ದೀಪೋತ್ಸವ ಮುಗಿದ ಮರುದಿನ ಬೆಳಗ್ಗೆ ದೇವಸ್ಥಾನಕ್ಕೆ ಬಂದ ಅರ್ಚಕರಿಗೆ ಕಾದಿತ್ತು ಶಾಕ್

Crime-News-General-Image

ಶಿವಮೊಗ್ಗ: ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್‌ನಲ್ಲಿರುವ ಶ್ರೀ ಸಿದ್ದಿ ಬುದ್ದಿ ಮಹಾಗಣಪತಿ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇವರ ಬೆಳ್ಳಿಯ ಮುಖವಾಡ ಮತ್ತು ಹುಂಡಿಯಲ್ಲಿದ್ದ ಕಾಣಿಕೆ ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ದೀಪೋತ್ಸವ ಮುಗಿದ ರಾತ್ರಿಯೆ ಕಳ್ಳತನ ಕಾರ್ತಿಕ ದೀಪೋತ್ಸವದ ಪೂಜೆ ಮುಗಿಸಿ ದೇವಸ್ಥಾನದ ಬಾಗಿಲುಗಳನ್ನು ಹಾಕಿಕೊಂಡು ಹೋದ ನಂತರ ಕೃತ್ಯ ನಡೆದಿದೆ. ಮರುದಿನ ಬೆಳಗ್ಗೆ 6 ಗಂಟೆಗೆ ಅರ್ಚಕರು ಬಂದು ನೋಡಿದಾಗ ಶ್ರೀ ಚೌಡೇಶ್ವರಿ ದೇವಸ್ಥಾನದ ಮುಖ್ಯ ಬಾಗಿಲು ಒಡೆದಿದ್ದು ಕಂಡುಬಂದಿದೆ. ಗರ್ಭಗುಡಿಯಲ್ಲಿ ವಿಗ್ರಹದ … Read more

ತಾಯಿ ಜೊತೆ ಬೈಕ್‌ನಲ್ಲಿ ತೆರಳುವಾಗ ಜೋರಾಗಿ ಕೂಗಿದ ಬಾಲಕಿ, ನಿಲ್ಲಿಸಿ ನೋಡಿದಾಗ ಕಾದಿತ್ತು ಆಘಾತ

Police-Jeep-in-Shimoga-city

ಶಿವಮೊಗ್ಗ: ಟ್ಯೂಷನ್‌ ಮುಗಿಸಿ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಾಲಕಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ವ್ಯಕ್ತಿಯೊಬ್ಬ ಕಸಿದುಕೊಂಡು ಪರಾರಿಯಾಗಿದ್ದಾನೆ. ಶಿವಮೊಗ್ಗದ ಗೋಪಾಳದ ರಾಮಕೃಷ್ಣ ಶಾಲೆ ಬಳಿ ಘಟನೆ ಸಂಭವಿಸಿದೆ. ರೂಪಾ ಎಂಬುವವರು ತಮ್ಮ ಮಗಳು ಐಶ್ವರ್ಯಾಳನ್ನು ಟ್ಯೂಷನ್‌ನಿಂದ ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದರ. ಸಂಜೆ ಸುಮಾರು 6:50ರ ಹೊತ್ತಿಗೆ ಈ ಘಟನೆ ನಡೆದಿದೆ. ದ್ವಿಚಕ್ರ ವಾಹನದ ಹಿಂಬದಿಗೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಮಗಳ ಕುತ್ತಿಗೆಗೆ ಕೈ ಹಾಕಿ ಸರ ಕಸಿದಿದ್ದಾನೆ. ಈ ಸಂದರ್ಭ … Read more

ವಿನೋಬನಗರದಲ್ಲಿ ತರಕಾರಿ ಮಾರಾಟ ಮಾಡಿ ತೆರಳುತ್ತಿದ್ದ ಮಹಿಳೆಗೆ ಆಗಂತುಕನಿಂದ ಆಘಾತ, ಆಗಿದ್ದೇನು?

Doddapete-Police-raid-on-Lodge-in-Shimoga.

ಶಿವಮೊಗ್ಗ: ತರಕಾರಿ ಮಾರಾಟ ಮಾಡಿ ಮನೆಗೆ ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಸಿದ ಕಳ್ಳರು ಬೈಕಿನಲ್ಲಿ ಪರಾರಿಯಾಗಿದ್ದಾರೆ. ಶಿವಮೊಗ್ಗ ವಿನೋಬನಗರ 16ನೇ ಕ್ರಾಸ ತಿರುವಿನಲ್ಲಿ ಘಟನೆ ಸಂಭವಿಸಿದೆ. ಹೊನ್ನಮ್ಮ ಎಂಬುವವರು ಎಪಿಎಂಸಿ ಮುಂಭಾಗ ಮರದ ಅಡಿ ಕುಳಿತು ತರಕಾರಿ ವ್ಯಾಪಾರ ಮಾಡುತ್ತಾರೆ. ಎಂದಿನಂತೆ ವ್ಯಾಪಾರ ಮುಗಿಸಿ ಮನೆಗೆ ಮಧ್ಯಾಹ್ನ ಮನೆಗೆ ನೆಡದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಹೊನ್ನಮ್ಮ ಅವರ ಹಿಂದಿನಿಂದ ಬಂದ ಯುವಕನೊಬ್ಬ ಕೊರಳಲಿದ್ದ ಸರ ಕಸಿದುಕೊಂಡು ಓಡಿಹೋಗಿದ್ದಾನೆ. ಸ್ವಲ್ಪ ದೂರದಲ್ಲಿ ಮತ್ತೊಬ್ಬ … Read more

ಶಿವಮೊಗ್ಗದ ಲಾಡ್ಜ್‌ ರೂಮಿನಲ್ಲಿ ಬೆಂಕಿ ಕೇಸ್‌, ಪುರುಷ, ಮಹಿಳೆ ವಿರುದ್ಧವೇ ಕೇಸ್‌, ಏನೇನಿದೆ ದೂರಿನಲ್ಲಿ?

Shimoga-Lodge-incident-Doddapete-police-visit-the-spot

ಶಿವಮೊಗ್ಗ: ಲಾಡ್ಜ್‌ನ ರೂಂನಲ್ಲಿ ಬೆಂಕಿಯಿಂದಾಗಿ ಮಹಿಳೆಗೆ ಗಂಭೀರ ಗಾಯ ಪ್ರಕರಣ ಸಂಬಂಧ ಲಾಡ್ಜ್‌ನ ಸೂಪರ್‌ ವೈಸರ್‌ ದೂರು ನೀಡಿದ್ದಾರೆ. ರೂಂನಲ್ಲಿದ್ದ ಪುರುಷ ಮತ್ತು ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ. ನ.18ರಂದು ಶಿವಮೊಗ್ಗದ ಲಾಡ್ಜ್‌ನ ರೂಂನಲ್ಲಿ ಬೆಂಕಿಗೆ ಮಹಿಳೆ ಗಂಭೀರ ಗಾಯಗೊಂಡಿದ್ದರು. ಜೊತೆಗಿದ್ದ ವ್ಯಕ್ತಿಗು ಗಾಯವಾಗಿತ್ತು. ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ದೂರಿನಲ್ಲಿ ಏನಿದೆ? ‘ಗಿರೀಶ್‌ ಎಂಬುವವರು ನ.18ರಂದು ಮಧ್ಯಾಹ್ನ ಒಬ್ಬರೆ ಲಾಡ್ಜ್‌ಗೆ ಬಂದು ರೂಂ ನಂಬರ್‌ 211ರಲ್ಲಿ ಉಳಿದಿದ್ದರು. … Read more

ದಿಢೀರ್‌ ಕಾರ್ಯಾಚರಣೆ, 24 ಮಂದಿಯನ್ನು ಠಾಣೆಗೆ ಕರೆದೊಯ್ದ ಪೊಲೀಸ್‌, ನಾಲ್ವರ ವಿರುದ್ಧ ಕೇಸ್‌

Shimoga-Police-Jeep

ಶಿವಮೊಗ್ಗ: ನಗರದಲ್ಲಿ ಪೊಲೀಸರು ದಿಢೀರ್‌ ವಿಶೇಷ ಏರಿಯಾ ಡಾಮಿನೇಷನ್‌ ಕಾರ್ಯಾಚರಣೆ ನಡೆಸಿದರು. ಅನುಮಾನಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು. ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಆರ್‌ಎಂಎಲ್‌ ನಗರ, ಬುದ್ಧನಗರ, ಮಿಳಘಟ್ಟ ಭಾಗದಲ್ಲಿ ಏರಿಯಾ ಡಾಮಿನೇಷನ್‌ ವಿಶೇಷ ಗಸ್ತು ನಡೆಸಲಾಯಿತು. ಈ ಸಂದರ್ಭ 24 ಮಂದಿಯನ್ನು ಠಾಣೆಗೆ ಕರೆಯಿಸಿ ವೈದ್ಯಕೀಯ ಪರೀಕ್ಷೆ ನಡೆಸಾಯಿತು. ಈ ಸಂದರ್ಭ ನಾಲ್ಕು ಮಂದಿ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಅವರ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ … Read more

ಆಟೋದಲ್ಲಿ ಬಂತು ಐದು ಬಾಳೆಗೊನೆ, ಪರಿಶೀಲಿಸಿದ ಪೊಲೀಸರಿಗೆ ಕಾದಿತ್ತು ಶಾಕ್‌, ಆಗಿದ್ದೇನು?

NDPS-Case-for-banana-supplier-to-shimoga-jail.

ಶಿವಮೊಗ್ಗ: ಕೇಂದ್ರ ಕಾರಾಗೃಹದ ಕ್ಯಾಂಟೀನ್‌ಗೆ ತಂದಿದ್ದ ಬಾಳೆಗೊನೆಗಳಲ್ಲಿ ಗಾಂಜಾ, ಸಿಗರೇಟ್‌ಗಳು ಪತ್ತೆಯಾಗಿವೆ. ಜೈಲು ಭದ್ರತೆ ನಿರ್ವಹಿಸುತ್ತಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಸಿಬ್ಬಂದಿ ಇದನ್ನು ಪತ್ತೆ ಹಚ್ಚಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನ.19ರಂದು ಮಧ್ಯಾಹ್ನ 2.15ರ ಹೊತ್ತೆಗೆ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಆಟೋ ಒಂದರಲ್ಲಿ ಐದು ಬಾಳೆಗೊನೆ ತರಲಾಗಿತ್ತು. ಕ್ಯಾಂಟೀನ್‌ನವರ ಸೂಚನೆ ಮೇರೆಗೆ ಇವುಗಳನ್ನು ತರಲಾಗಿದೆ ಎಂದು ಗೇಟ್‌ ಮುಂಭಾಗ ಇರಿಸಲಾಗಿತ್ತು. ಕೆಎಸ್‌ಐಎಸ್‌ಎಫ್‌ ಇನ್ಸ್‌ಪೆಕ್ಟರ್‌ ಜಗದೀಶ್‌, ಪಿಎಸ್‌ಐ ಪ್ರಭು, ಸಿಬ್ಬಂದಿ ಪ್ರವೀಣ್‌ ಮತ್ತು ನಿರೂಪಬಾಯಿ, … Read more

ಒಳ ಉಡುಪಿನಲ್ಲಿ ಗಾಂಜಾ ತಂದ ಅಧಿಕಾರಿ, ಸಿಕ್ಕಿಬಿದ್ದಿದ್ದು ಹೇಗೆ?

Shivamogga-Central-Prison-FDA-Arrested

ಶಿವಮೊಗ್ಗ: ತಪಾಸಣೆ ವೇಳೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯ ಒಳ ಉಡುಪಿನಲ್ಲಿ ಗಾಂಜಾ ಪತ್ತೆಯಾಗಿದೆ. ಅಧಿಕಾರಿಯನ್ನು ವಶಕ್ಕೆ ಪಡೆದು ತುಂಗಾ ನಗರ ಠಾಣೆ ಪೊಲೀಸರಿಗೆ ಒಪ್ಪಿಸಲಾಗಿದೆ. ಜೈಲಿನ ಎಫ್‌.ಡಿ.ಎ ಸಾತ್ವಿಕ್‌ (25) ಬಂಧಿತ. ಗುರುವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ ಸಾತ್ವಿಕ್‌ನನ್ನು ತಪಾಸಣೆ ಮಾಡಿದಾಗ ಒಳ ಉಡುಪಿನಲ್ಲಿ ಗಪ್‌ ಟೇಪ್‌ನಿಂದ ಸುತ್ತಿರುವ ವಸ್ತು ಪತ್ತೆಯಾಗಿತ್ತು. ಪರಿಶೀಲಿಸಿದಾಗ 170 ಗ್ರಾಂ ಗಾಂಜಾ ಸಿಕ್ಕಿದೆ. ಘಟನೆ ಕುರಿತು ಕೆ.ಎಸ್‌.ಐ.ಎಸ್‌.ಎಫ್‌ ಇನ್ಸ್‌ಪೆಕ್ಟರ್‌ ಜಗದೀಶ್‌, ಪಿ.ಎಸ್‌.ಐ ಪ್ರಭು, ಸಿಬ್ಬಂದಿ ಕುಪ್ಪೇರ ಬಸವರಾಜ್‌ … Read more

ನೆಹರು ಕ್ರೀಡಾಂಗಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಪೊಲೀಸರಿಂದ ಪರಿಶೀಲನೆ

Person-breathed-last-at-Nehru-Stadium-in-Shimoga - ನೆಹರು ಕ್ರೀಡಾಂಗಣ

ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತ ವ್ಯಕ್ತಿಯನ್ನು ಹೊಸನಗರದ ವಿಕಲ ಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗುತ್ತಿಗೆ ನೌಕರರ ಶ್ರೀಕಾಂತ್‌ (42) ಎಂದು ಗುರುತಿಸಲಾಗಿದೆ. ನೆಹರು ಕ್ರೀಡಾಂಗಣದಲ್ಲಿ ಇವತ್ತು ಜಿಲ್ಲಾ ಮಟ್ಟದ ವಿಕಲ ಚೇತನರ ಕ್ರೀಡಾಕೂಟ ನಡೆಯುತಿತ್ತು. ಆದರೆ ಶ್ರೀಕಾಂತ್‌ ಯಾವುದೇ ಕ್ರೀಡಾಕೂಟದಲ್ಲಿ ಭಾಗವಹಿಸಿರಲಿಲ್ಲ ಎಂದು ತಿಳಿದು ಬಂದಿದೆ. ಪೆವಿಲಿಯನ್‌ ಮೇಲೆ ಶ್ರೀಕಾಂತ್‌ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರಿಂದ ಜಯನಗರ ಠಾಣೆಗೆ ಮಾಹಿತಿ … Read more

ಶೀಟ್‌ ಮೇಲಿತ್ತು ಪ್ರತಿಷ್ಠಿತ ಕಂಪನಿಯ ಹೆಸರು, ಪೊಲೀಸ್‌ ದಾಳಿ ಬಳಿಕ ಹೊರಬಿತ್ತು ಅಸಲಿ ವಿಷಯ

Police-raid-on-sheet-factory-in-Shimoga

ಶಿವಮೊಗ್ಗ: ಬೇರೆ ಕಂಪನಿಯ ಕಬ್ಬಿಣದ ಶೀಟ್ ಮೇಲೆ JSW ಕಂಪನಿಯ ಹೆಸರು ಮುದ್ರಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಿಂಟ್ ಮಾಡಲು ಬಳಸುತ್ತಿದ್ದ ಯಂತ್ರ ಸಹಿತ ಹೊಳೆಬೆನವಳ್ಳಿ ಗ್ರಾಮದ ಲೋಹಿತ್ ಬಿ.ನಾಯ್ಕ (34) ಎಂಬುವರನ್ನು ವಶಪಡಿಸಿಕೊಳ್ಳಲಾಗಿದೆ. ಎಂಜಿನಿಯರಿಂಗ್‌ ವರ್ಕ್ಸ್‌ವೊಂದರಲ್ಲಿ ತಮ್ಮ ಬ್ರ್ಯಾಂಡ್‌ನ ನಕಲು ಮಾಡಿ ಕಬ್ಬಿಣ ಮಾರಾಟ ಮಾಡುತ್ತಿರುವ ಬಗ್ಗೆ ಜಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಡಿವೈಎಸ್‌ಪಿ ಸಂಜೀವ್ ಕುಮಾ‌ರ್ ಮಾರ್ಗದರ್ಶನದಲ್ಲಿ ಠಾಣೆಯ ಪಿಐ ಸಿದ್ದನಗೌಡ, ಪಿಎಸ್‌ಐ ಕೆ.ಎನ್. ಹಳ್ಳಿಯವರ್ … Read more

ರೈಲ್ವೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

railway-track-general-image.webp

ಶಿವಮೊಗ್ಗ: ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಂದಾಜು 50 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಡು ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕಡು ಗುಲಾಬಿ ಬಣ್ಣದ ಶರ್ಟ್ ಮತ್ತು ಕಪ್ಪು-ಬಿಳಿ ಬಣ್ಣದ ಲುಂಗಿ ಧರಿಸಿದ್ದಾರೆ. ಸಂಬಂಧಿಗಳು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯ ಎಸ್‌ಐ ಅವರನ್ನು ಖುದ್ದಾಗಿ ಅಥವಾ ದೂ.ಸಂ: 08182-222974/ 948082124ಗೆ ಸಂಪರ್ಕಿಸುವಂತೆ ರೈಲ್ವೆ ಪೊಲೀಸ್ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್‌ನಲ್ಲಿ ಬೆಂಕಿ … Read more