ಶಿವಮೊಗ್ಗದಲ್ಲಿ ಅಘೋಷಿತ ಬಂದ್ ವಾತಾವರಣ, ಅಂಗಡಿಗಳು ಕ್ಲೋಸ್, ರಸ್ತೆಗಳು ಖಾಲಿ ಖಾಲಿ

031220 Gandhi Bazaar Bandh After Clash 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಬಜರಂಗದಳ ಕಾರ್ಯಕರ್ತನ ಮೇಲಿನ ಹಲ್ಲೆಯಿಂದಾಗಿ ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಬಿಗುವಿನ ವಾತಾವರಣವಿತ್ತು. ಮಧ್ಯಾಹ್ನದಿಂದ ನಿಷೇಧಾಜ್ಞೆ ಜಾರಿಯಾಗುತ್ತಿದ್ದಂತೆ ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧವಾಗಿದೆ. ಮಧ್ಯಾಹ್ನದ ವೇಳೆಗೆ ಶಿವಮೊಗ್ಗ ನಗರದಾದ್ಯಂತ ಅಂಗಡಿಗಳನ್ನು ಬಂದ್ ಮಾಡಿಸಲಾಯಿತು. ಮೆಡಿಕಲ್ ಶಾಪ್‍ಗಳು, ಆಸ್ಪತ್ರೆಗಳು ಸೇರಿದಂತೆ ತುರ್ತು ಸೇವೆ ಒದಗಿಸುವ ಮಳಿಗೆಗಳನ್ನು ಮಾತ್ರ ತೆರೆಯಾಲಾಗಿತ್ತು. ಉಳಿದಂತೆ ಎಲ್ಲಾ ಮಳಿಗೆಗಳನ್ನು ಬಂದ್ ಮಾಡಿಸಲಾಯಿತು. ಪೊಲೀಸರಿಂದ ಅನೌನ್ಸ್‌ಮೆಂಟ್‍ ಜನರು ಗುಂಪುಗೂಡುವುದು ನಿಷೇಧವಿದೆ ಎಂದು ಪೊಲೀಸರು ಮೈಕ್ ಮೂಲಕ ಅನೌನ್ಸ್ … Read more

ಶಿವಮೊಗ್ಗ ಸಿಟಿಯಲ್ಲಿ ಬಿಗುವಿನ ವಾತಾವರಣ, ಪೂರ್ವ ವಲಯ ಐಜಿಪಿ ಭೇಟಿ

031220 IGP Ravi Visit Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಮತ್ತು ಆ ಬಳಿಕ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆ, ಪೂರ್ವ ವಲಯ ಐಜಿಪಿ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಪರಿಸ್ಥಿತಿಯನ್ನು ಅವಲೋಕಸಿದರು. ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಐಜಿಪಿ ರವಿ ಅವರು, ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಐಜಿಪಿ ಭೇಟಿಯ ವಿಡಿಯೋ ರಿಪೋರ್ಟ್ ಇಲ್ಲಿದೆ ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200 ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ಹಳೆ ಶಿವಮೊಗ್ಗ ಭಾಗದಲ್ಲಿ ಕಾರುಗಳಿಗೆ ಕಲ್ಲು ತೂರಾಟ, ಗ್ಲಾಸ್ ಪೀಸ್ ಪೀಸ್

031220 Car Glass Break in Ravivarma Beedhi 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಬೆನ್ನಿಗೆ, ಶಿವಮೊಗ್ಗದ ಕೆಲವು ಕಡೆ ಇವತ್ತು ಮಧ್ಯಾಹ್ನ ಕಾರುಗಳಿಗೆ ಕಲ್ಲು ತೂರಲಾಗಿದೆ. ಕಾರಿನ ಗಾಜುಗಳು ಪುಡಿಯಾಗಿದ್ದು, ಆತಂಕ ಸೃಷ್ಟಿಸಿದೆ. ಶಿವಮೊಗ್ಗದ ರವಿವರ್ಮಾ ಬೀದಿ ಸೇರಿದಂತೆ ಕೆಲವು ಕಡೆ ಕಾರುಗಳಿಗೆ ಕಲ್ಲು ತೂರಲಾಗಿದೆ. ಕಾರಿನ ಗಾಜು ಪುಡಿ ಪುಡಿಯಾಗಿದೆ. ಸಿದ್ದಯ್ಯ ರಸ್ತೆಯಲ್ಲಿ ವಾಹನಗಳಿಗೆ ಹಾನಿ ಮಾಡಲಾಗಿದೆ. ಈ ಬೆಳವಣಿಗೆ ಶಿವಮೊಗ್ಗದಲ್ಲಿ ತೀವ್ರ ಆತಂಕ ಮೂಡಿಸಿದೆ. ಇದೆ ಕಾರಣಕ್ಕೆ ನಗರದಾದ್ಯಂತ ನಿಷೇಧಾಜ್ಞೆಯನ್ನು … Read more

ಶಿವಮೊಗ್ಗ ಗಾಂಧಿ ಬಜಾರ್ ಸಂಪೂರ್ಣ ಬಂದ್, ಬೆಳಗ್ಗೆಯಿಂದ ಏನೇನಾಯ್ತು?

031220 Shimoga Gandhi Bazaar Bandh 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಪಾರ್ಕಿಂಗ್ ಮಾಡಿದ್ದ ವಾಹನವನ್ನು ಹಿಂದಕ್ಕೆ ತೆಗೆಯುವ ವೇಳೆ ಸಂಭವಿಸಿದ ಜಗಳದಿಂದ, ಶಿವಮೊಗ್ಗದ ಗಾಂಧಿ ಬಜಾರ್‍ನಲ್ಲಿ ಇವತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆದರೆ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ. ಗಾಂಧಿ ಬಜಾರ್‍ನಲ್ಲಿ ಏನೇನಾಯ್ತು? ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಖಂಡಿಸಿ, ಯುವಕರು ಗಾಂಧಿ ಬಜಾರ್‍ನಲ್ಲಿ ಗುಂಪುಗೂಡಿದ್ದರು. ಗಾಂಧಿ ಬಜಾರ್‍ನ ಪಾರ್ಕಿಂಗ್‍ನಲ್ಲಿ ನಿಲ್ಲಿಸಿದ್ದ ವಾಹನವನ್ನು ಹಿಂದಕ್ಕೆ ತೆಗೆಯುತ್ತಿದ್ದ ವೇಳೆ ಗಲಾಟೆಯಾಗಿದೆ. ಬಿಗುವಿನ ವಾತವರಣ ನಿರ್ಮಾಣವಾಗಿ, ಗಾಂಧಿ … Read more

ಬಜರಂಗದಳ ಸಹ ಸಂಚಾಲಕನ ಮೇಲೆ ಹಲ್ಲೆ, ಆಸ್ಪತ್ರೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ

031220 SP Visit Metro Hospital Nagesh Attack 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲೆ ಹಲ್ಲೆ ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಆಸ್ಪತ್ರೆಗೆ ಭೇಟಿ ನೀಡಿದರು. ನಾಗೇಶ್ ಬಳಿಯಿಂದ ಮಾಹಿತಿ ಪಡೆದರು. ಮುಖಂಡರಿಂದಲೂ ಮಾಹಿತಿ ನಾಗೇಶ್ ಭೇಟಿ ಬಳಿಕ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಮುಖಂಡರು ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ಆಸ್ಪತ್ರೆ ಬಳಿ ಭೇಟಿಯಾದರು. ನಾಗೇಶ್ ಮೇಲಿನ ಹಲ್ಲೆ ಖಂಡಿಸಿದರು. ದುಷ್ಕರ್ಮಿಗಳನ್ನು ಕೂಡಲೆ ಬಂಧಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಈ ಹಿಂದೆ … Read more

BREAKING NEWS |ಶಿವಮೊಗ್ಗ ಸಿಟಿಯಲ್ಲಿ ನಿಷೇಧಾಜ್ಞೆ ಜಾರಿ, ಏನಿರುತ್ತೆ? ಏನಿರಲ್ಲ?

031220 Shimoga Gandhi Bazaar Bandh 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದಲೇ ನಿಷೇಧಾಜ್ಞೆ ಜಾರಿಗೆ ಬಂದಿದೆ. ಶನಿವಾರದವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಗುರುವಾರ ಮಧ್ಯಾಹ್ನ 3 ಗಂಟೆಯಿಂದ  ಡಿಸೆಂಬರ್ 5ರ ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆಗೆ ಕಾರಣವೇನು? ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಶಿವಮೊಗ್ಗ ನಗರದ ವಿವಿಧೆಡೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು … Read more

ಶಿವಮೊಗ್ಗದಲ್ಲಿ ಬಜರಂಗದಳ ಸಹ ಸಂಚಾಲಕನ ಮೇಲೆ ಹಲ್ಲೆ

031220 Bajarangadal Leader Nagesh Attacked Admitted 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಬಜರಂಗದಳ ಕಾರ್ಯಕರ್ತನೊಬ್ಬನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ಆಗಿದ್ದು ಎಲ್ಲಿ? ಏಕೆ? ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಘಟನೆ ಸಂಭವಿಸಿದೆ. ಬಜರಂಗದಳ ಸಹ ಸಂಚಾಲಕ ನಾಗೇಶ್‍ ಎಂಬಾತನ ಮೇಲೆ ಹಲ್ಲೆಯಾಗಿದೆ. ಬೆಳಗ್ಗೆ ನೆಹರೂ ಕ್ರೀಡಾಂಗಣಕ್ಕೆ ವಾಕಿಂಗ್‍ ಮಾಡಲು ಬರುತ್ತಿದ್ದಾಗ ಹಲ್ಲೆಯಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆಯಾಗಿದ್ದು ಹೇಗೆ? ನಾಗೇಶ್‍ ಬೈಕ್‍ನಲ್ಲಿ ಬರುವಾಗ … Read more

ನೀತಿ ಸಂಹಿತೆ ಹಿನ್ನೆಲೆ, ಮತ್ತೂರು ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್, ಆಟೋ ವಶಕ್ಕೆ

011220 illegal liquor seized at Mattur Road Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 1 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆ ನೀತಿ ಸಂಹಿತೆ ಜಾರಯಾದ ಬೆನ್ನಿಗೆ, ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಮದ್ಯ ಮತ್ತು ಸಾಗಣೆಗೆ ಬಳಸುತ್ತಿದ್ದ ಆಟೋವನ್ನು ವಶಕ್ಕೆ ಪಡೆಯಲಾಗಿದೆ. ಮತ್ತೂರು ರಸ್ತೆಯಲ್ಲಿ ರಸ್ತೆಗಾವಲು ಮಾಡುತ್ತಿದ್ದ ವೇಳೆ ಆಟೋದಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ಆಟೋದಲ್ಲಿ 77.760 ಲೀಟರ್ ಮದ್ಯ ಸಾಗಣೆ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಂತೆಕಡೂರು ಗ್ರಾಮದ ಶೇಖರ್ ಎಂಬಾತನನ್ನು ಬಂಧಿಸಲಾಗಿದೆ. ಆಟೋದ ಮೌಲ್ಯ … Read more

ಶಿವಮೊಗ್ಗ ಎಪಿಎಂಸಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ |SHIMOGA NEWS | 1 DECEMBER 2020 ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶಿವಮೊಗ್ಗ ಎಪಿಎಂಸಿಯಲ್ಲಿ ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ. ಎಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಬಂಧಿತರು. ಐದು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಎಪಿಎಂಸಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಅವರು 10 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಉಮಾ ಮಹೇಶ್ ಎಂಬುವವರು ದೂರು … Read more

ಸಾಗರದ ಸೈದೂರು ಬಳಿ ಅಪಘಾತ, ಬೈಕ್ ಸವಾರನ ತಲೆಗೆ ತೀವ್ರ ಪೆಟ್ಟು, ಸ್ಥಳದಲ್ಲೇ ಸಾವು

ಶಿವಮೊಗ್ಗ ಲೈವ್.ಕಾಂ | SAGARA NEWS | 30 NOVEMBER 2020 ಸೇತುವೆ ಸಮೀಪ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಲೆ ಭಾಗಕ್ಕೆ ಗಾಯವಾಗಿದ್ದು, ತೀವ್ರ ರಕ್ತಸ್ರಾವ ಸಂಭವಿಸಿ ಅಸುನೀಗಿರುವ ಸಾಧ್ಯತೆ ಇದೆ. ಆಲಳ್ಳಿಯ ಜಯಂತ್ ಮೃತ ದುರ್ದೈವಿ. ಸಾಗರ ತಾಲೂಕು ಕೆಲುವೆ – ಸೈದೂರು ನಡುವಿನ ಕನ್ನೊಳೆ ಸೇತುವೆ ಸಮೀಪ ಕಂಬಕ್ಕೆ ಜಯಂತ್ ಚಲಾಯಿಸುತ್ತಿದ್ದ ಬೈಕ್ ಗುದ್ದಿದೆ. ರಾತ್ರಿ ಘಟನೆ ನಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಲ್ಮೆಟ್ ಧರಿಸದೆ ಇದ್ದುದರಿಂದ … Read more