ಶಿವಮೊಗ್ಗದ ಮದ್ಯದಂಗಡಿಯಲ್ಲಿ 21 ಬಗೆಯ ದುಬಾರಿ ಬೆಲೆಯ ಬ್ರ್ಯಾಂಡೆಡ್‌ ಮದ್ಯ ಕಳವು, ಯಾವೆಲ್ಲ ಬ್ರ್ಯಾಂಡ್‌ ಕಳುವಾಗಿವೆ?

Expensive-Branded-bottles-theft-from-liquor-shop-in-gopala.

ಶಿವಮೊಗ್ಗ: ಮದ್ಯದಂಗಡಿಯೊಂದರ ರೋಲಿಂಗ್‌ ಶಟರ್‌ ಮೀಟಿ ತೆಗೆದು 21 ಬಗೆಯ ದುಬಾರಿ ಬೆಲೆಯ (Expensive) ಬ್ರಾಂಡೆಂಡ್‌ ಮದ್ಯದ ಬಾಟಲಿಗಳನ್ನು ಕಳ್ಳತನ ಮಾಡಲಾಗಿದೆ. ಗೋಪಾಳದ 100 ಅಡಿ ರಸ್ತೆಯಲ್ಲಿರುವ ಚನ್ನಾಂಬಿಕ ವೈನ್ಸ್‌ನಲ್ಲಿ ಘಟನೆ ಸಂಭವಿಸಿದೆ. ಅ.4ರ ರಾತ್ರಿ ಅಂಗಡಿ ಮಾಲೀಕ ಬಾಗಿಲು ಹಾಕಿ ತೆರಳಿದ್ದರು. ಮರುದಿನ ಬೆಳಗ್ಗೆ ವಾಕಿಂಗ್‌ ಬಂದಾಗ ರೋಲಿಂಗ್‌ ಶಟರ್‌ ಮೀಟಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ದುಬಾರಿ ಬೆಲೆಯ 21 ಬಗೆಯ ಮದ್ಯದ ಬಾಟಲಿಗಳು ಕಳ್ಳತನವಾಗಿರುವುದು ಗೊತ್ತಾಗಿದೆ. ಇನ್ನು, ಅಂಗಡಿಯಲ್ಲಿದ್ದ ಸಿಸಿಟಿವಿ ಡಿವಿಆರ್‌ ಕೂಡ ಕಳುವಾಗಿದೆ ಎಂದು … Read more

ಶಿವಮೊಗ್ಗ ಸಿಟಿಯಲ್ಲಿ ಇಬ್ಬರಿಗೆ ಇರಿತ, ಗಂಭೀರ ಗಾಯ, ಘಟನೆಗೆ ಕಾರಣವೇನು?

Crime-News-General-Image

ಶಿವಮೊಗ್ಗ: ವೈಯಕ್ತಿಕ ವಿಚಾರಕ್ಕೆ ಶಿವಮೊಗ್ಗ ನಗರದಲ್ಲಿ ಇಬ್ಬರು ಯುವಕರಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ (stabbing). ಗಂಭೀರ ಗಾಯಗೊಂಡಿರುವ ಯುವಕರನ್ನು ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಬ್ಬೀರ್‌ ಮತ್ತು ಶಹಬಾಜ್‌ ಎಂಬುವವರು ಗಾಯಗೊಂಡಿದ್ದಾರೆ. ನಗರದ ಊರುಗಡೂರು ಬಡಾವಣೆಯಲ್ಲಿ ಇಂದು ಘಟನೆ ಸಂಭವಿಸಿದೆ. ವೈಯಕ್ತಿಕ ಕಾರಣಕ್ಕೆ ಗಲಾಟೆ, ಇರಿತ ಇನ್ನು, ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ‘ವೈಯಕ್ತಿಕ ವಿಷಯಕ್ಕೆ ಘಟನೆ ಸಂಭವಿಸಿದೆ. ಶಬ್ಬೀರ್‌ನ ಸಹೋದರಿಯ ಗಂಡ ಫಾರ್ದಿನ್‌, ಆತನ ಸಹೋದರ ಮತ್ತು … Read more

BREAKING NEWS – ಶಿವಮೊಗ್ಗದಲ್ಲಿ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ಒಬ್ಬನ ಸ್ಥಿತಿ ಗಂಭೀರ

021025-Amjad-Admitted-to-maxx-hospital.webp

ಶಿವಮೊಗ್ಗ: ನಗರದಲ್ಲಿ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ (Attack) ನಡೆಸಿದ್ದಾರೆ. ಟೆಂಪೊ ಸ್ಟಾಂಡ್‌ ಸಮೀಪ ಇಂದು ರಾತ್ರಿ ಘಟನೆ ಸಂಭವಿಸಿದೆ. ಅಮ್ಜದ್ (38) ಗಂಭೀರ ಗಾಯಗೊಂಡಿದ್ದು ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಹಿದ್ ಎಂಬಾತನ ಜೊತೆಗೆ ಮಾತನಾಡುತ್ತ ನಿಂತಿದ್ದಾಗ ಅಮ್ಜದ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೈಗಳು, ಹೊಟ್ಟೆ ಭಾಗಕ್ಕೆ ತೀವ್ರ ಸ್ವರೂಪದ ಗಾಯವಾಗಿದೆ. ಘಟನೆ ಬೆನ್ನಿಗೆ ಕೂಡಲೆ ಅಮ್ಜದ್‌‌ನನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೊಂದೆಡೆ ಶಾಹಿದ್ ಕೂಡ ಗಾಯಗೊಂಡಿದ್ದು … Read more

ಶಿವಮೊಗ್ಗದಲ್ಲಿ ಬಸ್‌ ಹತ್ತಿದ ಕೆಲವೇ ಕ್ಷಣದಲ್ಲಿ ಚನ್ನಗಿರಿಯ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-General-Image

ಶಿವಮೊಗ್ಗ: ನಗರದ KSRTC ಬಸ್‌ ನಿಲ್ದಾಣದಲ್ಲಿ ಕಳ್ಳರ ಹಾವಳಿ ಮುಂದುವರೆದಿದೆ. ಬಸ್‌ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ ಹಣ ಲಪಟಾಯಿಸಿದ್ದಾರೆ. ಚನ್ನಗಿರಿಯ ನಾಗರಾಜ್‌ ಎಂಬುವವರು ಶಿವಮೊಗ್ಗದ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯಲ್ಲಿ ತಮ್ಮ ತಾಯಿಯನ್ನು ಚಿಕಿತ್ಸೆಗೆ ಕರೆತಂದಿದ್ದರು. ಸಂಜೆ ಊರಿಗೆ ಮರಳಲು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಆಗಮಿಸಿದ್ದರು. ಬಸ್‌ ಹತ್ತುವಾಗ ರಶ್‌ ಇತ್ತು. ಬಸ್‌ ಹತ್ತಿದ ಮೇಲೆ ಜೇಬಿಗೆ ಕೈ ಹಾಕಿದಾಗ ಅದರಲ್ಲಿದ್ದ ₹34,000 ಹಣ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ಎಲ್ಲೆಡೆ ಹುಡುಕಿದ ನಾಗರಾಜ್‌ ಅವರು ಕೊನೆಗೆ ದೂರು … Read more

ಶಿವಮೊಗ್ಗದ ಶಿಕ್ಷಕಿಗೆ ಲಕ್ಷ ಲಕ್ಷ ವಂಚನೆ, ಹೇಗಾಯ್ತು ಮೋಸ?

Online-Fraud-Case-image

ಶಿವಮೊಗ್ಗ: ಹೆಚ್ಚುವರಿ ಅದಾಯ, ಅಧಿಕ ಲಾಭದ ಆಮಿಷವೊಡ್ಡಿ ಸೈಬರ್‌ ವಂಚಕರು ನಿತ್ಯ ಹಲವರನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳುತ್ತಿದ್ದಾರೆ. ಹೊಟೇಲ್‌ಗಳಿಗೆ ರಿವ್ಯು (Hotel Review) ಬರೆದು ಹಣ ಸಂಪಾದಿಸಬಹುದು ಎಂದು ನಂಬಿಸಿ ಶಿವಮೊಗ್ಗ ಜಿಲ್ಲೆಯ ಶಿಕ್ಷಕಿಗೆ ₹11.35 ಲಕ್ಷ ವಂಚಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕ್ಷಕಿಗೆ ವಾಟ್ಸಪ್‌ಗೆ ಹೊಟೇಲ್‌ ರಿವ್ಯು ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಲಿಂಕ್‌ ಜೊತೆ ಅಪರಿಚತ ನಂಬರ್‌ನಿಂದ ಮೆಸೇಜ್‌ ಬಂದಿತ್ತು. ಲಿಂಕ್‌ ಕ್ಲಿಕ್‌ ಮಾಡಿದಾಗ ಟೆಲಿಗ್ರಾಂ ಆಪ್‌ನಲ್ಲಿ ಗ್ರೂಪ್‌ ಒಂದಕ್ಕೆ ಜಾಯಿನ್‌ ಮಾಡಲಾಯಿತು. ಹಣ … Read more

ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಜೈಲು, ಈತ ಮಾಡಿದ ಅಪರಾಧವೇನು?

Shivamogga-Court-Balaraja-Urs-Road

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ವಿವಾಹವಾಗಿದ್ದ 19 ವರ್ಷದ ಯುವಕನಿಗೆ (Youth) 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಏನಿದು ಪ್ರಕರಣ? 19 ವರ್ಷದ ಯುವಕನೊಬ್ಬ 2022ರಲ್ಲಿ ಭದ್ರಾವತಿ ತಾಲೂಕಿನ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಆಕೆಯನ್ನು ಮದುವೆಯಾಗಿದ್ದ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಬಾಲಕಿ ದೂರು ನೀಡಿದ್ದಳು. ತನಿಖೆ ನಡೆಸಿದ ಆಗಿನ ಇನ್ಸ್‌ಪೆಕ್ಟರ್‌ ಅಭಯ ಪ್ರಕಾಶ್‌ ಸೋಮನಾಳ್‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ … Read more

ವಿಡಿಯೋ ಕರೆಯಲ್ಲೆ ಶಿವಮೊಗ್ಗದ ವ್ಯಕ್ತಿ ಅರೆಸ್ಟ್‌, ಹುಷಾರ್‌ ಮುಂದಿನ ಟಾರ್ಗೆಟ್‌ ನೀವೆ, ಏನಿದು ಕೇಸ್‌?

Online-Fraud-Case-image

ಶಿವಮೊಗ್ಗ: ಡಿಜಿಟಲ್‌ ಅರೆಸ್ಟ್‌ (Digital Arrest) ಮಾಡಿ ಜನರಲ್ಲಿ ಆತಂಕ ಮೂಡಿಸಿ ಹಣ ವಸೂಲಿ ಮಾಡುತ್ತಿದ್ದ ಆನ್‌ಲೈನ್‌ ವಂಚಕರು ಈಗ ವಂಚನೆಯ ಸ್ವರೂಪ ಬದಲಿಸಿದ್ದಾರೆ. ವಿಡಿಯೋ ಕಾಲ್‌ನಲ್ಲೇ ಅರೆಸ್ಟ್‌ ಮಾಡಿ, ವಿಡಿಯೋ ಕಾಲ್‌ನಲ್ಲೇ ಬೇಲ್‌ ಕೊಡಿಸಿ ಹಣ ಪಡೆದು ವಂಚಿಸುತ್ತಿದ್ದಾರೆ. ಇಂತಹುದೇ ಪ್ರಕರಣದಲ್ಲಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ₹19 ಲಕ್ಷ ವಂಚಿಸಲಾಗಿದೆ. ಟಾರ್ಗೆಟ್‌ ಆದ ನಿವೃತ್ತ ಉದ್ಯೋಗಿ ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರನ್ನು ಗುರಿಯಾಗಿಸಿ ವಾಟ್ಸಪ್‌ನಲ್ಲಿ ವಿಡಿಯೋ ಕಾಲ್‌ ಮಾಡಲಾಗಿದೆ. ಮುಂಬೈನ ಕೊಲಾಬ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಶಿಖಾವತ್‌ ಎಂದು … Read more

ಕಂತೆ ಕಂತೆ ಹಣ, ಲಕ್ಷ ಲಕ್ಷ ಮೌಲ್ಯದ ಆಭರಣ ಸಹಿತ ಶಿವಮೊಗ್ಗದಲ್ಲಿ ಆಟೋ ಚಾಲಕ ಅರೆಸ್ಟ್‌

Auto-Driver-Arrested-with-money-and-jewels.

ಶಿವಮೊಗ್ಗ: ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ಕಂತೆ ಕಂತೆ ಹಣ (Money), ಲಕ್ಷಾಂತರ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್‌ನ ಮನೆಯೊಂದರಲ್ಲಿ ಸೆ.17ರಂದು ಹಗಲು ಹೊತ್ತಿನಲ್ಲೆ ಕಳ್ಳತನವಾಗಿತ್ತು. ತನಿಖೆ ನಡೆಸಿದ ಪೊಲೀಸರು ಗೋಪಾಳ ನಿವಾಸಿ ಆಟೋ ಚಾಲಕ ಅಶ್ರಫ್‌ ವುಲ್ಲಾ (35) ಎಂಬಾತನನ್ನು ಬಂಧಿಸಿದ್ದಾರೆ. ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತನಿಂದ ₹22.74 ಲಕ್ಷ ನಗದು, ₹11.70 ಲಕ್ಷ ಮೌಲ್ಯದ 130 ಗ್ರಾಂ ಚಿನ್ನದ ಆಭರಣ, ₹65 … Read more

ಎರಡು ಬ್ಯಾಂಕ್‌ಗಳಲ್ಲಿ ಪಾಸ್‌ ಬುಕ್‌ ಎಂಟ್ರಿ ಮಾಡಿಸಿದಾಗ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ಬಿಗ್‌ ಶಾಕ್‌

Online-Fraud-Case-image

ಶಿವಮೊಗ್ಗ: ವ್ಯಕ್ತಿಯೊಬ್ಬರ ಎರಡು ಬ್ಯಾಂಕ್‌ ಖಾತೆಗಳಿಂದ ₹3.26 ಲಕ್ಷ ಹಣವನ್ನು ಅವರಿಗೆ ಗೊತ್ತಿಲ್ಲದಂತೆ ವರ್ಗಾವಣೆ (Money Transfer) ಮಾಡಿಕೊಳ್ಳಲಾಗಿದೆ. ಹೊರ ರಾಜ್ಯದ ಪ್ರವಾಸದಲ್ಲಿದ್ದ ಅವರು ತಮ್ಮ ತಂದೆ ಮೂಲಕ ಶಿವಮೊಗ್ಗದಲ್ಲಿ ಬ್ಯಾಂಕ್‌ ಪಾಸ್‌ ಬುಕ್‌ ಎಂಟ್ರಿ ಮಾಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗದ ವ್ಯಕ್ತಿಯ ಎಸ್‌ಬಿಐ ಬ್ಯಾಂಕ್‌ ಖಾತೆಯಿಂದ ಐದು ಬಾರಿ ಒಟ್ಟು ₹84,500 ಹಣ ವರ್ಗಾಯಿಸಿಕೊಳ್ಳಲಾಗಿದೆ. ಹೆಚ್‌ಡಿಎಫ್‌ಸಿ ಬ್ಯಾಂಕ್‌ ಖಾತೆಯಿಂದ ₹2.41 ಲಕ್ಷ ಹಣವನ್ನು ಬೇರೊಂದು ಖಾತೆ ವರ್ಗಾವಣೆ ಮಾಡಿಕೊಂಡಿರುವುದು ಗೊತ್ತಾಗಿದೆ. ಬ್ಯಾಂಕ್‌ ಖಾತೆಯನ್ನು ಹ್ಯಾಕ್‌ … Read more

ಸಾನಿಯಾ ಕಪೂರ್‌ ಮೆಸೇಜ್‌ಗೆ ಶಿವಮೊಗ್ಗದ ವ್ಯಕ್ತಿ ಕಳೆದುಕೊಂಡಿದ್ದು ಬರೋಬರಿ ₹55 ಲಕ್ಷ, ಏನಿದು ಕೇಸ್‌?

SMS-Fraud-Shimoga-CEN-Police-Station.

ಶಿವಮೊಗ್ಗ: ಷೇರು ಮಾರುಕಟ್ಟೆಯಲ್ಲಿ (Share Market) ಹಣ ಹೂಡಿಕೆ ಮಾಡಿ ಅಧಿಕ ಲಾಭಾಂಶ ಗಳಿಸಬಹುದು ಎಂದು ನಂಬಿಸಿ ಲಕ್ಷ ಲಕ್ಷ ವಂಚಿಸುತ್ತಿರುವ ಪ್ರಕರಣ ಮತ್ತಷ್ಟು ವರದಿಯಾಗುತ್ತಿವೆ. ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ಷೇರು ಮಾರುಕಟ್ಟೆ ಮತ್ತು ಲಾಭಾಂಶದ ಹೆಸರಿನಲ್ಲಿ ₹55 ಲಕ್ಷ ವಂಚಿಸಲಾಗಿದೆ. ಹೇಗಾಯ್ತು ವಂಚನೆ? ಸಾನಿಯಾ ಕಪೂರ್‌ ಎಂಬ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ವಾಟ್ಸಪ್‌ ಮೆಸೇಜ್‌ ಬಂದಿತ್ತು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಲಾಗಿತ್ತು. ಇದನ್ನು ನಂಬಿದ ವ್ಯಕ್ತಿ ಹಣ ಹೂಡಿಕೆ ಮಾಡಿದ್ದರು. … Read more