕೆಯ ಗುತ್ತಿಗೆ ಪಡೆದಿದ್ದ ಖಾಸಗಿ ಸಂಸ್ಥೆ ಈ ಕಡಿತಲೆ ಮಾಡಿಸುತ್ತಿತ್ತು. ಸಂಸ್ಥೆಯು ಈಗಾಗಲೇ ನೂತನ ವಿದ್ಯುತ್ ಮಾರ್ಗವನ್ನು ಎಳೆದಿತ್ತು. ಅದಕ್ಕೆ ತಾಗುತ್ತಿದ್ದ ಮರಗಳನ್ನು ಕಡಿತಲೆ ಮಾಡಲಾಗುತ್ತಿತ್ತು.
ಮರಗಳನ್ನು ಕಡಿತಲೆ ಮಾಡುತ್ತಿದ್ದ ಬಗ್ಗೆ ಗ್ರಾಮಸ್ಥರು ಪ್ರಶ್ನಿಸಿದಾಗ ಕಾರ್ಮಿಕರು ಸಮರ್ಪಕ ಉತ್ತರ ನೀಡಲಿಲ್ಲ. ಹಾಗಾಗಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿದ್ದಾರೆ. ಈ ವೇಳೆ ಅನುಮತಿ ಇಲ್ಲದಿರುವುದು ಬೆಳಕಿಗೆ ಬಂದಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200