ಬಸ್ ಸ್ಟಾಪ್​ನಲ್ಲಿ ಮಹಿಳೆ ಕೊಲೆ ಕೇಸ್, ಹತ್ತು ತಿಂಗಳಿಂದ ಪರಿಚಯ ಇದ್ದವನಿಂದಲೇ ಕೃತ್ಯ, ಹತ್ಯೆಗೆ ಕಾರಣವೇನು?

murder graphical image

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2021 ಬಸ್ ತಂಗುದಾಣದಲ್ಲಿ ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣ ಸಂಬಂಧ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಎನ್‍.ಟಿ.ರಸ್ತೆಯ ಗಾಜನೂರು ಬಸ್ ತಂಗುದಾಣದಲ್ಲಿ ಘಟನೆ ಸಂಭವಿಸಿತ್ತು. ಲತಾಬಾಯಿ (40) ಎಂಬಾಕೆಯ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಬಳ್ಳಾರಿ ಜಿಲ್ಲೆಯ ಕೋಮಾರನಹಳ್ಳಿ ತಾಂಡಾದ ದೇವೇಂದ್ರ (27) ಎಂಬಾತನನ್ನು ಬಂಧಿಸಲಾಗಿದೆ. ಹತ್ಯೆಗೆ ಕಾರಣವೇನು? ಸುಮಾರು 10 ತಿಂಗಳಿಂದ ಹೊಸಹಳ್ಳಿಯ ಲತಾಬಾಯಿಗೆ ಬಳ್ಳಾರಿಯ ದೇವೇಂದ್ರನ ಜೊತೆಗೆ ಒಡನಾಟ … Read more

ಹೊಳೆಹೊನ್ನೂರು ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ, 15 ಮಂದಿ ವಿರುದ್ಧ ಕೇಸ್

holehonnur name graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2021 ಜಮೀನು ವಿವಾದ ಸಂಬಂಧ ಭದ್ರಾವತಿ ತಾಲೂಕು ತಿಮ್ಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಚನ್ನಗಿರಿ ತಾಲೂಕು ಚಿಕ್ಕೊಲಿಕೆರೆಯ ಶಿವಲಿಂಗಪ್ಪ (45) ಮೃತರು. ಗಂಭೀರ ಗಾಯಗೊಂಡಿದ್ದ ಶಿವಲಿಂಗಪ್ಪ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಏನಿದು ಘಟನೆ? ಯಾಕಾಯ್ತು ಹಲ್ಲೆ? ಶಿವಲಿಂಗಪ್ಪ ಮತ್ತು ಸೋಮಶೇಖರ್ ಕುಟುಂಬದ ನಡುವೆ ತಿಮ್ಲಾಪುರ ಗ್ರಾಮದ ಸರ್ವೇ ನಂ.41ರ ಒಂದು ಎಕರೆ ಜಮೀನು … Read more

ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ, ಅರಣ್ಯ ಇಲಾಖೆ ಗುತ್ತಿಗೆದಾರ ಸ್ಥಳದಲ್ಲೆ ಸಾವು

110721 Car Accident Near Umblebyle 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2021 ಮರಕ್ಕೆ ಕಾರು ಡಿಕ್ಕಿಯಾಗಿ ಅರಣ್ಯ ಇಲಾಖೆ ಗುತ್ತಿಗೆದಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿ ಎನ್‍.ಆರ್‍.ಪುರಕ್ಕೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಮಲ್ಲಿಗೇನಹಳ್ಳಿಯ ಲಿಂಗರಾಜು (30) ಮೃತರು. ಜಂಕ್ಷನ್ – ಉಂಬ್ಳೇಬೈಲು ಮಧ್ಯೆ ಅಪಘಾತವಾಗಿದೆ. ಲಿಂಗರಾಜು ಅವರು ಕಾರು ಚಲಾಯಿಸುತ್ತಿದ್ದರು. ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಲಿಂಗರಾಜು ಅವರಿಗೆ ಗಂಭೀರ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೆ ಮೃತರಾಗಿದ್ದಾರೆ. ಭದ್ರಾವತಿ ಗ್ರಾಮಾಂತರ … Read more

ಸಿಗಂದೂರು ರಸ್ತೆಯಲ್ಲಿ ಹಿಟ್ ಅಂಡ್ ರನ್, ಪಾದಚಾರಿ ಸ್ಥಳದಲ್ಲೇ ಸಾವು

Breaking News Plate

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2021 ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರದ ಸಿಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ಘಟನೆ ಸಂಭವಿಸಿದೆ. ಆದಿಶಕ್ತಿ ನಗರದ ಬಾಬು (47) ಎಂಬಾತ ಮೃತ ದುರ್ದೈವಿ. ಸಂಜೆ ಘಟನೆ ಸಂಭವಿಸಿದೆ. ಬಾಬು ಅವರು ನಡೆದು ಹೋಗುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಾಬು ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನ ಪರಾರಿಯಾಗಿದೆ. ಸಾಗರ ಠಾಣೆ ಇನ್ಸ್​​ಪೆಕ್ಟರ್​​ … Read more

ವಿನೋಬನಗರ ಎಪಿಎಂಸಿಯಲ್ಲಿ ಕಳ್ಳರ ಕೈಚಳಕ, ತರಕಾರಿ ಕೊಳ್ಳಲು ಬಂದವರ ಮೊಬೈಲ್ ಎಸ್ಕೇಪ್

vinobanagara polic station and police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2021 ಶಿವಮೊಗ್ಗದಲ್ಲಿ ಮೊಬೈಲ್ ಕಳ್ಳರ ಹಾವಳಿ ದಿನೇ ದಿನೆ ಹೆಚ್ಚಾಗುತ್ತಿದೆ. ವಿನೋಬನಗರದ ಎಪಿಎಂಸಿ ಮಾರುಕೆಟ್ಟೆಯಲ್ಲಿ ತರಕಾರಿ ಖರೀದಿಗೆ ಬಂದಿದ್ದ ವ್ಯಕ್ತಿಯೊಬ್ಬರ ಮೊಬೈಲ್‍ ಕದ್ದೊಯ್ದಿದ್ದಾರೆ. ಶ್ರೀನಿವಾಸ ಮೂರ್ತಿ ಎಂಬುವವರು ತರಕಾರಿ ತರಲು ಎಪಿಎಂಸಿ ಮಾರುಕಟ್ಟೆಗೆ ಬಂದಿದ್ದರು. ಈ ವೇಳೆ ಕಳ್ಳರು ಮೊಬೈಲ್‍ ಕಳುವು ಮಾಡಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ … Read more

ನೈಟ್ ಬೀಟ್ ಪೊಲೀಸರ ಸಮಯ ಪ್ರಜ್ಞೆ, ಉಷಾ ನರ್ಸಿಂಗ್ ಹೋಂ ಬಳಿ ಕಳ್ಳತನಕ್ಕೆ ಯತ್ನಿದವನು ಅರೆಸ್ಟ್

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2021 ಉಷಾ ನರ್ಸಿಂಗ್ ಹೋಂ ಬಳಿ ರಾತ್ರಿ ಅಂಡಿಯೊಂದರ ಬೀಗ ತೆಗೆಯಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೆಟ್ಟಿಗೆ ಅಂಗಡಿಯೊಂದರ ಬೀಗ ತೆಗೆಯಲು ವ್ಯಕ್ತಿಯೊಬ್ಬ ಪ್ರಯತ್ನಿಸುತ್ತಿದ್ದ. ಪೊಲೀಸರು ಬರುತ್ತಿದ್ದಂತೆ ಮರೆಯಾಗಲು ಯತ್ನಿಸಿದ್ದಾನೆ. ಅನುಮಾನದಿಂದ ಆತನನ್ನು ಹಿಡಿದ ಜಯನಗರ ಠಾಣೆಯ ಪೊಲೀಸ್ ಸಿಬ್ಬಂದಿ, ವಿಚಾರಣೆ ನಡೆಸಿದಾಗ ಸಮರ್ಪಕ ಉತ್ತರ ನೀಡಿಲ್ಲ. ಹಾಗಾಗಿ ಆತನನ್ನು ಬಂಧಿಸಲಾಗಿದೆ. ಬಂಧಿತನನ್ನು ಹರೀಶ (40) ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ … Read more

ತೀರ್ಥಹಳ್ಳಿಯ ಕಮ್ಮರಡಿ ಸುತ್ತಮುತ್ತ ದೇಗುಲಗಳಲ್ಲಿ ಸರಣಿ ಕಳ್ಳತನ

Thirrthahalli Taluk Graphics

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 9 ಜುಲೈ 2021 ತೀರ್ಥಹಳ್ಳಿಯ ಕಮ್ಮರಡಿ ಸಮೀಪ ಕಳೆದ ಎರಡು ದಿನದಿಂದ ಎರಡು ದೇವಸ್ಥಾನದಲ್ಲಿ ಕಳ್ಳರು ಹುಂಡಿ ಒಡೆದು, ಕಾಣಿಕೆ ಹಣ ಕಳವು ಮಾಡಿದ್ದಾರೆ. ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಂಗಾರು ಭೂ ಕೈಲಾಸ ದೇವಸ್ಥಾನದಲ್ಲಿ ಕಳವು ಮಾಡಲಾಗಿದೆ. ಇನ್ನು ನಡಬೂರು ಹುಂಬಾಗಿ ದೇವಸ್ಥಾನದಲ್ಲೂ ಕಳ್ಳರು ಹುಂಡಿ ಒಡೆದು ಕಾಣಿಕೆ ಹಣ ದೋಚಿದ್ದಾರೆ. ಸ್ಥಳೀಯರು, ದೇವಸ್ಥಾನದ ಆಡಳಿತ ಮಂಡಳಿ ದೇಗುಲಕ್ಕೆ ಬಂದಾಗ ಘಟನೆ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ … Read more

ಸ್ಕ್ರೂಡ್ರೈವರ್, ಸ್ಪಾನರ್ ಬಳಸಿ ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಒಡೆಯಲು ಯತ್ನ

Bhadravathi Name Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 ಜುಲೈ 2021 ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಮತ್ತು ಡೆಪಾಸಿಟ್ ಮೆಷಿನ್‍ ಒಡೆದು ಹಣ ದೋಚಲು ವಿಫಲ ಯತ್ನವಾಗಿದೆ. ಈ ಸಂಬಂಧ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಬಿ.ಹೆಚ್‍.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‍ನ ಎಟಿಎಂ ಕೇಂದ್ರದಲ್ಲಿ ಘಟನೆ ಸಂಭವಿಸಿದೆ. ಜುಲೈ 5ರ ರಾತ್ರಿ ಕಳ್ಳತನದ ಯತ್ನವಾಗಿದೆ. ಸ್ಕ್ರೂ ಡ್ರೈವರ್, ಸ್ಪಾನರ್ ಬಳಸಿ ಡೆಪಾಸಿಟಿವ್ ಮೆಷಿನ್ ಮತ್ತು ಎಟಿಎಂ ಮೆಷಿನ್ ಬಿಚ್ಚಲು ಯತ್ನಿಸಿದ್ದಾರೆ. ಹಣ ಕಳ್ಳತನ ಮಾಡಲು ಸಾಧ್ಯವಾಗಿರಲಿಲ್ಲ. ಬೆಳಗ್ಗೆ ಬ್ಯಾಂಕ್ ಸಿಬ್ಬಂದಿಗಳು ಬಂದಾಗ … Read more

ಅಪ್ರಾಪ್ತೆ ಜೊತೆ ಲವ್ವಿಡವ್ವಿ, ಗರ್ಭಿಣಿಯಾದ ಬಳಿಕ ಕಟ್ಟಿದ ತಾಳಿ, ಆರೋಪಿಗೆ ಜೈಲು, ದಂಡ

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಜುಲೈ 2021 ಅಪ್ರಾಪ್ತೆಯನ್ನು ಪ್ರೀತಿಸುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳಸಿಕೊಂಡು, ಗರ್ಭಿಯಾಣದ ಬಳಿಕ ಮದುವೆಯಾದ ಆರೋಪಿಗೆ ನ್ಯಾಯಾಲಯ ಜೈಲು ಶಿಕ್ಷೆ, ದಂಡ ವಿಧಿಸಿದೆ.  ಎಫ್‍.ಟಿ.‍ಎಸ್‍.ಸಿ ನ್ಯಾಯಾಲಯ ತೀರ್ಪು ನೀಡಿದೆ. ಏನಿದು ಪ್ರಕರಣ? ಎಷ್ಟು ವರ್ಷ ಶಿಕ್ಷೆ? ಶಿವಮೊಗ್ಗದ ಯಲವಟ್ಟಿ ತಾಂಡದ ಎಸ್‍.ಆರ್.ಬೀರೇಶ್‍ (30), ಅಪ್ರಾಪ್ತೆಯೊಬ್ಬಳನ್ನು ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ. ಆಕೆ ಗರ್ಭಿಣಿಯಾದಾಗ ಭದ್ರಾವತಿಯ ಚೌಡೇಶ್ವರಿ ದೇವಸ್ಥಾನದಲ್ಲಿ 2017ರ ಜೂನ್ 28ರಂದು ಮದುವೆಯಾಗಿದ್ದ. ಘಟನೆ ಮಾಹಿತಿ … Read more

ಸ್ವಸಹಾಯ ಸಂಘದ ಸಾಲ ತೀರಿಸಲು ಮನೆ ಬೀಗ ಒಡೆದ, ಕೊನೆಗೆ ತೀರಿಸಿದ ಸಾಲವೇ ಸಾಕ್ಷಿಯಾಗಿ ಪೊಲೀಸರಿಗೆ ಸಿಕ್ಕಿಬಿದ್ದ

040721 Theif Arrest in Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 4 ಜುಲೈ 2021 ಸ್ವಸಹಾಯ ಸಂಘದಲ್ಲಿ ಮಾಡಿದ ಸಾಲ ತೀರಿಸಲು ಮನೆಯ ಬೀಗ ಒಡೆದು ಕಳವು ಮಾಡಿದ್ದ ಆರೋಪಿಯನ್ನು ಚಿನ್ನಾಭರಣ ಸಮೇತ ಸೊರಬ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ತಾಲ್ಲೂಕಿನ ಛತ್ರದಹಳ್ಳಿ ಗ್ರಾಮದ ಚಂದ್ರಪ್ಪ ಗಣೇಶಪ್ಪ (30) ಬಂಧಿತ ಆರೋಪಿ. ಸಾಲ ತೀರಿಸಲು ಕಳವು ಮಾಡಿದ್ದ ಚಂದ್ರಪ್ಪ, ಅದೆ ಸಾಲ ತೀರಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಆರಿದ್ರ ಮಳೆಗೆ ಹಬ್ಬಕ್ಕೆ ಹೋದಾಗ ಕಳ್ಳತನ ಜೂನ್‍  29ರಂದು ಛತ್ರದಹಳ್ಳಿಯ ರಮೇಶ್ … Read more