SHIVAMOGGA LIVE NEWS | 30 OCTOBER 2023
SHIMOGA : ಈದ್ ಮಿಲಾದ್ ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಭವಿಸಿದ ಕಲ್ಲು ತೂರಾಟ ಘಟನೆಯ ಪ್ರಚೋದನಕಾರಿ ವಿಡಿಯೋ (Video) ಅಪ್ಲೋಡ್ ಮಾಡಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ- ದಸರಾ, ದೀಪಾವಳಿ, ಶಿವಮೊಗ್ಗದಲ್ಲಿ ಲೆದರ್ ವಸ್ತುಗಳ ಮೇಲೆ ಶೇ.20ರಷ್ಟು ರಿಯಾಯಿತಿ
ಸಮೀರ್ ಪಾಷ ಎಂಬಾತ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ 12 ಸೆಕೆಂಡ್ನ ಪ್ರಚೋದನಕಾರಿ ವಿಡಿಯೋ ಅಪ್ಲೋಡ್ ಮಾಡಿದ್ದ. ಮಾಹಿತಿ ಲಭಿಸುತ್ತಿದ್ದಂತೆ ಪರಿಶೀಲನೆ ನಡೆಸಿದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.