ತೀರ್ಥಹಳ್ಳಿಯ ಬೆಜ್ಜವಳ್ಳಿ ಬಳಿ ಕ್ಯಾಂಟರ್ ಪಲ್ಟಿ, ಅದರಲ್ಲಿದ್ದ ಗೋವುಗಳು ಸಾವು

111220 Canter Accident In Bejjavalli 1

ಶಿವಮೊಗ್ಗ ಲೈವ್.ಕಾಂ |THIRTHAHALLI CRIME NEWS | 11 DECEMBER 2020 ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದ್ದು, ಅದರಲ್ಲಿ ಸಾಗಿಸುತ್ತಿದ್ದ ಗೋವುಗಳು ಸಾವನ್ನಪ್ಪಿವೆ. ಚಾಲಕನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮದ ಬಳಿ ರಾತ್ರಿ ಘಟನೆ ಸಂಭವಿಸಿದೆ. ಕ್ಯಾಂಟರ್‍ನಲ್ಲಿದ್ದ ಗೋವುಗಳನ್ನು ಮೃತಪಟ್ಟಿವೆ ಎಂದು ಹೇಳಲಾಗುತ್ತಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಧಾವಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಂಟು ಗೋವು, ಎಮ್ಮೆ ಸಾವು ಕ್ಯಾಂಟರ್‍ನಲ್ಲಿದ್ದ ಎಂಟು ಗೋವುಗಳು, ಎಮ್ಮೆ ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳೀಯರು, ಪೊಲೀಸರ … Read more

ಹನ್ನೊಂದು ಗಂಟೆಗೆ ಸೈರನ್ ಶಬ್ದ, ಗಾಂಧಿ ಬಜಾರ್ ಸ್ಥಬ್ಧ, ಕರ್ಫ್ಯೂ ಸಡಿಲದ ಅವಧಿ ಹೇಗಿತ್ತು ಬಜಾರ್ ವಾತಾವರಣ?

091220 Gandhi Bazaar Curfew Relaxation 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 DECEMBER 2020 ಮೂರು ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಸಡಿಲಿಕೆ ಮಾಡಿದ್ದರಿಂದ ಶಿವಮೊಗ್ಗದ ಗಾಂಧಿ ಬಜಾರ್‍ನಲ್ಲಿ ಇವತ್ತು ಪುನಃ ವ್ಯಾಪಾರ, ವಹಿವಾಟು ಆರಂಭವಾಗಿತ್ತು. ಕರ್ಫ್ಯೂ ಸಡಿಲಿಕೆ ಅವಧಿ ಮುಕ್ತಾಯವಾಗುತ್ತಿದ್ದಂತೆ, ಪೊಲೀಸರು ಗಾಂಧಿ ಬಜಾರನ್ನು ಪೂರ್ತಿ ಬಂದ್ ಮಾಡಿಸಿದರು. ಹೂವು, ಹಣ್ಣು, ತರಕಾರಿ ಗಾಂಧಿ ಬಜಾರ್‍ನಲ್ಲಿ ಹೂವು, ಹಣ್ಣು, ತರಕಾರಿ ಖರೀದಿಗೆ ಜನ ಸೇರಿದ್ದರು. ತರಕಾರಿ ಮಾರುಕಟ್ಟೆಗೆ ಹೆಚ್ಚಿನ ಸಂಖ್ಯೆಯ ಜನರು ಬಂದಿದ್ದರು. ಬಹುತೇಕ ಎಲ್ಲ ತರಕಾರಿ ಅಂಗಡಿಗಳ ಬಾಗಿಲು ತೆಗೆಯಲಾಗಿತ್ತು. … Read more

ಶಿವಮೊಗ್ಗ ಸಿಟಿಯ ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿ.9ರಂದು ನಾಲ್ಕು ಗಂಟೆ ಕರ್ಫ್ಯೂ ಸಡಿಲಿಕೆ

041220 Shimoga City Gandhi Bazaar 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 8 DECEMBER 2020 ಹಳೆ ಶಿವಮೊಗ್ಗ ಭಾಗದಲ್ಲಿ ನಾಲ್ಕು ಗಂಟೆ ಕರ್ಫ್ಯೂ ಸಡಿಲಿಕೆ ಮಾಡಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಇದರ ಸಮಯವನ್ನು ನಿಗದಿ ಮಾಡಿದೆ. ಡಿಸೆಂಬರ್ 9ರಂದು ಬೆಳಗ್ಗೆ 7ರಿಂದ 11 ಗಂಟೆವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ಕೋಟೆ ಠಾಣೆ, ದೊಡ್ಡಪೇಟೆ ಠಾಣೆ ಮತ್ತು ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ. ಈ ವೇಳೆ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ. … Read more

ಶಿವಮೊಗ್ಗ ಆಲ್ಕೊಳ ಸರ್ಕಲ್ನಲ್ಲಿ ಐಪಿಎಸ್ ಅಧಿಕಾರಿ ಕಾರು, ಟಿವಿಎಸ್ ಮೊಪೆಡ್ ಡಿಕ್ಕಿ

081220 IPS Officer Bheema Shankar Guled Car Accident at Alkola 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 8 DECEMBER 2020 ಬಂದೋಬಸ್ತ್ ಡ್ಯೂಟಿಗೆ ಬಂದಿರುವ ಐಪಿಎಸ್ ಅಧಿಕಾರಿಯೊಬ್ಬರ ಕಾರು ಟಿವಿಎಸ್ ಮೊಪೆಡ್‍ ಬೈಕ್‍ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದು, ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಘಟನೆ? ಸಾಗರ ರಸ್ತೆಯಲ್ಲಿ ಬರುತ್ತಿದ್ದ ಐಪಿಎಸ್‍ ಅಧಿಕಾರಿ ಭೀಮಾ ಶಂಕರ್ ಗುಳೇದ್ ಅವರ ಕಾರು ಆಲ್ಕೊಳ ಸರ್ಕಲ್‍ನಲ್ಲಿ ಟಿವಿಎಸ್‍ ಎಕ್ಸೆಲ್‍ ಮೊಪೆಡ್‍ಗೆ ಡಿಕ್ಕಿಯಾಗಿದೆ. ಮೊಪೆಡ್‍ ಬೈಕು ದಿಢೀರನೆ ಸಾಗರ ರಸ್ತೆಗೆ ಬಂದಿದ್ದರಿಂದ ಅಪಘಾತ ಸಂಭವಿಸಿದೆ. ಮೊಪೆಡ್‍ನಲ್ಲಿ … Read more

ಸಾಮೂಹಿಕ ಅತ್ಯಾಚಾರ ಪ್ರಕರಣ, ನಾಲ್ವರು ಆರೋಪಿಗಳು ಆರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ? ವಿಡಿಯೋ ರಿಪೋರ್ಟ್

071220 Rape Case Car in Women Police Station 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 7 DECEMBER 2020 ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಒಂದೇ ಊರಿನವರು. ಈ ಪೈಕಿ ಒಬ್ಬಾತ ವಿದ್ಯಾರ್ಥಿಯಾಗಿದ್ದಾನೆ. ಯಾರನ್ನೆಲ್ಲ ಬಂಧಿಸಲಾಗಿದೆ? ಪ್ರಮುಖ ಆರೋಪಿ ಮನೋಜ್, ಪ್ರಜ್ವಲ್, ವಿನಯ್, ಸಂದೀಪ್ ಬಂಧಿತರು. ಇವರೆಲ್ಲ 20 ರಿಂದ 23 ವರ್ಷ ವಯಸ್ಸಿನವರು. ಬಂಧಿತರ ಪೈಕಿ ಮನೋಜ್ ಮೆಗ್ಗಾನ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾನೆ. ಉಳಿದ ಮೂವರ ಪೈಕಿ ಒಬ್ಬಾತ … Read more

ಶಿವಮೊಗ್ಗದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಊಟ ಕೊಡಿಸುವ ನೆಪದಲ್ಲಿ ಸಾಗರ ರಸ್ತೆಗೆ ಕರೆದೊಯ್ದು ಕೃತ್ಯ

Rape Representative Image 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 6 DECEMBER 2020 ಆಸ್ಪತ್ರೆಗೆ ಬಂದಿದ್ದ ಬಾಲಕಿಗೆ ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದು ಮೆಗ್ಗಾನ್ ಆಸ್ಪತ್ರೆ ವಾರ್ಡ್ ಬಾಯ್ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ ನೋಡಿಕೊಳ್ಳಲು ಬಂದಿದ್ದಳು ಆರೋಗ್ಯ ಸಮಸ್ಯೆ ಹಿನ್ನೆಲೆ ಬಾಲಕಿ ತಾಯಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೈಕೆ ಮಾಡಲು ಬಾಲಕಿ ಕೆಲ ದಿನದಿಂದ ಆಸ್ಪತ್ರೆಯಲ್ಲಿದ್ದಳು. ತಾಯಿಯನ್ನು ವಾರ್ಡ್‍ಗೆ ಕರೆದೊಯ್ಯುವುದು, ಚಿಕಿತ್ಸೆಗೆ … Read more

ಚಿಕಿತ್ಸೆ ನೆಪದಲ್ಲಿ ಭದ್ರಾವತಿಯಲ್ಲಿ ಯುವತಿಗೆ ವೈದ್ಯನಿಂದ ಲೈಂಗಿಕ ಕಿರುಕುಳ, ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 DECEMBER 2020 ಚಿಕಿತ್ಸೆ ನೆಪದಲ್ಲಿ ವೈದ್ಯರೊಬ್ಬರು ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವೈದ್ಯನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಭದ್ರಾವತಿಯ ಓಲ್ಡ್ ಟೌನ್‍ ಪೊಲೀಸ್ ಠಾಣೆ ವ್ಯಾಪ್ತಿಯ ಖಾಜಿ ಮೊಹಲ್ಲಾದ ಮೂಲವ್ಯಾಧಿ ವೈದ್ಯ ಡಾ.ಅನಿಮೇಶ್ ಬಿಸ್ವಾಸ್ ಬಂಧಿತ. ಚಿಕಿತ್ಸೆಗೆ ತೆರಳಿದ್ದ ವೇಳೆ ವೈದ್ಯರು ಬಟ್ಟೆ ಬಿಚ್ಚುವಂತೆ ಹೇಳಿ, ತಾವೆ ಬಟ್ಟೆಯನ್ನು ಎಳೆದು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ವೈದ್ಯರು … Read more

ಶಿವಮೊಗ್ಗ ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ಬಂತು ನಿರ್ಭಯ ಬೈಕ್, ಏನಿದು ನಿರ್ಭಯ ಬೈಕ್? ಹೇಗಿರುತ್ತೆ ಕಾರ್ಯಾಚರಣೆ?

051220 Nirbhaya Bike in Shimoga Police Stations 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 5 DECEMBER 2020 ಮಹಿಳೆಯರ ರಕ್ಷಣೆಗೆ ಶಿವಮೊಗ್ಗದ ಪೊಲೀಸ್ ಠಾಣೆಗಳಿಗೆ ನಿರ್ಭಯ ಬೈಕ್ ಬಂದಿದೆ. ಜಿಲ್ಲೆಯ ಎಲ್ಲಾ ಠಾಣೆಗಳಿಗೆ ಒಂದೊಂದು ಬೈಕ್ ನೀಡಲಾಗಿದೆ. ಏನಿದು ನಿರ್ಭಯ ಬೈಕ್? ಜಿಲ್ಲೆಯ ಪ್ರತಿ ಠಾಣೆಗೆ ಒಂದು ನಿರ್ಭಯ ಬೈಕ್‍ ನೀಡಲಾಗಿದೆ. ತುರ್ತು ಸಂದರ್ಭದಲ್ಲಿ ಮಹಿಳೆಯರು ಕರೆ ಮಾಡಿದರೆ ನಿರ್ಭಯ ಬೈಕ್‍ ಹಾಜರಾಗುತ್ತದೆ. ಮಹಿಳೆಯರ ದೌರ್ಜನ್ಯ ಸಂಬಂಧ ಪ್ರಕರಣಗಳಿಗೆ ಮೀಸಲಾಗಿ ಈ ಬೈಕ್‍ ಬಳಕೆಯಾಗಲಿದೆ. ಮಹಿಳೆಯರು ಸಂಪರ್ಕಿಸುವುದು ಹೇಗೆ? ಪುಂಡರ ಹಾವಳಿ, ವರದಕ್ಷಿಣೆ ಕಿರುಕುಳ … Read more

BREAKING NEWS | ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಮುಂದುವರಿಕೆ, ಇನ್ನೆಷ್ಟು ದಿನ ಸೆಕ್ಷನ್ 144 ಇರುತ್ತೆ?

120720 Sunday Curfew in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 5 DECEMBER 2020 ಶಿವಮೊಗ್ಗ ನಗರದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿಆರ್‌ಪಿಸಿ ಸೆಕ್ಷನ್ 144ರ ಅನ್ವಯ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 7ರವರೆಗೆ ವಿಸ್ತರಿಸಲಾಗಿದೆ ಎಂದು ತಹಶೀಲ್ದಾರ್ ನಾಗರಾಜ್ ಆದೇಶಿಸಿದ್ದಾರೆ. ಮೊದಲಿಗೆ ಡಿಸೆಂಬರ್ 5ರ ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಲಾಗಿತ್ತು. ಆದರೆ ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 7ರವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ನಿಷೇಧಾಜ್ಞೆ ಸಂದರ್ಭದಲ್ಲಿ ಯಾವೆಲ್ಲ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಈ ಹಿಂದೆ ಸೂಚಿಸಲಾಗಿತ್ತೋ, ಅವುಗಳನ್ನು ಪಾಲಿಸುವಂತೆ ತಹಶೀಲ್ದಾರ್ … Read more

ಶಿವಮೊಗ್ಗ ಗಲಭೆ, ಏನೆಲ್ಲ ಬೆಳವಣಿಗೆ ಆಗಿದೆ? ಎಷ್ಟು ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲಾಗಿದೆ? ಹಲ್ಲೆಯ ತನಿಖೆ ಹೇಗಿದೆ?

031220 Shimoga Gandhi Bazaar Bandh 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 5 DECEMBER 2020 ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ, ಬಳಿಕ ನಡೆದ ಗಲಭೆಯಿಂದಾಗಿ ನಿಷೇಧಾಜ್ಞೆ ವಿಧಿಸಲಾಗಿದೆ. ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಘಟನೆ ಸಂಬಂಧ ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ? ಹೊರ ಜಿಲ್ಲೆಯ ಪೊಲೀಸ್ ಶಿವಮೊಗ್ಗ ನಗರದಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿಯಿಂದ ಹೆಚ್ಚುವರಿಯಾಗಿ ಪೊಲೀಸರನ್ನು ಕರೆಯಿಸಲಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶ ಶಿವಮೊಗ್ಗ ನಗರದಲ್ಲಿ 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು … Read more