ಮಲವಗೊಪ್ಪದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಇಬ್ಬರು ಅರೆಸ್ಟ್, 40 ಸಾವಿರ ಹಣ ವಶಕ್ಕೆ

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020 ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿ 40 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ನಗರದ ಮಲವಗೊಪ್ಪ ಬಸ್ ಸ್ಟಾಪ್‍ನಲ್ಲಿ ಆರೋಪಿಗಳು  ಐಪಿಎಲ್‍ ಕ್ರಿಕೆಟ್‍ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಮತ್ತು ಸಿಬ್ಬಂಂದಿಗಳನ್ನೊಳಗೊಂಡ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಮಲವಗೊಪ್ಪದ ಮಹ್ಮದ ಮಸೂದ್ (43), ಜೆಪಿ ನಗರದ … Read more

ಮೆಗ್ಗಾನ್ ಆಸ್ಪತ್ರೆಯಲ್ಲಿ ನವಜಾತ ಶಿಶುಗಳು ಅದಲು ಬದಲು, ಗೊಂದಲ, ಗದ್ದಲ, ಪೊಲೀಸ್ ಠಾಣೆಯಲ್ಲಿ ಸುಖಾಂತ್ಯ

Mc-Gann-Hospital

ಶಿವಮೊಗ್ಗ ಲೈವ್.ಕಾಂ |SHIMOGA NEWS | 7 NOVEMBER 2020 ಮೆಗ್ಗಾನ್ ಆಸ್ಪತ್ರೆಯಲ್ಲಿ ನವಜಾತ ಗಂಡು ಶಿಶುಗಳು ಅದಲು ಬದಲಾದ ಪ್ರಕರಣ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಅಸುನೀಗಿದ್ದ ಮಗುವನ್ನು ಬೇರೆ ಪೋಷಕರಿಗೆ ಹಸ್ತಾಂತರಿಸಿ ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿಕೊಂಡಿದ್ದಾರೆ. ಪೊಲೀಸ್ ಕಾನ್ಸ್‍ಟೇಬಲ್ ಮಗು ಉತ್ತರ ಕರ್ನಾಟಕದ ಪೊಲೀಸ್ ಸಿಬ್ಬಂದಿಯೊಬ್ಬರು ಸಾಗರದ ಯುವತಿಯನ್ನು ಮದುವೆಯಾಗಿದ್ದರು. ಐದು ದಿನದ ಹಿಂದೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದರಿಂದ ಮೆಗ್ಗಾನ್ ಆಸ್ಪತ್ರೆಯ ಐಸಿಯುವನಲ್ಲಿ ಮಗುವಿಗೆ … Read more

ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಅವರ ಸಾಗರದ ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು

theft case general image

ಶಿವಮೊಗ್ಗ ಲೈವ್.ಕಾಂ |SAGARA NEWS | 7 NOVEMBER 2020 ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಕೆ.ಎಸ್.ಗುರುಮೂರ್ತಿ ಅವರ ಸಾಗರದ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಸಾಗರದ ಪ್ರಗತಿನಗರದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಕಳ್ಳರು ಒಳಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ. ಆದರೆ ಯಾವುದೆ ವಸ್ತುಗಳನ್ನು ಕದ್ದೊಯ್ದಿಲ್ಲ ಎಂದು ಹೇಳಲಾಗುತ್ತಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more

ಶಿವಮೊಗ್ಗದ ಗೋಪಾಳ ಸಮೀಪ ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಅರೆಸ್ಟ್

071120 Tunganagara Police Arrest Thieves 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 7 NOVEMBER 2020 ಶಿವಮೊಗ್ಗದ ಗೋಪಾಳ ಸಮೀಪ ದರೋಡೆಗೆ ಹೊಂಚು ಹಾಕಿದ್ದ ಇಬ್ಬರನ್ನು ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಪಾಳದಿಂದ ಅನುಪಿನಕಟ್ಟೆಗೆ ಹೋಗುವ ಮಾರ್ಗದಲ್ಲಿ ಇರುವ ಚಾನಲ್‍ನ ಸೇತುವೆ ಬಳಿ ದರೋಡೆಗೆ ಸಂಚು ರೂಪಿಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜೆ.ಪಿ.ನಗರದ ಜುಬೇರ್ ಅಲಿಯಾಸ್ ಜುಬೇರ್  ಉಲ್ಲಾ (28), ಸಾದಿಕ್ ಶೇಖ್ (35) ಬಂಧಿತರು. ಟಿಪ್ಪು ನಗರದ ಕುಲ್ಡ ರಿಯಾಜ್, ನೇಪಾಳಿ ಸಲ್ಮಾನ್, … Read more

ಆಮೆ, ಮಣ್ಣು ಮುಕ್ಕ ಹಾವು ಮಾರಾಟಗಾರರು ಅರಣ್ಯ ಸಂಚಾರಿ ದಳದ ಬಲೆಗೆ

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 NOVEMBER 2020 ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ದಾಳಿ ನಡೆಸಿ ಆಮೆ ಮತ್ತು ಮಣ್ಣು ಮುಕ್ಕ ಹಾವು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. 0 ಶಿವಮೊಗ್ಗ ತಾಲೂಕು ವೀರಗಾರನ ಭೈರನಕೊಪ್ಪದ ರಮೇಶ್ ನಾಯ್ಕ್, ರಾಣೆಬೆನ್ನೂರು ತಾಲೂಕು ಕಜ್ಜರಿ ಗ್ರಾಮದ ಜಗದೀಶ ರಾಮಪ್ಪ ತಿಮ್ಮಜ್ಜಿ, ದಾವಣಗೆರೆ ತಾಲೂಕು ಹೊನ್ನೂರಿನ ಹರೀಶ ಮತ್ತು ಹೊಸನಗರ ತಾಲೂಕು ಹಾಲುಗುಡ್ಡೆ ಬಾಳೂರಿನ ನಾಗೇಂದ್ರ ಬಂಧಿತರು. ಹರಿಹರದಲ್ಲಿ ಒಂದು … Read more

ನಾಲ್ವರು ಸರಗಳ್ಳರು ಅರೆಸ್ಟ್, 2.64 ಲಕ್ಷ ಮೌಲ್ಯದ ಆಭರಣ ವಶಕ್ಕೆ, ಕಳ್ಳರು ಸಿಕ್ಕಿಬಿದ್ದಿದ್ದು ಹೇಗೆ?

051120 Chain Snatchers Arrest in Shiralakoppa 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 5 NOVEMBER 2020 ಸರಗಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಶಿಕಾರಿಪುರ ತಾಲೂಕು ಪೊಲೀಸರು ಬಂಧಿಸಿದ್ದಾರೆ. ಕಳ್ಳರಿಂದ 2.64 ಲಕ್ಷ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ತಾಲೂಕು ಭದ್ರಾಪುರದ ಕೃಷ್ಣಪ್ಪ ಅಲಿಯಾಸ್ ಬಾಲಕೃಷ್ಣ (60), ನೇರಪ್ಪ (42), ಹೊಸೂರು ಗ್ರಾಮದ ವೀರೇಶ (29) ಮತ್ತು ನ್ಯಾಮತಿ ತಾಲೂಕು ಪಂಚಪ್ಪ (48) ಬಂಧಿತರು. ಇವರಿಂದ 2.64 ಲಕ್ಷ ಮೌಲ್ಯದ 67 ಗ್ರಾಂ ಚಿನ್ನದ ಆಭರಣ, 1.20 ರೂ. ಲಕ್ಷ … Read more

ರಿಪ್ಪನ್‌ಪೇಟೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ, ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಿಗ ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 NOVEMBER 2020 ಖಾತೆ ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ನಾಡ ಕಚೇರಿಯಲ್ಲಿ ಖಾತೆ ಬದಲಾವಣೆಗಾಗಿ ವ್ಯಕ್ತಿಯೊಬ್ಬರಿಗೆ ಈತ ಒಂದು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ರಿಪ್ಪನ್‍ಪೇಟೆ ನಾಡ ಕಚೇರಿಯಲ್ಲಿ ಇವತ್ತು ಮಧ್ಯಾಹ್ನ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಗ್ರಾಮ ಲೆಕ್ಕಿಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈತನನ್ನು ಬಂಧಿಸಲಾಗಿದೆ. ರಾಘವೇಂದ್ರ, ಬಂಧನಕ್ಕೊಳಗಾದ ಗ್ರಾಮ ಲೆಕ್ಕಿಗ. ಜೋಸೆಫ್ … Read more

ಫೇಸ್ ಬುಕ್ ಮೆಸೆಂಜರ್‌ನಲ್ಲಿ ಮಕ್ಕಳ ಅಶ್ಲೀಲ ವೀಡಿಯೋ ಫಾರ್ವರ್ಡ್, ನಿಧಿಗೆ ಯುವಕ ಅರೆಸ್ಟ್

facebook logo

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 4 ನವೆಂಬರ್ 2020 ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್‌ಬುಕ್ ಮೆಸೆಂಜರ್ ಮೂಲಕ ಫಾರ್ವರ್ಡ್ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ನಿದಿಗೆಯ ರಘು (25) ಎಂದು ಗರುತಿಸಲಾಗಿದೆ. ಈತ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೈಬರ್ ಟಿಪ್ ‌ಲೈನ್‌ನಿಂದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ರಘು ಎಂಬಾತನನ್ನು ಬಂಧಿಸಲಾಗಿದೆ. ಮಕ್ಕಳ ಅಶ್ಲೀಲ ವೀಡಿಯೋ ಅಥವಾ ಚಿತ್ರಗಳನ್ನು ಅಂತರ್ಜಾಲದ … Read more

ಶಿವಮೊಗ್ಗ ತಿಲಕ್ ನಗರದ ಮೊಬೈಲ್ ಅಂಗಡಿಯಲ್ಲಿ ಐಪಿಎಲ್ ಬೆಟ್ಟಿಂಗ್, ಮೂವರು ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 NOVEMBER 2020 ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21ಲಕ್ಷ ರೂ. ಹಾಗೂ 3 ಮೊಬೈಲ್ ಫೋನ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಿಲಕ್‌ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್‌ನಲ್ಲಿರುವ, ಮೊಬೈಲ್‌ ಆಂಗಡಿ ಒಂದರಲ್ಲಿ ಆರೋಪಿಗಳು ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ … Read more

ಆಗುಂಬೆ ಸಮೀಪ ಕಾಣೆಯಾಗಿದ್ದ ಮಹಿಳೆ ಶವವಾಗಿ ಮಾಲತಿ ನದಿಯಲ್ಲಿ ಪತ್ತೆ

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 3 NOVEMBER 2020 ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಕಾಣೆಯಾಗಿದ್ದ ಮಹಿಳೆಯ ಶವ ಮಾಲತಿ ನದಿಯಲ್ಲಿ ಪತ್ತೆಯಾಗಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಮೃತರನ್ನು ಮಧುರಾ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಮಧುರಾ, ಲಾಕ್‍ಡೌನ್ ವೇಳೆ ತವರು ಶಿರೂರು ಗ್ರಾಮದ ಜಾವಗಲ್‍ಗೆ ಬಂದಿದ್ದರು. ಶನಿವಾರ ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದ ಮಧುರಾ ಕಾಣೆಯಾಗಿದ್ದರು. ಸೋಮವಾರ ಸಂಜೆ ಮಧುರಾ ಅವರ … Read more