ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು

Prakash-Bus-and-Car-mishap-at-anandapura

ಸಾಗರ: ಖಾಸಗಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು (Mishap) ಇಬ್ಬರು ಗಾಯಗೊಂಡಿದ್ದಾರೆ. ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಇದನ್ನೂ ಓದಿ » ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ ಕೆರೆ ಏರಿ ಮೇಲೆ ಅಪಘಾತ ಸಂಭವಿಸಿದ್ದು ಕಾರಿನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್‌ ಮತ್ತು ಭರತ್‌ ಎಂಬುವವರಿಗೆ ಗಾಯವಾಗಿದೆ. ಬಸ್ಸಿನ ಮುಂಭಾಗಕ್ಕು ಹಾನಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಕೆರೆಯ ತಡೆಗೋಡೆ ಮೇಲೆ ನಿಂತಿದೆ. ಬಸ್ಸು ರಸ್ತೆಯ ಬದಿಗೆ ಸರಿದಿದೆ. … Read more

ಶಿವಮೊಗ್ಗ ಜೈಲಿನಿಂದ ಕೋರ್ಟ್‌ಗೆ ಹೊರಟಿದ್ದ ಖೈದಿಯ ಜೇಬಿಗೆ ಕೈ ಹಾಕಿದ ಸಿಬ್ಬಂದಿಗೆ ಕಾದಿತ್ತು ಶಾಕ್‌, ಸಿಕ್ಕಿದ್ದೇನು?

Shimoga-Central-Jail-Prison

ಶಿವಮೊಗ್ಗ: ಖೈದಿಯೊಬ್ಬನ ಹೊಟ್ಟೆಯೊಳಗೆ ಮೊಬೈಲ್‌ ಫೋನ್‌ ಪತ್ತೆಯಾಗಿ ಅಚ್ಚರಿ ಮೂಡಿಸಿತ್ತು. ಇದರ ಬೆನ್ನಿಗೆ ಮತ್ತೊಬ್ಬ ಖೈದಿ ಬಳಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಮ್‌ ಕಾರ್ಡ್‌ (Sim Card) ಮತ್ತು ತಗಡಿನ ವಸ್ತು ಸಿಕ್ಕಿದೆ. ಮೊಬೈಲ್‌ ನುಂಗಿದ್ದ ಖೈದಿ 10 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಖೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಇದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಮೂಡಿಸಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ಮೊದಲು ಸುದ್ದಿ ಪ್ರಕಟಿಸಿತ್ತು. ಶಿವಮೊಗ್ಗ ಜೈಲಿನ ಖೈದಿಯ … Read more

ಶಿವಮೊಗ್ಗದ ಲೇಔಟ್‌ ಮೇಲೆ ಪೊಲೀಸ್‌ ರೇಡ್‌, ಗಾಂಜಾ ಪ್ಯಾಕಿಂಗ್‌ ಮಾಡ್ತಿದ್ದ ಇಬ್ಬರು ಅರೆಸ್ಟ್‌

Police-nabbed-two-in-a-layout-at-Shimoga

ಶಿವಮೊಗ್ಗ: ವಡ್ಡಿನಕೊಪ್ಪದ ನಿರ್ಮಾಣ ಹಂತದ ಲೇಔಟ್‌ವೊಂದರ ರಸ್ತೆಯಲ್ಲಿ ಗಾಂಜಾ ಪ್ಯಾಕಿಂಗ್ ಮಾಡುತ್ತಿದ್ದಾಗ ಪೊಲೀಸರು ದಾಳಿ (Raid) ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಆಶ್ರಯ ಬಡಾವಣೆಯ ಕಾರ್ತಿಕ್ (21) ಮತ್ತು ಕಡೇಕಲ್‌ನ ರಾಜು (24) ಬಂಧಿತರು. ಇದನ್ನೂ ಓದಿ » ಇನ್ಮುಂದೆ KSRTC ಬಸ್ಸುಗಳಲ್ಲಿ ಯದ್ವತದ್ವ ಲಗೇಜ್‌ ಕೊಂಡೊಯ್ಯುವಂತಿಲ್ಲ, ಜಾರಿಗೆ ಬಂದಿದೆ ಲಗೇಜ್‌ ನೀತಿ ಆರೋಪಿಗಳು ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಗಾಂಜಾ ತುಂಬುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಅವರಿಂದ ₹1.70 ಲಕ್ಷ ಮೌಲ್ಯದ 5.780 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಸಿಇಎನ್ … Read more

ಫೋನ್‌ ಪೇಯಲ್ಲಿ ಕರೆಂಟ್‌ ಬಿಲ್‌ ಕಟ್ಟಿದ ಶಿವಮೊಗ್ಗದ ವಕ್ತಿಗೆ ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್

Online-Fraud-Case-image

ಶಿವಮೊಗ್ಗ: ಮೊಬೈಲ್‌ ನಂಬರನ್ನೇ ಹ್ಯಾಕ್‌ ಮಾಡಿ ಗೂಗಲ್‌ ಪೇ, ಫೋನ್‌ ಪೇ (Phone Pay) ಮೂಲಕ ಸಾವಿರಾರು ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಶಿವಮೊಗ್ಗದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ಈ ಸಂಬಂಧ ಜಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಶಿವಮೊಗ್ಗದ ವ್ಯಕ್ತಿ ಕಳೆದ ತಿಂಗಳು ವಿದ್ಯುತ್‌ ಬಿಲ್‌ ₹754‌ ಅನ್ನು ಫೋನ್‌ ಪೇ ಮೂಲಕ ಪಾವತಿಸಿದ್ದರು. ಅವರ ಬ್ಯಾಂಕ್‌ ಖಾತೆಯಲ್ಲಿ ₹94,624 ಬ್ಯಾಲೆನ್ಸ್‌ ಇರುವುದಾಗಿ ತಿಳಿಸಲಾಗಿತ್ತು. ಬೇರೊಂದು ಕಡೆ ಫೋನ್‌ ಪೇ ಸ್ಕ್ಯಾನರ್‌ ಬಳಸುವಾಗ ಅದು ಸರಿಯಾಗಿ … Read more

ಶಿವಮೊಗ್ಗದ ವ್ಯಕ್ತಿಗೆ ಬೆಂಗಳೂರಿನ ಫೈನಾನ್ಸ್‌ ಸಂಸ್ಥೆಯಿಂದ ಬಂತು ಫೋನ್‌, ಆಮೇಲೆ ಕಾದಿತ್ತು ಬಿಗ್‌ ಶಾಕ್‌

Police-Van-Jeep-at-Shimoga-Nehru-Road

ಶಿವಮೊಗ್ಗ: ಕಾರ್ಖಾನೆಯೊಂದರ ನೌಕರರೊಬ್ಬರಿಗೆ ಫೈನಾನ್ಸ್‌ (Finance) ಸಂಸ್ಥೆಯ ಹೆಸರಿನಲ್ಲಿ ಕರೆ ಮಾಡಿ, ಸಾಲ ನೀಡುವುದಾಗಿ ನಂಬಿಸಿ, ಬಳಿಕ ನಾನಾ ಕಾರಣಕ್ಕೆ ಹಣ ಪಾವತಿಸಿಕೊಂಡು ವಂಚಿಸಲಾಗಿದೆ. ಸಾಲ ಸಿಗುವ ಭರವಸೆಯಲ್ಲಿ ಕಾರ್ಖಾನೆ ನೌಕರ ₹4.13 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಕಾರ್ಖಾನೆ ನೌಕರರೊಬ್ಬರಿಗೆ (ಹೆಸರು ಗೌಪ್ಯ) ಫೈನಾನ್ಸ್‌ ಸಂಸ್ಥೆಯೊಂದರ ಬೆಂಗಳೂರು ಶಾಖೆಯ ಪ್ರತಿನಿಧಿ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ಸಾಲದ ಅಗತ್ಯವಿದ್ದರೆ ಒದಗಿಸುವುದಾಗಿ ನಂಬಿಸಿದ್ದರು. ತುರ್ತು ಹಣದ ಅವಶ್ಯಕತೆ ಇದ್ದಿದ್ದರಿಂದ ನೌಕರ ಸಾಲ ಬೇಕು ಎಂದು ಒಪ್ಪಿಕೊಂಡಿದ್ದರು. ಇದನ್ನೂ … Read more

ಶಿವಮೊಗ್ಗ ಜೈಲಿನ ಖೈದಿಯ ಹೊಟ್ಟೆಯೊಳಗೆ ಮೊಬೈಲ್‌ ಫೋನ್‌ ಪತ್ತೆ..!

Shimoga-Central-Jail-Prison

ಶಿವಮೊಗ್ಗ: ಸೋಗಾನೆಯ ಕೇಂದ್ರ ಕಾರಾಗೃಹದ ಖೈದಿಯೊಬ್ಬನ (Inmate) ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್‌ ಫೋನ್‌ ಹೊರಗೆ ತೆಗೆಯಲಾಗಿದೆ. ಖೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಕಲ್ಲು ನುಂಗಿದ್ದೀನಿ ಅಂತಾ ಆಸ್ಪತ್ರೆಗೆ ಬಂದ ಪ್ರಕರಣವೊಂದರಲ್ಲಿ ದೌಲತ್‌ ಅಲಿಯಾಸ್‌ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್‌ 24ರಂದು ಜೈಲಿನ ಆಸ್ಪತ್ರೆಗೆ … Read more

ಪತ್ನಿಯ ಮೂಗನ್ನೆ ಕಚ್ಚಿ ತುಂಡರಿಸಿದ ಪತಿ, ಶಿವಮೊಗ್ಗದ ಆಸ್ಪತ್ರೆಗೆ ದಾಖಲಾದ ಮಹಿಳೆ

Crime-News-General-Image

ಶಿವಮೊಗ್ಗ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೆ ಪತ್ನಿಯ ಮೂಗನ್ನು (Nose) ಕಚ್ಚಿ ತುಂಡರಿಸಿದ್ದಾನೆ. ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ತುಂಡಾದ ಮೂಗಿನೊಂದಿಗೆ ಪತ್ನಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಸಾಲದ ವಿಚಾರವಾಗಿ ಕಿರಿಕ್ ವಿಜಯ್ ಮತ್ತು ವಿದ್ಯಾ ದಂಪತಿ ಧರ್ಮಸ್ಥಳ ಸ್ವಸಹಾಯ ಸಂಘದಿಂದ ₹2 ಲಕ್ಷ ಸಾಲ ಪಡೆದಿದ್ದರು. ಇಬ್ಬರು ಸೇರಿ ಕಂತು ಕಟ್ಟುತ್ತಿದ್ದರು. ಕಳೆದ ಎರಡು ವಾರ ಹಣವಿಲ್ಲದ್ದರಿಂದ ವಿದ್ಯಾ ಸಾಲದ ಕಂತು ಪಾವತಿಸಿರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಂಘದವರು ಪತಿ … Read more

BREAKING NEWS – ಶಿವಮೊಗ್ಗದಲ್ಲಿ ಯುವಕನ ಕೊಲೆ, ಸ್ಥಳಕ್ಕೆ ಪೊಲೀಸರು ದೌಡು

Murder-at-Bommanakatte-E-Block-in-Shimoga.

ಶಿವಮೊಗ್ಗ: ರಾತ್ರಿ ಪಾರ್ಟಿ ವೇಳೆ ಗಲಾಟೆಯಾಗಿ ಸ್ನೇಹಿತನೆ (friends) ಯುವಕನ ಕೊಲೆ ಮಾಡಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಘಟನೆ ಸಂಭವಿಸಿದೆ. ಬೊಮ್ಮನಕಟ್ಟೆ ಎ-ಬ್ಲಾಕ್‌ ನಿವಾಸಿ ಪವನ್‌ (28) ಕೊಲೆಯಾದ ಯುವಕ. ಪವನ್‌, ಕಳೆದ ರಾತ್ರಿ ಸ್ನೇಹಿತ ಶಿವಕುಮಾರ್‌ ಮನೆಯಲ್ಲಿ ಪಾರ್ಟಿಗೆ ತೆರೆಳಿದ್ದ. ಮದ್ಯ ಸೇವಿಸಿದ ಬಳಿಕ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ ಎಂದು ಆರೋಪಿಸಲಾಗಿದೆ. ಗಲಾಟೆಯಲ್ಲಿ ಪವನ್‌ ಹತ್ಯೆಯಾಗಿದೆ. ಘಟನೆ ಸಂಬಂಧ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. … Read more

ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

Police-Jeep-at-Shimoga-General-Image

ಶಿವಮೊಗ್ಗ: ಮನೆಯಲ್ಲಿದ್ದವರು ಕೆಲಸಕ್ಕೆ ತೆರಳಿದಾಗ ಬಾಗಲಿನ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ನಗದು ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪ ಸಮೀಪದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಘಟನೆ ಸಂಭವಿಸಿದೆ. ಯೋಗೇಂದ್ರಪ್ಪ ಎಂಬುವವರ ಮನೆಯ ಗೇಟ್‌ಗೆ ಹಾಕಿದ್ದ ಬೀಗ, ಬಾಗಿಲಿನಿಂದ ಮುಂದಿದ್ದ ಕಬ್ಬಿಣ್ಣದ ಬಾಗಿಲಿನ ಇಂಟರ್‌ ಲಾಕ್‌, ಬಾಗಿಲಿನ ಬೀಗ ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ಕೊಠಡಿಯ ಬೀರುವಿನ ಲಾಕ್‌ ಮುರಿದು ಕಳ್ಳತನ ಮಾಡಿದ್ದಾರೆ. ವಿನೋಬನಗರ ಪೊಲೀಸ್‌ ಚೌಕಿ ಸಮೀಪ ಯೋಗೇಂದ್ರಪ್ಪ ಅವರು ಡಯೋಗ್ನಸ್ಟಿಕ್‌ … Read more

ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

Crime-News-General-Image

ಶಿವಮೊಗ್ಗ: ಸಿಟಿ ಬಸ್‌ (City Bus) ಕಂಡಕ್ಟರ್‌ ಒಬ್ಬರ ಮೇಲೆ ಮತ್ತೊಂದು ಬಸ್ಸಿನ ಕಂಡಕ್ಟರ್‌ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗೋಪಾಳದ ಕೊನೆ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಎಸ್‌.ಬಿ.ಎಂ. ಸಿಟಿ ಬಸ್ಸಿನ ಕಂಡಕ್ಟರ್‌ ರಾಘವೇಂದ್ರ ಎಂಬುವವರ ಮೇಲೆ ಹಲ್ಲೆಯಾಗಿದೆ. ಇದನ್ನೂ ಓದಿ » ದೆವ್ವ ಬಿಡಿಸೋದಾಗಿ ಕೋಲಲ್ಲಿ ಹೊಡೆದು ಹಿಂಸೆ, ನೀರಿಗಾಗಿ ಅಂಗಲಾಚುತ್ತ ಪ್ರಾಣ ಬಿಟ್ಟ ಮಹಿಳೆ, ವಿಡಿಯೋ ವೈರಲ್‌ ನಿಲ್ದಾಣದಿಂದ ಬಸ್‌ ತಡವಾಗಿ ಹೊರಟಿದೆ ಎಂದು ಹಿಂದಿನ ಬಸ್ಸಿನ ಕಂಡಕ್ಟರ್‌ ಆರೋಪಿಸಿದ್ದಾರೆ. … Read more