ಶಿವಮೊಗ್ಗದಲ್ಲಿ 3 ಕೆ.ಜಿ ಬೆಳ್ಳಿ ವಸ್ತು, ₹17 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

Police-Jeep-in-Shimoga-city

ಶಿವಮೊಗ್ಗ: ಮನೆಯೊಂದರ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ನಗರದ ದೂರವಾಣಿ ಬಡಾವಣೆಯ ಅಶ್ವಿನಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ (Theft). ಅಶ್ವಿನಿ ಕುಟುಂಬದೊಂದಿಗೆ ತಮ್ಮ ತಾಯಿ ಮನೆಗೆ ತೆರಳಿದ್ದರು. ದೀಪಾವಳಿ ಹಬ್ಬದ ಬೆಳಗ್ಗೆ ಪಕ್ಕದ ಮನೆಯವರು ಅಶ್ವಿನಿ ಅವರಿಗೆ ಕರೆ ಮಾಡಿ ‘ಮನೆ ಬಾಗಿಲು ತೆಗೆದಿದ್ದು, ಮನೆಯಲ್ಲೇ ಇದ್ದೀರʼ ಎಂದು ವಿಚಾರಿಸಿದ್ದರು. ಕೂಡಲೆ ಊರಿನಿಂದ ಮರಳಿದ್ದು, ಪರಿಶೀಲಿಸಿದಾಗ ಚಿನ್ನಾಭರಣ, ಬೆಳ್ಳಿ ವಸ್ತುಗಳು ಕಳುವಾಗಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಮನೆಯ … Read more

ಮೈಸೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಉದ್ಯಮಿ ಕುಟುಂಬಕ್ಕೆ ಕಾದಿತ್ತು ಶಾಕ್‌, ಆಗಿದ್ದೇನು?

Crime-News-General-Image

ಶಿವಮೊಗ್ಗ: ಕುಟುಂಬದವರೆಲ್ಲ ಮೈಸೂರಿನ ಚರ್ಚ್‌ಗೆ ತೆರಳಿದ್ದ ಸಂದರ್ಭ ಶಿವಮೊಗ್ಗದ ಕೀರ್ತಿನಗರದಲ್ಲಿರುವ ಮನೆಯಲ್ಲಿ ಕಳ್ಳತನವಾಗಿದೆ. ಕೊಠಡಿಯ ವಾರ್ಡ್‌ರೋಬ್‌ನಲ್ಲಿದ್ದ ಚಿನ್ನಾಭರಣ, ವಾಚುಗಳು, ಕ್ಯಾಮರಾಗಳು ಕಳುವಾಗಿವೆ (Theft) ಎಂದು ಆರೋಪಿಸಲಾಗಿದೆ. ಕೀರ್ತಿನಗರದಲ್ಲಿರುವ ಉದ್ಯಮಿ ಜೇಮ್ಸ್‌ ಸ್ಟೀವನ್‌, ಕುಟುಂಬ ಸಹಿತ ಮೈಸೂರಿನ ಡೋರನಹಳ್ಳಿಯ ಚರ್ಚ್‌ಗೆ ತೆರಳಿದ್ದರು. ಅಲ್ಲಿಂದ ವಾಪಾಸಾದಾಗ ಮನೆಯ ಗೇಟ್‌ ಮತ್ತು ಬಾಗಿಲಿನ ಬೀಗ ಮುರಿದಿರುವುದು ಗೊತ್ತಾಗಿದೆ. ಒಳಗೆ ಪರಿಶೀಲಿಸಿದಾಗ ವಾರ್ಡ್‌ ರೋಬ್‌ನಲ್ಲಿದ್ದ ₹45,000 ಮೌಲ್ಯದ 870 ಗ್ರಾಂನ ಬೆಳ್ಳಿ ವಸ್ತುಗಳು, ₹33,000 ಮೌಲ್ಯದ 7 ಗ್ರಾಂ ತೂಕದ ಚಿನ್ನದ ಬ್ರೇಸ್‌ಲೆಟ್‌, … Read more

ಕವರ್‌ನಲ್ಲಿ ಪೆಟ್ರೋಲ್‌ ತಂದು ಅಂಗಡಿ ಮಾಲೀಕನ ಮೇಲೆ ಎಸೆದು ಬೆಂಕಿ ಹಚ್ಚಿ ಪರಾರಿಯಾದ ವ್ಯಕ್ತಿ

Police-Jeep-With-Light-New.

ಶಿವಮೊಗ್ಗ: ವೈಯಕ್ತಿಕ ದ್ವೇಷಕ್ಕೆ ಚಿಕನ್‌ ಅಂಗಡಿ ಮಾಲೀಕನ ಮೇಲೆ ಪೆಟ್ರೋಲ್‌ (petrol) ಎರಚಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಲಾಗಿದೆ. ಸೋಮಿನಕೊಪ್ಪ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ. ಚಿಕನ್‌ ಅಂಗಡಿ ಮಾಲೀಕ ಜೀಶಾನ್‌ ಕಿವಿ, ಎಡಗೈಗೆ ಬೆಂಕಿಯಿಂದ ಸುಟ್ಟ ಗಾಯವಾಗಿದೆ ಎಂದು ಆರೋಪಿಸಲಾಗಿದೆ. ಚಿಕನ್‌ ಅಂಗಡಿ ಬಳಿ ಬಂದಿದ್ದ ವಸೀಂ ಎಂಬಾತ ಜೀಶಾನ್‌ಗೆ ಅವಾಚ್ಯವಾಗಿ ನಿಂದಿಸಿದ್ದ. ಬಳಿಕ ಪ್ಲಾಸ್ಟಿಕ್‌ ಕವರ್‌ನಲ್ಲಿ ತಂದಿದ್ದ ಪೆಟ್ರೋಲ್‌ ಜೀಶಾನ್‌ ಮೈ ಮೇಲೆ ಎಸೆದು ಬೆಂಕಿ ಹಚ್ಚಿ ಓಡಿ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ಕೂಡಲೆ ಸ್ಥಳೀಯರು … Read more

ರಾತ್ರೋರಾತ್ರಿ ಒಡ್ಡಿಕೊಪ್ಪದ ಮನೆ ಬಾಗಿಲಿನ ಬೀಗ ಮುರಿದ ಕಳ್ಳರು

221025 House Theft at voddinakoppa 112 police visit the spot

ಶಿವಮೊಗ್ಗ: ದೀಪಾವಳಿ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದಾಗ ಬಾಗಿಲಿನ ಬೀಗ ಮುರಿದು ನಗದು, ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದಲ್ಲಿ ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಯಶೋದಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬಾಗಿಲಿನ ಬೀಗ ಮುರಿದು ಬೀರುವಿನಲ್ಲಿದ್ದ ₹80,000 ನಗದು, ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ದೀಪಾವಳಿ ಹಿನ್ನೆಲೆ ಯಶೋದಮ್ಮ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ವಿಷಯ ತಿಳಿದು ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ … Read more

ಬಸ್ಸಿನ ಸೀಟಿನಲ್ಲಿ ಕುಳಿತು ವ್ಯಾನಿಟಿ ಬ್ಯಾಗ್‌ ಕಡೆ ಗಮನ ಹರಿಸಿದ ಮಹಿಳೆಗೆ ಕಾದಿತ್ತು ಆಘಾತ

KSRTC-Bus-Stand-In-Shimoga

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಖದೀಮರ ಹಾವಳಿ ಮುಂದುವರೆದಿದೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ (Jewels), ನಗದು ಕಳ್ಳತನವಾಗಿದೆ ಎಂದು ಮಲ್ಲಿಗೇನಹಳ್ಳಿಯ ಬಂಗಾರಮ್ಮ ಎಂಬುವವರು ದೂರು ನೀಡಿದ್ದಾರೆ. ಬಂಗಾರಮ್ಮ ಸೊರಬದ ತಮ್ಮೂರಿಗೆ ತೆರಳಲು ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ಆಗಮಿಸಿದ್ದರು. ಆನವಟ್ಟಿಗೆ ತೆರಳುವ ಬಸ್‌ ಬಂದಿದ್ದು, ಸೀಟು ಹಿಡಿದು ಕುಳಿತಿದ್ದರು. ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದಾಗ ಬ್ಯಾಗಿನ ಜಿಪ್‌ ತೆರೆದಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ಅದರೊಳಗೆ ಇದ್ದ 25 ಗ್ರಾಂ ತೂಕದ ಒಂದು ಲಕ್ಷ ಮೌಲ್ಯದ ಕಾಸಿನ ಸರ, ₹2.29 … Read more

ಕಾರ್ಮಿಕರಿಗೆ ಹಣ ವರ್ಗಾಯಿಸಲು ಬ್ಯಾಂಕ್‌ ಅಕೌಂಟ್‌ ಪರಿಶೀಲಿಸಿದ ಉದ್ಯಮಿಗೆ ಕಾದಿತ್ತು ಶಾಕ್

Online-Fraud-Case-image

ಶಿವಮೊಗ್ಗ: ಬ್ಯಾಂಕ್‌ ಖಾತೆ (Bank Account) ಹ್ಯಾಕ್‌ ಮಾಡಿ ₹1.95 ಲಕ್ಷ ಹಣ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಶಿವಮೊಗ್ಗದ ಉದ್ಯಮಿಯೊಬ್ಬರು ಸಿ.ಇ.ಎನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮಾಚೇನಹಳ್ಳಿಯ ಕಾರ್ಖಾನೆಯೊಂದರ ಕಾರ್ಮಿಕರಿಗೆ ಹಣ ವರ್ಗಾಯಿಸಲು, ಉದ್ಯಮಿ ತಮ್ಮ  ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಿದಾಗ, ಹಣ ಇಲ್ಲದಿರುವುದು ಗಮನಕ್ಕೆ ಬಂದಿದೆ. ಬ್ಯಾಂಕಿನಲ್ಲಿ ವಿಚಾರಿಸಿದಾಗ ಅ.10ರ ರಾತ್ರಿ ಬ್ಯಾಂಕ್‌ ಖಾತೆಯನ್ನು ಹ್ಯಾಕ್‌ ಮಾಡಿ ಹಣ ವರ್ಗಾವಣೆ ಮಾಡಿಕೊಂಡಿರುವುದು ಗೊತ್ತಾಗಿದೆ. ಈ ಹಿನ್ನಲೆ ಉದ್ಯಮಿ ದೂರು ನೀಡಿದ್ದು ತನಿಖೆ … Read more

ಶಿವಮೊಗ್ಗ ಬಸ್‌ ನಿಲ್ದಾಣದಿಂದ ಬೆಳಗಿನ ಜಾವ ಮನೆಗೆ ನಡೆದು ಹೋಗುವಾಗ ಅಡ್ಡಗಟ್ಟಿದ ಬೈಕ್‌ ಸವಾರ

020921 Navule Road Light Inauguration

ಶಿವಮೊಗ್ಗ: ಬಳ್ಳಾರಿಯಿಂದ ಶಿವಮೊಗ್ಗಕ್ಕೆ ಹಿಂತಿರುಗಿದ್ದ ವ್ಯಕ್ತಿಯೊಬ್ಬರು, ಬೆಳಗಿನ ಜಾವ ಮನೆಗೆ ನಡೆದು ಹೋಗುತ್ತಿದ್ದಾಗ, ಅಪರಿಚಿತನೊಬ್ಬ ಅಡ್ಡಗಟ್ಟಿ ನಗದು, ಉಂಗುರ ಕಸಿದು (Robbery) ಪರಾರಿಯಾಗಿದ್ದಾನೆ. ನವುಲೆಯ ಸ್ವರ್ಣ ಮಿತ್ರ ಬಡಾವಣೆಯ ಕುಮಾರ್‌ ಎಂಬುವವರು ಬಳ್ಳಾರಿಯಲ್ಲಿ  ಕೆಲಸ ಮುಗಿಸಿ ಶಿವಮೊಗ್ಗಕ್ಕೆ ಹಿಂತಿರುಗಿದ್ದರು. ಬೆಳಗಿನ ಜಾವ 4.30ರ ಹೊತ್ತಿಗೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ ಇಳಿದು ಮನೆಗೆ ನಡೆದು ಹೋಗುತ್ತಿದ್ದರು. ಶಿವಬಸವ ನಗರದಲ್ಲಿ ತೆರಳುವಾಗ ಬೈಕ್‌ ನಿಲ್ಲಿಸಿಕೊಂಡಿದ್ದ ವ್ಯಕ್ತಿಯೊಬ್ಬ ಕುಮಾರ್‌ ಅವರನ್ನು ಅಡ್ಡಗಟ್ಟಿ ಬೆದರಿಕೆ ಒಡ್ಡಿದಾನೆ ಎಂದು ಆರೋಪಿಸಲಾಗಿದೆ. ಕುಮಾರ್‌ ಅವರ … Read more

ಶಿವಮೊಗ್ಗದ ಬಸ್‌ ನಿಲ್ದಾಣದಲ್ಲಿ ಯುವಕ ವಶಕ್ಕೆ, ಮೆಡಿಕಲ್‌ ಟೆಸ್ಟ್‌ ಬಳಿಕ ಅರೆಸ್ಟ್‌, ಕಾರಣವೇನು?

Shimoga-Private-Bus-Stand-Board

ಶಿವಮೊಗ್ಗ: ಖಾಸಗಿ ಬಸ್‌ ನಿಲ್ದಾಣದಲ್ಲಿ ಪೊಲೀಸರು ಅನುಮಾನದ ಮೇರೆಗೆ ಯುವಕನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಯುವಕನನ್ನು ಬಂಧಿಸಲಾಗಿದೆ (Arrest). ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದ ಪೊಲೀಸರು ಗಸ್ತು ಮಾಡುವಾಗ 3ನೇ ಪ್ಲಾಟ್‌ಫಾರಂನಲ್ಲಿ ದರ್ಶನ್‌ ಎಂಬಾತ ಅಮಲಿನಲ್ಲಿದ್ದಂತೆ ಕಾಣಿಸಿತು. ಆತನನ್ನು ವಶಕ್ಕೆ ಪಡೆದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ದೊಡ್ಡಪೇಟೆ ಠಾಣೆ ಪೊಲೀಸರು … Read more

ಶಿವಮೊಗ್ಗ KSRTC ಬಸ್‌ ನಿಲ್ದಾಣದಿಂದ ರಾತ್ರಿ ಹೊರ ಬಂದ ವಿದ್ಯಾರ್ಥಿಗೆ ಕಾದಿತ್ತು ಶಾಕ್‌, ಆಗಿದ್ದೇನು?

161025-shimoga-ksrtc-bus-stand-general-image.webp

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಒಳಗೆ ಹೋಗಿ ಬರುವಷ್ಟರಲ್ಲಿ ಸ್ಪ್ಲೆಂಡರ್‌ ಬೈಕ್‌ ಕಳ್ಳತನವಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬ (Student) ದೂರು ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿಯ ಚಂದ್ರಾನಾಯ್ಕ್‌  ರಾತ್ರಿ 9.15ಕ್ಕೆ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಅನ್ನು ಅಶೋಕ ಲಾಡ್ಜ್‌ ಮುಂಭಾಗ ನಿಲ್ಲಿಸಿದ್ದರು. ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಒಳಗೆ ಹೋಗಿ ರಾತ್ರಿ 10 ಗಂಟೆಗೆ ಹಿಂತಿರುಗಿದ್ದರು. ಈ ವೇಳೆ ಪಾರ್ಕಿಂಗ್‌ ಸ್ಥಳದಲ್ಲಿ ಬೈಕ್‌ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Read more

ಶಿವಮೊಗ್ಗ – ಭದ್ರಾವತಿ ರಸ್ತೆ, ಟೀ ಕುಡಿಯಲು ತೆರಳಿದ್ದ ಸೆಕ್ಯೂರಿಟಿಯ ಜೀವ ಕಸಿದ ಕಾರು, ಆಗಿದ್ದೇನು?

Car-Incident-at-nidige-near-jain-public-school

ಶಿವಮೊಗ್ಗ: ರಸ್ತೆ ದಾಟುವಾಗ ಕಾರು (Car) ಡಿಕ್ಕಿ ಹೊಡೆದು ಸೆಕ್ಯೂರಿಟಿ ಗಾರ್ಡ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ – ಭದ್ರಾವತಿ ರಸ್ತೆಯ ನಿದಿಗೆ ಬಸ್‌ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಭದ್ರಾವತಿಯ ಜಿಂಕ್‌ಲೈನ್‌ ರಸ್ತೆ ನಿವಾಸಿ ನಂಜುಂಡ.ಬಿ (57) ಮೃತರು. ಇಲ್ಲಿನ ಜೈನ್‌ ಪಬ್ಲಿಕ್‌ ಶಾಲೆಯಲ್ಲಿ ಸೆಕ್ಯೂರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಕರ್ತವ್ಯಕ್ಕೆ ಹಾಜರಾಗಿ ಸ್ವಲ್ಪ ಸಮಯದ ಬಳಿಕ ಟೀ ಕುಡಿಯಲು ನಂಜುಂಡ ತೆರಳಿದ್ದರು. ನಿದಿಗೆ ಬಸ್‌ ನಿಲ್ದಾಣದ ಕಡೆಗೆ ತೆರಳಲು ರಸ್ತೆ ದಾಟುವಾಗ ಮಲವಗೊಪ್ಪ ಕಡೆಯಿಂದ ಬಂದು … Read more