ಶಿವಮೊಗ್ಗ ವಿದ್ಯಾನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಇಬ್ಬರು ಬೈಕ್ ಸವಾರರು ಸಾವು, ಹೇಗಾಯ್ತು ಘಟನೆ?

210720 Vidyanagara Accident in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020 ಲಾರಿ ಮತ್ತು ಬೈಕ್‍ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಬೈಕ್ ಸಾವರರು ಮೃತರಾಗಿದ್ದಾರೆ. ವಿದ್ಯಾನಗರದ ದುರ್ಗಮ್ಮ ಬೀದಿ ಬಳಿ ಬಿ.ಹೆಚ್‍.ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಹೇಗಾಯ್ತು ಅಪಘಾತ? ತುಂಗಾ ನದಿ ಸೇತುವೆ ಕಡೆಯಿಂದ ತೆರಳುತ್ತಿದ್ದ ಬೈಕ್‍ ಮತ್ತು ಭದ್ರಾವತಿ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಡಬಲ್ ರೋಡ್ ಇದ್ದರೂ ಲಾರಿ ಮತ್ತು ಬೈಕ್ ಒಂದೇ ಬದಿಯಲ್ಲಿ ಬಂದಿದ್ದರಿಂದ ಮುಖಾಮುಖಿ ಡಿಕ್ಕಿಯಾಗಿವೆ ಎಂದು … Read more

ಲಾಕ್ ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕೇಸ್, ಬೈಕ್ ಸೀಜ್, ಯಾವ್ಯಾವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ?

Police-General-Image-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020 ಲಾಕ್‍ ಡೌನ್ ಆದೇಶ ಉಲ್ಲಂಘಿಸಿ ಅನಾವಶ್ಯಕವಾಗಿ ಬೈಕ್‍ನಲ್ಲಿ ಸುತ್ತಾಡುತ್ತಿದ್ದ ನಾಲ್ಕು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೇಸ್ 1 ಸಾಗರ ಟೌನ್ ಪೊಲೀಸ್ ಠಾಣೆ | ಜುಲೈ 15ರಂದು ರಾತ್ರಿ ಲಾಕ್‍ ಡೌನ್ ನಿಯಮ ಉಲ್ಲಂಘಿಸಿ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿದ್ದ ನಾಲ್ವರ ವಿರುದ್ಧ ಎನ್‍ಡಿಎಂಎ ಕಾಯ್ದೆ ಅನ್ವಯ ಪ್ರತ್ಯೇಕವಾಗಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರ ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ. ಕೇಸ್ 2 ತುಂಗಾ ನಗರ … Read more

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಶಿವಮೊಗ್ಗದಲ್ಲಿ ರೌಡಿ ಶೀಟರ್ ಹತ್ಯೆ

vinobanagara police station

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2020 ತಲೆ ಮೇಲೆ ಕಲ್ಲು ಎತ್ತಿ ಹಾಕಿ ರೌಡಿ ಶೀಟರ್ ಒಬ್ಬನ ಹತ್ಯ ಮಾಡಲಾಗಿದೆ. ಬಸವನಗಂಗೂರು ಗ್ರಾಮದ ಸಮೀಪ ಕೊಲೆ ಮಾಡಲಾಗಿದೆ. ನವುಲೆಯ ನಾಗೇಶ (30) ಹತ್ಯೆಯಾದವನು. ಶಿವಮೊಗ್ಗದ ಮಾರುತಿ ಬಡಾವಣೆಯ ವಾಸಿಯಾಗಿದ್ದ ಈತನ ವಿರುದ್ಧ ಶಿವಮೊಗ್ಗ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಸ್ಥಳಕ್ಕೆ ವಿನೋಬನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗುತ್ತಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ … Read more

ಶಿವಮೊಗ್ಗ ಜಯನಗರದಲ್ಲಿ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಆಡಿಟರ್ ನೇಣು ಬಿಗಿದು ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020 ಪ್ರೇಮ ವೈಫಲ್ಯದ ಹಿನ್ನೆಲೆ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ ಒಂದರ ಆಡಿಟರ್‌ ಒಬ್ಬರು ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್‌ (24) ಆತ್ಮಹತ್ಯೆ ಮಾಡಿಕೊಂಡವರು. ಶಿವಮೊಗ್ಗದ ಜಯನಗರದಲ್ಲಿ ಬಾಡಿಗೆ ರೂಂ ಮಾಡಿಕೊಂಡು ವಾಸವಾಗಿದ್ದ ಸಚಿನ್‌, ಅದೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈತ ಪ್ರೇಮಿಸುತ್ತಿದ್ದ ಯುವತಿಗೆ ಇತ್ತೀಚೆಗಷ್ಟೇ ಮದುವೆಯಾಗಿತ್ತು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಸಚಿನ್‌, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಪೋಷಕರು ದೂರಿನಲ್ಲಿ … Read more

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಮೂವರ ವಿರುದ್ಧ ಶಿವಮೊಗ್ಗ, ಸಾಗರದಲ್ಲಿ ಕೇಸ್

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020 ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಮೂವರ ವಿರುದ್ಧ ಶಿವಮೊಗ್ಗದಲ್ಲಿ ಕೇಸ್ ದಾಖಲಾಗಿದೆ. ಹೋಂ ಕ್ವಾರಂಟೈನ್ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಮೂವರ ವಿರುದ್ಧ ಕೇಸ್ ಆಗಿದೆ. ಎಲ್ಲೆಲ್ಲಿ ಕೇಸ್ ಆಗಿದೆ? ಶಿವಮೊಗ್ಗ | ತುಂಗಾ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಬ್ಬರು ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಗರ | ತಾಲೂಕಿನ ಗ್ರಾಮವೊಂದರ ವ್ಯಕ್ತಿಯೊಬ್ಬರು ಕ್ವಾರಂಟೈನ್ ನಿಯಮ ಉಲ್ಲಂಘಿಸಿರುವ … Read more

ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯಲ್ಲಿ ಪೊಲೀಸರಿಂದ ದಾಳಿ, ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಟಿಪ್ಪುನಗರದ ಇಬ್ಬರು ಅರೆಸ್ಟ್

260620 Police Raid On Cow Smugglers 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020 ಅಕ್ರಮವಾಗಿ ಗೋ ಸಾಗಣೆ ಮಾಡು‍ತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರನ್ನು ಬಂಧಿಸಿದ್ದು, ಎಂಟು ಹಸುಗಳನ್ನು ರಕ್ಷಿಸಿದ್ದಾರೆ. ಟಿಪ್ಪುನಗರದ ಮೊಹಮ್ಮದ್(25) ಮತ್ತು ಚಾಂದ್ ಪೀರ್( 45) ಬಂಧಿತರು. ಬೊಲೆರೋ ವಾಹನದಲ್ಲಿ ಎಂಟು ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದರು. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಕಾನೆಹಳ್ಳ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದರು.   ಖಚಿತ ಮಾಹಿತಿ ಮೇರೆಗೆ ದಾಳಿ ಅಕ್ರಮ ಗೋ ಸಾಗಣೆ ಕುರಿತು ಖಚಿತ … Read more

ಹಸೆಮಣೆ ಏರಬೇಕಿದ್ದ ಯುವಕ ದಿಢೀರ್ ನಾಪತ್ತೆ, ಮೂರು ದಿನದ ಬಳಿಕ ತುಂಗಾ ನದಿಯಲ್ಲಿ ಮೃತದೇಹ ಪತ್ತೆ

Tunga Nagara Police station building

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಜೂನ್ 2020 ಮೂರು ದಿನದ ಹಿಂದೆ ಕಾಣೆಯಾಗಿದ್ದ ಯುವಕನ ಮೃತದೇಹ ತುಂಗಾ ನದಿಯಲ್ಲಿ ಪತ್ತೆಯಾಗಿದೆ. ಯುವಕನ ಸಾವಿನ ಕುರಿತು ಅನುಮಾನ ಮೂಡಿದ್ದು, ತನಿಖೆ ನಡೆಯುತ್ತಿದೆ. ಅರುಣ್ (29) ಮೃತ ಯುವಕ. ಶಿವಮೊಗ್ಗ KSRTC ವಿಭಾಗೀಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಮೂರು ದಿನದ ಹಿಂದೆ ಅರುಣ್ ನಾಪತ್ತೆ ಆಗಿರುವ ಕುರಿತು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪರ್ಸು, ಮೊಬೈಲ್, ಶೂ ಪತ್ತೆ ಮೂರು ದಿನದ ಹಿಂದೆ … Read more

ಪೆಟ್ರೋಲ್ ಹಾಕಿಸಿಕೊಂಡು ಹಣ ಕೊಡದೆ ಸಿಬ್ಬಂದಿಯನ್ನೇ ಬೆದರಿಸಿ ದರೋಡೆ ಮಾಡಿದ್ದ ಐವರು ಈಗ ಕಂಬಿ ಹಿಂದೆ

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಮೇ 2020 ಬಂಕ್‍ನಲ್ಲಿ ಪೆಟ್ರೋಲ್ ಹಾಸಿಕೊಂಡು ಹಣ ಕೊಡದೆ, ಸಿಬ್ಬಂದಿಯನ್ನೇ ಬದೆರಿಸಿ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದ ಐವರು ಈಗ ಕಂಬಿ ಎಣಿಸುವಂತಾಗಿದೆ. ಸವಳಂಗ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಒಂದರಲ್ಲಿ ಭಾನುವಾರ ಮಧ್ಯಾಹ್ನ ಘಟನೆ ನಡೆದಿತ್ತು. ಬೈಕ್‍ನಲ್ಲಿ ಬಂದಿದ್ದ ಐವರು ಪೆಟ್ರೋಲ್ ಹಾಕಿಸಿಕೊಂಡಿದ್ದಾರೆ. ಹಣ ನೀಡುವ ಬದಲು ಸಿಬ್ಬಂದಿಯನ್ನೇ ಬೆದರಿಸಿ 4500 ರೂ. ದರೋಡೆ ಮಾಡಿಕೊಂಡು ಹೋಗಿದ್ದವರು. ಮೋಜು, ಮಸ್ತಿ, ಐಷಾರಾಮಿ ಬದುಕಿನ ಆಸೆ ಶಿವಮೊಗ್ಗದ ನಾಸೀಜ್, … Read more

ಕರೋನ ಸೋಂಕಿತರ ವಿರುದ್ಧ ತೀರ್ಥಹಳ್ಳಿ, ಶಿವಮೊಗ್ಗದ ತುಂಗಾ ನಗರ ಠಾಣೆಗಳಲ್ಲಿ ಕೇಸ್, ಕಾರಣವೇನು? ಕೇಸ್ ಹಾಕಿದ್ಯಾರು?

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಮೇ 2020 ಅಧಿಕೃತ ಪಾಸ್ ಇಲ್ಲದೆ ಅನ್ಯರಾಜ್ಯದಿಂದ ಶಿವಮೊಗ್ಗ ಜಿಲ್ಲೆಗೆ ಬಂದವರ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ಪ್ರತ್ಯೇಕ ಪ್ರಕರಣದಲ್ಲಿ ಐವರ ವರುದ್ಧ ಕೇಸ್ ದಾಖಲಾಗಿದೆ. ಈ ಐವರು ಕರೋನ ಸೋಂಕಿಗೆ ತುತ್ತಾಗಿದ್ದಾರೆ. ಕೇಸ್ 1 | ತೀರ್ಥಹಳ್ಳಿ ಪೊಲೀಸ್ ಠಾಣೆ ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ NDMA ಕಾಯ್ದೆಯ ಸೆಕ್ಷನ್ 51(B) ಅನ್ವಯ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಈ ವ್ಯಕ್ತಿ … Read more

ಐದು ದಿನದಿಂದ ಬಾಗಿಲು ತೆಗೆಯದ ಮನೆಯಿಂದ ಬರ್ತಿತ್ತು ದುರ್ವಾಸನೆ, ಬಾಗಿಲು ಒಡೆದು ಒಳ ಹೋದವರಿಗೆ ಶಾಕ್

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಮೇ 2020 ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿಯೆ ಸಾವನ್ನಪ್ಪಿದ್ದಾರೆ. ಇವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹಿಳೆ ಮೃತಪಟ್ಟಿದ್ದರೂ ಅವರ ಮಗಳು ಕಳೆದ ಐದು ದಿನದಿಂದ ಮೃತದೇಹದ ಜೊತೆಗೆ ಮನೆಯೊಳಗಿದ್ದದ್ದು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಅಲ್ಲದೆ ಸಾವಿನ ಕುರಿತು ಅನುಮಾನ ಮೂಡುವಂತೆ ಮಾಡಿದೆ. ಏನಿದು ಪ್ರಕರಣ? ಹೇಗಾಯ್ತು ಘಟನೆ? ನಿವೃತ್ತ ಶಿಕ್ಷಕಿ ರಾಜೇಶ್ವರಿ (64) ಮೃತರು. ಇವರು ಬಸವನಗುಡಿಯ 5ನೇ ಅಡ್ಡರಸ್ತೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಕ್ಯಾನ್ಸರ್‍ನಿಂದ … Read more