ಮಹಿಳೆಗೆ 3 ವರ್ಷ, ಯುವಕನಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಏನಿದು ಕೇಸ್‌?

Imprisonment-for-Shikaripura-lady-and-a-youth

ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ ಸಬೀತಾದ ಹಿನ್ನೆಲೆ ಓರ್ವ ಮಹಿಳೆ ಸೇರಿ ಇಬ್ಬರಿಗೆ ಜೈಲು (Imprisonment) ಶಿಕ್ಷೆ ಮತ್ತು ದಂಡ ವಿಧಿಸಿ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಶಿಕಾರಿಪುರದ ಯಾಸೀರ್‌ ಪಾಷಾ (27) ಎಂಬಾತನಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹50 ಸಾವಿರ ದಂಡ ವಿಧಿಸಲಾಗಿದೆ. ಶಹಜಾನ್‌ ಅಲಿಯಾಸ್‌ ಸಾನಿಯಾ ಬೇಗಂಗೆ (52) ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹25 ಸಾವಿರ ದಂಡ ವಿಧಿಸಲಾಗಿದೆ ಎಂದು ಪೊಲೀಸ್‌ ಇಲಾಖೆ … Read more

ವಾಟ್ಸಪ್‌ ಗ್ರೂಪ್‌ ಅಡ್ಮಿನ್‌ಗೆ ಮೆಸೇಜ್‌ ಮಾಡಿದ್ದ ಟೀಚರ್‌ಗೆ ಕಾದಿತ್ತು ಆಘಾತ, ಠಾಣೆಗೆ ದೌಡು, ಆಗಿದ್ದೇನು?

Online-Fraud-Case-image

ಶಿವಮೊಗ್ಗ: ಷೇರು ವ್ಯವಹಾರದಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗ ಜಿಲ್ಲೆಯ ಶಿಕ್ಷಕಿಯೊಬ್ಬರಿಗೆ (ಹೆಸರು ಗೌಪ್ಯ) ₹40.85 ಲಕ್ಷ ವಂಚಿಸಲಾಗಿದೆ (Scam). ಇನ್‌ಸ್ಟಾಗ್ರಾಂನಲ್ಲಿ ಷೇರುಗಳಲ್ಲಿ ಹೂಡಿಕೆ ಕುರಿತು ಉಚಿತ ಸಲಹೆ ಎಂಬ ಜಾಹೀರಾತು ಇತ್ತು. ಅದರ ಮೇಲೆ ಕ್ಲಿಕ್‌ ಮಾಡಿದಾಗ ಶಿಕ್ಷಕಿಯ ಮೊಬೈಲ್‌ ನಂಬರ್‌ ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಸೇರ್ಪಡೆಯಾಗಿತ್ತು. ಅಲ್ಲಿ ಹಲವರು ಷೇರಿನಲ್ಲಿ ಹೂಡಿಕೆ ಮಾಡಿದ ಲಾಭ ಗಳಿಸಿರುವ ಕುರಿತು ಮಾಹಿತಿ ಹಂಚಿಕೊಳ್ಳುತ್ತಿದ್ದರು. ಈ ಹಿನ್ನೆಲೆ ಶಿಕ್ಷಕಿಯು ವಾಟ್ಸಪ್‌ ಗ್ರೂಪ್‌ನ ಅಡ್ಮಿನ್‌ಗೆ ಮೆಸೇಜ್‌ … Read more

ಸೋಮಿನಕೊಪ್ಪ ಫ್ಲೈ ಓವರ್‌ ಕೆಳಗೆ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ ಮೇಲೆ ಅಟ್ಯಾಕ್‌, ಆಗಿದ್ದೇನು?

crime name image

ಶಿವಮೊಗ್ಗ: ಸಾಫ್ಟ್‌ವೇರ್‌ ಇಂಜಿನಿಯರ್‌ (Engineer) ಮೇಲೆ ಸೋಮಿನಕೊಪ್ಪ ಫ್ಲೈಓವರ್‌ ಅಡಿ ಹಲ್ಲೆ ನಡೆಸಲಾಗಿದೆ. ಅವರ ಕಾರಿನ ಗಾಜನ್ನು ಒಡೆಯಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಸಾಫ್ಟ್‌ವೇರ್‌ ಕಂಪನಿಯ ಇಂಜಿನಿಯರ್‌ ಲೋಕೇಶ್‌ ಎಂಬುವವರ ಮೇಲೆ ಹಲ್ಲೆಯಾಗಿದೆ. ‌ ಹಿಂಬಾಲಿಸಿ ಬಂದು ಅಟ್ಯಾಕ್‌ ನಗರದ ಕ್ಲಬ್‌ ಒಂದರಲ್ಲಿ ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸಿ ಲೋಕೇಶ್‌ ಮತ್ತು ಅವರ ಸ್ನೇಹಿತ ಕಾರಿನಲ್ಲಿ ವಿನೋಬನಗರದ ಮನೆಗೆ ತೆರಳುತ್ತಿದ್ದರು. ಗೋಪಿ ಸರ್ಕಲ್‌ನಲ್ಲಿ ವಿಜಯೋತ್ಸವ ನಡೆಯುತ್ತಿತ್ತು. ರಸ್ತೆಯಲ್ಲಿ ಯುವಕರ ಇದ್ದಿದ್ದರಿಂದ … Read more

ಸಾಲದ ಕಂತು ಕಟ್ಟದ ಗ್ರಾಹಕನನ್ನು ಸಂಪರ್ಕಿಸಿದ ಬಜಾಜ್‌ ಫೈನಾನ್ಸ್‌ ಸಿಬ್ಬಂದಿಗೆ ಕಾದಿತ್ತು ಶಾಕ್‌, ದಾಖಲಾಯ್ತು ಕೇಸ್‌

Crime-News-General-Image

ಶಿವಮೊಗ್ಗ: ಹಿಂದಿನ ಗ್ರಾಹಕರೊಬ್ಬರ ಸೋಗಿನಲ್ಲಿ ವೈಯಕ್ತಿಕ ಸಾಲ ಪಡೆದು ಕಂತು ಕಟ್ಟದೆ ಬಜಾಜ್‌ ಫೈನಾನ್ಸ್‌ (finance) ಸಂಸ್ಥೆಗೆ ವಂಚಿಸಲಾಗಿದೆ. ಈ ಸಂಬಂಧ ಸಂಸ್ಥೆಯ ಮ್ಯಾನೇಜರ್‌ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಬಜಾಜ್‌ ಫೈನಾನ್ಸ್‌ನಿಂದ ಚಂದ್ರಶೇಖರ್‌ ಎಂಬುವವರ ಹೆಸರಿನಲ್ಲಿ ₹6.15 ಲಕ್ಷ ವೈಯಕ್ತಿಕ ಸಾಲ ನೀಡಲಾಗಿತ್ತು. ಕಂತು ಕಟ್ಟದ ಹಿನ್ನೆಲೆ ಚಂದ್ರಶೇಖರ್‌ ಅವರನ್ನು ವಿಚಾರಿಸಿದಾಗ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಆಗಿದ್ದು ಹೇಗೆ? ಚಂದ್ರಶೇಖರ್‌ ಎಂಬುವವರು ಈ ಹಿಂದೆ ಬಜಾಜ್‌ ಫೈನಾನ್ಸ್‌ ಸಂಸ್ಥೆಯಲ್ಲಿ ಎರಡು ಬಾರಿ ಸಾಲ … Read more

ಅಡಿಕೆ ಹಾಳೆ ವಿಚಾರವಾಗಿ ಮನೆಗೆ ನುಗ್ಗಿ ಗಲಾಟೆ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌

crime name image

ಶಿವಮೊಗ್ಗ: ಅಡಿಕೆ ಹಾಳೆ (Areca leaf) ವಿಚಾರವಾಗಿ ನಡೆದ ಗಲಾಟೆ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ. ಸಹೋದರಿ ಮತ್ತು ಆಕೆಯ ಪತಿಯ ವಿರುದ್ಧ ಮಹಿಳೆ (ಹೆಸರು ಗೌಪ್ಯ) ದೂರು ನೀಡಿದ್ದಾರೆ. ಅಂಗಡಿಯಲ್ಲಿರುವ ಅಡಿಕೆ ಹಾಳೆಯನ್ನು ಉಚಿತವಾಗಿ ತಮಗೆ ನೀಡಬೇಕು ಎಂದು ಮಹಿಳೆಯ ಸಹೋದರಿ ಮತ್ತು ಆಕೆಯ ಪತಿ ಕೇಳಿದ್ದರು. ಅವರ ಬೇಡಿಕೆ ನಿರಾಕರಿಸಿದ್ದಕ್ಕೆ ತಡರಾತ್ರಿ ಮಹಿಳೆಯ ಮನೆಗೆ ಬಂದ ಸಹೋದರಿ ಮತ್ತು ಆಕೆಯ ಪತಿ ಮಹಿಳೆಯ ಮಗಳ ಕೆನ್ನೆಗೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಮಹಿಳೆಯ ಮನೆ ಬಾಗಿಲಿಗೆ … Read more

ಶಿವಮೊಗ್ಗದ ನಿರ್ಜನ ಪ್ರದೇಶದಲ್ಲಿ ಬೆಂಗಳೂರಿನ ವ್ಯಕ್ತಿಗೆ ಚಿನ್ನದ ನಾಣ್ಯ ಕೊಟ್ಟ ಸ್ನೇಹಿತ, ಆಮೇಲೆ ಕಾದಿತ್ತು ಆಘಾತ

Police-Van-Jeep-at-Shimoga-Nehru-Road

ಶಿವಮೊಗ್ಗ: ಜಿಲ್ಲೆಯ ಪ್ರವಾಸಿ ತಾಣಗಳನ್ನು ತೋರಿಸುವುದಾಗಿ ನಂಬಿಸಿ ಬೆಂಗಳೂರಿನ ಗುತ್ತಿಗೆದಾರರೊಬ್ಬರಿಗೆ ಲಕ್ಷಾಂತರ ರೂ. ವಂಚಿಸಲಾಗಿದೆ. (Gold Coins) ₹11 ಲಕ್ಷ ವಂಚನೆಯಾಗಿದೆ ಎಂದು ಆರೋಪಿಸಿ ಗುತ್ತಿಗೆದಾರ ಗೌತಮ್‌ ಭಂಡಾರಿ ಎಂಬುವವರು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗಾಯ್ತು ವಂಚನೆ? ಗೌತಮ್‌ ಭಂಡಾರಿ ಎಂಬುವವರಿಗೆ ಬೆಂಗಳೂರಿನಲ್ಲಿ ಶಿವಮೊಗ್ಗದ ಪ್ರದೀಪ ಎಂಬಾತನ ಪರಿಚಯವಾಗಿತ್ತು. ಪ್ರದೀಪ ಆಗಾಗ ಅವರಿಗೆ ಕರೆ ಮಾಡುತ್ತಿದ್ದ. ಶಿವಮೊಗ್ಗದಲ್ಲಿ ಟೂರಿಸ್ಟ್‌ ಜಾಗಗಳನ್ನು ತೋರಿಸುವುದಾಗಿ ಹೇಳುತ್ತಿದ್ದ. ಗೌತಮ್‌ ಭಂಡಾರಿ ಅವರು ತಮ್ಮ ಸ್ನೇಹಿತರಾದ ನಾಗೇಶ್‌, … Read more

BREAKING NEWS – ಶಿವಮೊಗ್ಗದಲ್ಲಿ ಅಂತರ ರಾಜ್ಯ ಕಳ್ಳನ ಕಾಲಿಗೆ ಗುಂಡೇಟು

Police-fire-on-Thief-at-Shivamogga-city

ಶಿವಮೊಗ್ಗ: ಅಂತರ ರಾಜ್ಯ ಕಳ್ಳನೊಬ್ಬನ (Thief) ಕಾಲಿಗೆ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ. ಅಂತರ ರಾಜ್ಯ ಕಳ್ಳ ಮಂಜುನಾಥ್‌ ಅಲಿಯಾಸ್‌ ಕಲ್ಕೆರೆ ಮಂಜು ಎಂಬಾತನ ಕಾಲಿಗೆ ಇಂದು ಬೆಳಗ್ಗೆ ಗುಂಡು ಹಾರಿಸಲಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿರುವ ಸುಳಿವು ಲಭಿಸಿತ್ತು. ಖಚಿತ ಮಾಹಿತಿ ಮೇರೆಗೆ ಇಂದು ಬೆಳಗ್ಗೆ ಪೊಲೀಸರು ಬಂಧಿಸಲು ತೆರಳಿದ್ದರು. ಈ ಸಂದರ್ಭ ಪೊಲೀಸ್‌ ಸಿಬ್ಬಂದಿ ದ್ಯಾಮಪ್ಪ ಅವರ ಮೇಲೆ ಮಂಜ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎಂದು … Read more

ಖರೀದಿಸಿ, ಮಾರಿ, ಅಧಿಕ ಲಾಭ ಗಳಿಸಿ, ಆಮಿಷಕ್ಕೆ ಮಾರುಹೋದ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ದೊಡ್ಡ ಆಘಾತ

Online-Fraud-Case-image

ಶಿವಮೊಗ್ಗ: ಎಲೆಕ್ಟ್ರಾನಿಕ್‌ ವಸ್ತುಗಳನ್ನು ಖರೀದಿಸಿ ಮಾರಾಟ (Sell) ಮಾಡಿ ಅಧಿಕ ಲಾಭಾಂಶ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ 17.74 ಲಕ್ಷ ರೂ. ಹಣ ವಂಚಿಸಲಾಗಿದೆ. ಟೆಲಿಗ್ರಾಂನಲ್ಲಿ ನ್ಯೂ ಎಗ್‌ ಕಮ್ಯೂನಿಟಿ ಎಂಬ ಗ್ರೂಪ್‌ಗೆ ಸೇರಿದ್ದ ಶಿವಮೊಗ್ಗದ ವ್ಯಕ್ತಿಗೆ ಅಲ್ಲಿ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಖರೀದಿಸಿ, ಮಾರಾಟ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಲಾಗಿತ್ತು. ಯು.ಪಿ.ಐ ಐಡಿ ನೀಡಿ ಹಣ ಹೂಡಿಕೆ ಮಾಡುವಂತೆ ಸೂಚಿಸಲಾಗಿತ್ತು. ಅಧಿಕ ಲಾಭಾಂಶದ ಆಸೆಗಾಗಿ ಶಿವಮೊಗ್ಗದ ವ್ಯಕ್ತಿ ಹಣ ಹೂಡಿಕೆ ಕಳುಹಿಸಿದ್ದಾಗಿ ಎಂದು … Read more

25 ಮನೆಗಳ ಫೋಟೊ ಕ್ಲಿಕ್‌ ಮಾಡಿದ ಯುಕವನ ಖಾತೆಗೆ ಬಂತು ಹಣ, ಆಮೇಲೆ ಕಾದಿತ್ತು ಬಿಗ್‌ ಶಾಕ್

Online-Fraud-Case-image

ಶಿವಮೊಗ್ಗ: ಮನೆಗಳ ಫೋಟೊ ಕ್ಲಿಕ್ ಮಾಡಿ ರಿವ್ಯು (review) ನೀಡಿದರೆ ಲಾಭಾಂಶ ನೀಡುವುದಾಗಿ ನಂಬಿಸಿ ಶಿವಮೊಗ್ಗದ ಎಲೆಕ್ಟ್ರೀಷಿಯನ್‌ ಒಬ್ಬರಿಗೆ 12.72  ಲಕ್ಷ ರೂ. ಹಣ ವಂಚಿಸಲಾಗಿದೆ. ಪಾರ್ಟ್‌ ಟೈಮ್‌ ಉದ್ಯೋಗ ಕುರಿತು ಎಲೆಕ್ಟ್ರೀಷಿನ್‌ಗೆ ವಾಟ್ಸಪ್‌ಗೆ ಮೆಸೇಜ್‌ ಬಂದಿತ್ತು. ಅದನ್ನು ಕ್ಲಿಕ್‌ ಮಾಡಿದಾಗ ಮನೆಗಳಿಗೆ ರಿವ್ಯು ನೀಡಿದರೆ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಲಾಗಿತ್ತು. ಅಂತೆಯೇ ಮೊದಲು 25 ಮನೆಗಳ ಫೋಟೊಗಳ ಮೇಲೆ ಕ್ಲಿಕ್‌ ಮಾಡಿ ರಿವ್ಯು ಬರೆಯುತ್ತಿದ್ದಂತೆ ಎಲೆಕ್ಟ್ರೀಷಿಯನ್‌ ಬ್ಯಾಂಕ್‌ ಖಾತೆಗೆ 800 ರೂ. ಹಣ ವರ್ಗಾಯಿಸಿದ್ದರು. … Read more

ವಾಟ್ಸಪ್‌ನಲ್ಲಿ ವಾಹನ ಹರಾಜು, ಪಾಲ್ಗೊಂಡಿದ್ದ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

crime name image

ಶಿವಮೊಗ್ಗ: ವಾಹನಗಳ ಹರಾಜಿನಲ್ಲಿ (Auction) ಭಾಗವಹಿಸಿ ಅಧಿಕ ಕಮಿಷನ್‌ ಪಡೆಯಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಲಾಗಿದೆ. ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಸೇರ್ಪಡೆಯಾಗಿದ್ದ ವ್ಯಕ್ತಿಗೆ ಈ ಆಮಿಷವೊಡ್ಡಿ ಹಣ ವರ್ಗಾಯಿಸಿಕೊಳ್ಳಲಾಗಿದೆ. ಏನಿದು ಪ್ರಕರಣ? ವಂಚನೆ ಆಗಿದ್ದೇಗೆ? ಶಿವಮೊಗ್ಗದ ವ್ಯಕ್ತಿಯೊಬ್ಬರು ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಸೇರ್ಪಡೆಯಾಗಿದ್ದರು. ಅದರಲ್ಲಿ ವಾಹನಗಳ ಹರಾಜು ಕುರಿತು ಮಾಹಿತಿ ಹಂಚಿಕೊಳ್ಳಲಾಗಿತ್ತು. ಹರಾಜಿನಲ್ಲಿ ಭಾಗವಹಿಸಿ ಅಧಿಕ ಕಮಿಷನ್‌ ಸಂಪಾದಿಸಬಹುದು ಎಂದು ತಿಳಿಸಲಾಗಿತ್ತು. ಇದನ್ನು ನಂಬಿದ ಶಿವಮೊಗ್ಗದ ವ್ಯಕ್ತಿ ಹರಾಜಿನಲ್ಲಿ ಭಾಗವಹಿಸಿದ್ದರು. ವಾಟ್ಸಪ್‌ ಗ್ರೂಪ್‌ನಲ್ಲಿ ತಿಳಿಸಿದಂತೆ … Read more