ಶಿವಮೊಗ್ಗದಲ್ಲಿ ಕಾಂಪೌಂಡ್ ಮೇಲಿಂದ ಬಿದ್ದು ಗಂಭೀರ ಗಾಯ, ಮೆಗ್ಗಾನ್ ಆಸ್ಪತ್ರೆಯಲ್ಲಿ ವ್ಯಕ್ತಿ ಸಾವು

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2021 ಕಾಂಪೌಂಡ್ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಗಾರೆ ಕೆಲಸ ಮಾಡುತ್ತಿದ್ದ ವ್ಯಕ್ತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಮನೆ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ನಾರಾಯಣ (49) ಮೃತ ದುರ್ದೈವಿ. ಶರಾವತಿ ನಗರದ ಮನೆಯೊಂದರಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ಕಾಂಪೌಂಡ್ ಮೇಲೆ ನಿಂತು ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಆಯಾತಪ್ಪಿ ಕೆಳಗೆ ಬಿದ್ದ ನಾರಾಯಣ ಗಂಭೀರ ಗಾಯಗೊಂಡಿದ್ದರು. ಮಾಲೀಕರೆ ಆಸ್ಪತ್ರೆಗೆ … Read more

ಮನೆಯಲ್ಲಿ ನೇಣು ಬಿಗಿದು ಪಿಯುಸಿ ವಿದ್ಯಾರ್ಥಿನಿ ಸಾವು

Suicide-Hanging-General

ಶಿವಮೊಗ್ಗ ಲೈವ್.ಕಾಂ | SORABA NEWS | 31 ಜುಲೈ 2021 ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದ್ವಿತೀಯ ವರ್ಷದ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಸುಚಿತ್ರಾಗೆ, ಕೆಲ ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತಿತ್ತು. ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು. ಆದರೆ ಹೊಟ್ಟೆನೋವು ಕಡಿಮೆಯಾಗಿರಲಿಲ್ಲ ಎಂದು ಹೇಳಲಾಗುತ್ತಿದೆ. ಕುಟುಂಬದವರು ಹೊಲಕ್ಕೆ ಹೋದ ಸಂದರ್ಭ ಮನೆಯಲ್ಲಿಯೇ … Read more

ಬೈಕ್, ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ, ಕೆರೆಗೆ ಬಸ್ ಪಲ್ಟಿ, ಹೇಗಾಯ್ತು ಘಟನೆ?

300721 Bike KSRTC Bus Accident near kaspadi cross 1

ಶಿವಮೊಗ್ಗ ಲೈವ್.ಕಾಂ |SAGARA NEWS | 30 ಜುಲೈ 2021 ಬೈಕ್‍, ಕೆಎಸ್‍ಆರ್‍ಟಿಸಿ ಬಸ್‍ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ಸು ಕೆರೆಗೆ ಉರುಳಿದೆ. ಬೈಕ್‍ ಸವಾರರಿಬ್ಬರಿಗೂ ಗಂಭೀರ ಗಾಯವಾಗಿದೆ. ಬಸ್‍ನಲ್ಲಿದ್ದವರು ಅದೃಷ್ಟವಶಾತ್ ಬಚಾವಾಗಿದ್ದಾರೆ. ಸಾಗರದ ಉಳ್ಳೂರು ಕಾಸ್ಪಾಡಿ ಕ್ರಾಸ್‍ನಲ್ಲಿ ಇವತ್ತು ಬೆಳಗ್ಗೆ ಬಸ್ ಮತ್ತು ಬೈಕ್‍ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್, ಕೆರೆಗೆ ಉರುಳಿ ಬಿದ್ದಿದೆ. ಹೇಗಾಯ್ತು ಘಟನೆ? ಸಾಗರದಿಂದ ಶಿವಮೊಗ್ಗ ಮೂಲಕ ದಾವಣಗೆರೆಗೆ ತರಳಬೇಕಿದ್ದ ಕೆಎಸ್‍ಆರ್‍ಟಿಸಿ ಬಸ್‍, … Read more

ಶಿವಮೊಗ್ಗದ ಹಣ್ಣು ವ್ಯಾಪಾರಿ ವಿರುದ್ಧ ರೇಪ್ ಕೇಸ್

Doddapete police station in shimoga

ಶಿವಮೊಗ್ಗ ಲೈವ್.ಕಾಂ |SHIMOGA NEWS | 30 ಜುಲೈ 2021 ಅಪ್ರಾಪ್ತೆಯನ್ನು ವಿವಾಹವಾಗಿ, ಆಕೆಯೊಂದಿಗೆ ಸುಮಾರು ಎರಡು ತಿಂಗಳು ಸಂಸಾರ ಮಾಡಿದ ಶಿವಮೊಗ್ಗದ ಹಣ್ಣು ವ್ಯಾಪಾರಿಗೆ ಈಗ ಸಂಕಷ್ಟ ಎದುರಾಗಿದೆ. ಆತನ ವಿರುದ್ಧ ಪೋಕ್ಸೊ ಕಾಯ್ದೆ, ಅತ್ಯಾಚಾರ ಪ್ರಕರಣ, ಬಾಲ್ಯ ವಿವಾಹ ನಿರ್ಬಂಧ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಏನಿದು ಕೇಸ್‍? ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಅಪ್ರಾಪ್ತೆಗೆ ರಕ್ಷಣೆ ನೀಡುವ ನೆಪದಲ್ಲಿ, ಹಣ್ಣು ವ್ಯಾಪಾರಿಯೊಬ್ಬ ವಿವಾಹವಾಗಿದ್ದ. ಆಕೆಯೊಂದಿಗೆ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅಪ್ರಾಪ್ತೆಯನ್ನು ವಿವಾಹವಾದ … Read more

ಶಿವಮೊಗ್ಗದ ಸೆಂಟ್ರಲ್ ಜೈಲ್​​ನಲ್ಲಿ ಕೈದಿ ಮೇಲೆ ಸಹ ಕೈದಿಗಳಿಂದ ಹಲ್ಲೆ, ಕಾರಾಗೃಹದ ಗೇಟ್ ಮುಂದೆ ಹೈಡ್ರಾಮಾ, ಕಾರಣವೇನು?

shimoga central jail building

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಕೈದಿಯೊಬ್ಬನ ಮೇಲೆ ಸಹ ಕೈದಿಗಳೇ ಹಲ್ಲೆ ಮಾಡಿದ್ದಾರೆ. ಈ ನಡುವೆ ಹಲ್ಲೆಗೊಳಗಾದ ಕೈದಿ ಕೊಲೆಯಾಗಿದ್ದಾನೆ ಎಂದು ಸುದ್ದಿ ಹಬ್ಬಿದ್ದರಿಂದ ಜೈಲು ಗೇಟ್‍ ಮುಂದೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಏನಿದು ಕೇಸ್‍? ಹಲ್ಲೆಗೇನು ಕಾರಣ? ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಸಲ್ಮಾನ್ ಎಂಬಾತನನ್ನು ಬುಧವಾರ ಸಂಜೆ ಜೈಲಿಗೆ ತಂದು ಬಿಡಲಾಗಿತ್ತು. ಇವತ್ತು ಬೆಳಗ್ಗೆ ಸಲ್ಮಾನ್ ಮೇಲೆ ಸಹ ಕೈದಿಗಳಾದ ಸೂಳೆಬೈಲಿನ ಗೌಸ್‍, ಸಲೀಂ … Read more

ಗಾಂಧಿ ಬಜಾರ್ ಕುಚಲಕ್ಕಿ ಕೇರಿಯಲ್ಲಿ ಅಂಗಡಿ ಮೇಲೆ ಪೊಲೀಸ್ ದಾಳಿ

290721 Police Raid At GandhiBazaar Shop 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ಪ್ರತಿಷ್ಠಿತ ಕಂಪನಿಯೊಂದರ ಬಾಟಲಿಗಳನ್ನು ಹೋಲುವ ನಕಲಿ ಬಾಟಲಿಗಳಲ್ಲಿ ಕೊಬ್ಬರಿ ಎಣ್ಣೆ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ಮಾಡಿದ್ದಾರೆ. ಕೊಬ್ಬರಿ ಎಣ್ಣೆ ಕಂಪನಿ ಪ್ರತಿನಿಧಿಗಳು ನೀಡಿದ ದೂರಿನ ಆಧಾರದ ಮೇಲೆ ರೇಡ್ ಮಾಡಲಾಗಿದೆ. ಗಾಂಧಿ ಬಜಾರ್‍ನ ಕುಚಲಕ್ಕಿ ಕೇರಿಯ ಮಳಿಗೆಯೊಂದರ ಮೇಲೆ ಡಿವೈಎಸ್‍ಪಿ ಪ್ರಶಾಂತ್ ಮುನ್ನೋಳಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಅಂಗಡಿಯಲ್ಲಿದ್ದ 26 ಬಾಟಲಿ ಕೊಬ್ಬರಿ ಎಣ್ಣೆಯನ್ನು ವಶಕ್ಕೆ ಪಡೆಯಲಾಗಿದೆ. … Read more

ಶಿವಮೊಗ್ಗದಲ್ಲಿ ಗ್ಯಾಸ್ ಏಜೆನ್ಸಿ ಕೊಡಿಸುವುದಾಗಿ ನಂಬಿಸಿ ಐದು ಲಕ್ಷ ರೂ. ವಂಚನೆ

Doddapete police station in shimoga

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ಗ್ಯಾಸ್ ಏಜೆನ್ಸಿ ಕೊಡಿಸುವುದಾಗಿ ನಂಬಸಿ ವಂಚನೆ ಮಾಡಿರುವ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಮನೆ ಬಡಾವಣೆಯ ಮಹಿಳೆಯೊಬ್ಬರಿಗೆ ಖಾಸಗಿ ಎಲ್‍ಪಿಜಿ ಗ್ಯಾಸ್ ಏಜೆನ್ಸಿ ಕೊಡಿಸುವುದಾಗಿ ನಂಬಿಸಿ, ಹಣ ಪಡೆಯಲಾಗಿದೆ. ಮೊದಲಿಗೆ ಎರಡು ಲಕ್ಷ, ಬಳಿಕ ಮೂರು ಲಕ್ಷ ರೂ. ಹಣ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ. ಎಲ್‍ಪಿಜಿ ಗ್ಯಾಸ್ ಕಂಪನಿಯ ಏಜೆನ್ಸಿ ಕೊಡಿಸುವುದಾಗಿ ನಂಬಿಸಿ, ಹೊಸಮನೆ ಬಡಾವಣೆಯ ಮಹಿಳೆಯೊಬ್ಬರಿಂದ ಹಣ ಪಡೆಯಲಾಗಿದೆ. ಐದು ಲಕ್ಷ ರೂ. … Read more

ಪರೀಕ್ಷೆ ಭಯ, ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು

Suicide-Hanging-General

ಶಿವಮೊಗ್ಗ ಲೈವ್.ಕಾಂ |SORABA NEWS | 28 ಜುಲೈ 2021 ಪರೀಕ್ಷೆ ಭೀತಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿತಿನ್ ದಾಸ್ (20) ಮೃತ ವಿದ್ಯಾರ್ಥಿ. ಬೆಂಗಳೂರಿನ ಕಾಲೇಜಿನಲ್ಲಿ ನಿತಿನ್ ದಾಸ್ ಬಿಇ ಪದವಿ ಅಧ್ಯಯನ ಮಾಡುತ್ತಿದ್ದ. ಲಾಕ್ ಡೌನ್ ಹಿನ್ನೆಲೆ ಸೊರಬ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿರುವ ಮನೆಗೆ ಬಂದಿದ್ದ. ಆನ್‍ಲೈನ್ ಮೂಲಕ ನಿತಿನ್ ದಾಸ್ ತರಗತಿಗಳಲ್ಲಿ ಪಾಲ್ಗೊಳ್ಳುತ್ತಿದ್ದ. 2ನೇ ವರ್ಷದ ಬಿಇ ಪರೀಕ್ಷೆ ಬರೆಯಬೇಕಿತ್ತು. ಆದರೆ ಪರೀಕ್ಷೆ ಕುರಿತು … Read more

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೃತರಾದ ಇಬ್ಬರು ಸವಾರರ ಗುರುತು ಪತ್ತೆ

Thirthahalli Name Graphics

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 28 ಜುಲೈ 2021 ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೃತರಾದ ಸವಾರರ ಗುರುತು ಪತ್ತೆಯಾಗಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ತಾಲೂಕಿನ ಬೂದಿಗೆರೆಯ ಪ್ರಭು (22) ಮತ್ತು ರಮೇಶ್ (25) ಮೃತರು. ಇವರು ಬೆಜ್ಜವಳ್ಳಿ ಕಡೆಯಿಂದ ಆಯನೂರು ಕಡೆಗೆ ಬರುವ ರಸ್ತೆಯಲ್ಲಿ ಹೊರಬೈಲು ಬಳಿ ಬೈಕ್‍ನಲ್ಲಿ ಬರುವಾಗ ಅಪಘಾತವಾಗಿದೆ. ಹೇಗಾಯ್ತು ಅಪಘಾತ? ಪ್ರಭು ಬೈಕ್ ಚಲಾಯಿಸುತ್ತಿದ್ದ. ಅತಿ ವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಓಡಿಸಿದ್ದರಿಂದ … Read more

ಹೈವೇ ರಸ್ತೆಯಲ್ಲಿ ಹಿಟ್ ಅಂಡ್ ರನ್, ಬೈಕ್ ಸವಾರ ಸ್ಥಳದಲ್ಲೇ ಸಾವು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಜುಲೈ 2021 ಬೈಕ್‍ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ವಾಹನದ ಶೋಧ ಕಾರ್ಯ ನಡೆಯುತ್ತಿದೆ. ಶಿವರಾಜ್ (26) ಮೃತ ದುರ್ದೈವಿ. ಸಾಗರ ತಾಲೂಕು ಕುಗ್ವೆ ಗ್ರಾಮದ ಶಿವರಾಜ್, ಭಾನುವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ಖಂಡಿಕಾ ಕ್ರಾಸ್‍ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿವರಾಜ್ ಚಲಿಸುತ್ತಿದ್ದ ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವರಾಜ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಾಗರ … Read more