ಶಿವಮೊಗ್ಗದ ಮಹಿಳೆಯರೆ ಹುಷಾರ್‌, ದಾಖಲಾಯ್ತು ಮತ್ತೊಂದು ಕೇಸ್‌

Crime-News-General-Image

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಳೆದ ಕೆಲವು ದಿನದಿಂದ ಮತ್ತೆ ಚಿನ್ನದ ಸರ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಮಹಿಳೆಯೊಬ್ಬರು ಶಾಪಿಂಗ್‌ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮರಳುತ್ತಿದ್ದಾಗ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಅರ್ಧ ಭಾಗ ಚಿನ್ನದ ಸರ ಕಸಿದು ಪರಾರಿಯಾಗಿದ್ದಾನೆ. ಸಂಗೀತಾ ಎಂಬುವವರು ಗೋಪಾಳದಲ್ಲಿ ಶಾಪಿಂಗ್‌ ಮುಗಿಸಿ ತಮ್ಮ ದ್ವಿಚಕ್ರ ವಾಹನವನ್ನು ಚಲಾಯಿಸಿಕಂಡು ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಮನೆಗೆ ಮರಳುತ್ತಿದ್ದರು. ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜು ಎದುರು ರಸ್ತೆಯಲ್ಲಿ ಮತ್ತೊಂದು ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ, ಸಂಗೀತಾ ಅವರ ಕೊರಳಿಗೆ ಕೈ … Read more

ತುಮಿಳುನಾಡಿನಿಂದ ಬಂದ ಲಾರಿ ಮೇಲೆ ಶಿವಮೊಗ್ಗ DySP ನೇತೃತ್ವದಲ್ಲಿ ದಾಳಿ, ಲಕ್ಷ ಲಕ್ಷದ ವಸ್ತುಗಳು ಸೀಜ್‌

Police-Van-in-Shimoga-City

ಶಿವಮೊಗ್ಗ: ಸಾರಿಗೆ ಅಧಿಕಾರಿಗಳಿಂದ ಪರವಾನಗಿ ಪಡೆಯದೆ, ಸುರಕ್ಷಿತ ಕ್ರಮ ಕೈಗೊಳ್ಳದೆ ಪಟಾಕಿ ಸಾಗಿಸುತ್ತಿದ್ದ ಲಾರಿಯನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ₹4,15,741 ಮೌಲ್ಯದ ಪಟಾಕಿ ಜಫ್ತಿ ಮಾಡಲಾಗಿದೆ. ತಮಿಳುನಾಡಿನ ಶಿವಾಕಾಶಿಯಿಂದ ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗೋಡೋನ್‌ಗಳಿಗೆ ಪಟಾಕಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಸಂಜೀವ್‌ ಕುಮಾರ್‌ ನೇತೃತ್ವದಲ್ಲಿ ವಿರೂಪಿನಕೊಪ್ಪ ಬಳಿ ದಾಳಿ ನಡೆಸಿದ ಪೊಲೀಸರು, ದಾಖಲೆಗಳ ಪರಿಶೀಲನೆ ನಡೆಸಿದರು. ಸ್ಪೋಟಕ ವಸ್ತುಗಳ ಸಾಗಣೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಅನುಮತಿ ಪಡೆದಿಲ್ಲ. ಲಾರಿಯಲ್ಲಿ ಅಗ್ನಿ ನಿರೋಧಕ ವಸ್ತುಗಳು … Read more

ಶಿವಮೊಗ್ಗದಲ್ಲಿ ರಾತ್ರೋರಾತ್ರಿ ಆಟೋ ನಾಪತ್ತೆ, ಆಗಿದ್ದೇನು?

Doddapete-Police-Station.

ಶಿವಮೊಗ್ಗ: ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾ ಕಳ್ಳತನವಾಗಿದೆ. ನಗರದ ಬಿ.ಬಿ.ರಸ್ತೆಯ ಅಂಚೆ ಕಚೇರಿ ಸಮೀಪ ಘಟನೆ ಸಂಭವಿಸಿದೆ. ನಾಗರಾಜ್‌ ಎಂಬುವವರು ಎಂದಿನಂತೆ ಬಾಡಿಗೆ ಮುಗಿಸಿ ಬಂದು ರಾತ್ರಿ 9 ಗಂಟೆ ಹೊತ್ತಿಗೆ ಮನೆ ಮುಂದೆ ಆಟೋ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಮನೆಯಿಂದ ಹೊರ ಬಂದಾಗ ಆಟೋ ರಿಕ್ಷಾ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಎಲ್ಲೆಡೆ ಹುಡುಕಿದ ನಾಗರಾಜ್‌ ಅವರು ಬಳಿಕ ದೂರು‌ ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಲಾರಿ ಚಕ್ರದಡಿ ಸಿಲುಕಿದ ಬೈಕ್‌, … Read more

ಗೋಪಾಳದಲ್ಲಿ ಕಾರ್ಮಿಕನ ಮರ್ಮಾಂಗಕ್ಕೆ ಗಂಭೀರ ಪೆಟ್ಟು, ಆಗಿದ್ದೇನು?

Shimoga-News-update

ಶಿವಮೊಗ್ಗ: ಗೋಪಾಳದ ಪ್ರೆಸ್‌ ಕಾಲೋನಿಯಲ್ಲಿ ಮರ ಕತ್ತರಿಸುವ ಕಾಮಗಾರಿ ವೇಳೆ ಅವಘಡ ಉಂಟಾಗಿ ಕಾರ್ಮಿಕನ ಮರ್ಮಾಂಗಕ್ಕೆ ಗಂಭೀರ ಗಾಯವಾಗಿದೆ. ಘಟನೆ ಸಂಬಂಧ ಮೇಸ್ತ್ರಿ ಮತ್ತು ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಮಿಕ ಹನುಮನಂತಪ್ಪ ಎಂಬುವವರು ಗಾಯಗೊಂಡಿದ್ದಾರೆ. ಗೋಪಾಳದಲ್ಲಿರುವ ಸುರೇಶ್ ಎಂಬುವವರ ಮನೆ ಬಳಿ ಮರದ ಬುಡವನ್ನು ಗ್ರಾನೈಟ್ ಕಟ್ ಮಾಡುವ ಮಿಷನ್‌ನಿಂದ ಕತ್ತರಿಸುವ ಕೆಲಸ ಮಾಡಿಸಲಾಯಿತು. ಮಿಷನ್ ನಿಯಂತ್ರಣ ತಪ್ಪಿ ಹಿಂದಕ್ಕೆ ಬಂದು ಹನುಮಂತಪ್ಪ ಅವರ ಮರ್ಮಾಂಗಕ್ಕೆ ಬಡಿದಿದೆ ಎಂದು ಆರೋಪಿಸಲಾಗಿದೆ. ಕೂಡಲೆ ಅವರನ್ನು ಮೆಗ್ಗಾನ್‌ … Read more

ದೀಪೋತ್ಸವ ಮುಗಿದ ಮರುದಿನ ಬೆಳಗ್ಗೆ ದೇವಸ್ಥಾನಕ್ಕೆ ಬಂದ ಅರ್ಚಕರಿಗೆ ಕಾದಿತ್ತು ಶಾಕ್

Crime-News-General-Image

ಶಿವಮೊಗ್ಗ: ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್‌ನಲ್ಲಿರುವ ಶ್ರೀ ಸಿದ್ದಿ ಬುದ್ದಿ ಮಹಾಗಣಪತಿ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇವರ ಬೆಳ್ಳಿಯ ಮುಖವಾಡ ಮತ್ತು ಹುಂಡಿಯಲ್ಲಿದ್ದ ಕಾಣಿಕೆ ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ದೀಪೋತ್ಸವ ಮುಗಿದ ರಾತ್ರಿಯೆ ಕಳ್ಳತನ ಕಾರ್ತಿಕ ದೀಪೋತ್ಸವದ ಪೂಜೆ ಮುಗಿಸಿ ದೇವಸ್ಥಾನದ ಬಾಗಿಲುಗಳನ್ನು ಹಾಕಿಕೊಂಡು ಹೋದ ನಂತರ ಕೃತ್ಯ ನಡೆದಿದೆ. ಮರುದಿನ ಬೆಳಗ್ಗೆ 6 ಗಂಟೆಗೆ ಅರ್ಚಕರು ಬಂದು ನೋಡಿದಾಗ ಶ್ರೀ ಚೌಡೇಶ್ವರಿ ದೇವಸ್ಥಾನದ ಮುಖ್ಯ ಬಾಗಿಲು ಒಡೆದಿದ್ದು ಕಂಡುಬಂದಿದೆ. ಗರ್ಭಗುಡಿಯಲ್ಲಿ ವಿಗ್ರಹದ … Read more

ತಾಯಿ ಜೊತೆ ಬೈಕ್‌ನಲ್ಲಿ ತೆರಳುವಾಗ ಜೋರಾಗಿ ಕೂಗಿದ ಬಾಲಕಿ, ನಿಲ್ಲಿಸಿ ನೋಡಿದಾಗ ಕಾದಿತ್ತು ಆಘಾತ

Police-Jeep-in-Shimoga-city

ಶಿವಮೊಗ್ಗ: ಟ್ಯೂಷನ್‌ ಮುಗಿಸಿ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಾಲಕಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ವ್ಯಕ್ತಿಯೊಬ್ಬ ಕಸಿದುಕೊಂಡು ಪರಾರಿಯಾಗಿದ್ದಾನೆ. ಶಿವಮೊಗ್ಗದ ಗೋಪಾಳದ ರಾಮಕೃಷ್ಣ ಶಾಲೆ ಬಳಿ ಘಟನೆ ಸಂಭವಿಸಿದೆ. ರೂಪಾ ಎಂಬುವವರು ತಮ್ಮ ಮಗಳು ಐಶ್ವರ್ಯಾಳನ್ನು ಟ್ಯೂಷನ್‌ನಿಂದ ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದರ. ಸಂಜೆ ಸುಮಾರು 6:50ರ ಹೊತ್ತಿಗೆ ಈ ಘಟನೆ ನಡೆದಿದೆ. ದ್ವಿಚಕ್ರ ವಾಹನದ ಹಿಂಬದಿಗೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಮಗಳ ಕುತ್ತಿಗೆಗೆ ಕೈ ಹಾಕಿ ಸರ ಕಸಿದಿದ್ದಾನೆ. ಈ ಸಂದರ್ಭ … Read more

ವಿನೋಬನಗರದಲ್ಲಿ ತರಕಾರಿ ಮಾರಾಟ ಮಾಡಿ ತೆರಳುತ್ತಿದ್ದ ಮಹಿಳೆಗೆ ಆಗಂತುಕನಿಂದ ಆಘಾತ, ಆಗಿದ್ದೇನು?

Doddapete-Police-raid-on-Lodge-in-Shimoga.

ಶಿವಮೊಗ್ಗ: ತರಕಾರಿ ಮಾರಾಟ ಮಾಡಿ ಮನೆಗೆ ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಸಿದ ಕಳ್ಳರು ಬೈಕಿನಲ್ಲಿ ಪರಾರಿಯಾಗಿದ್ದಾರೆ. ಶಿವಮೊಗ್ಗ ವಿನೋಬನಗರ 16ನೇ ಕ್ರಾಸ ತಿರುವಿನಲ್ಲಿ ಘಟನೆ ಸಂಭವಿಸಿದೆ. ಹೊನ್ನಮ್ಮ ಎಂಬುವವರು ಎಪಿಎಂಸಿ ಮುಂಭಾಗ ಮರದ ಅಡಿ ಕುಳಿತು ತರಕಾರಿ ವ್ಯಾಪಾರ ಮಾಡುತ್ತಾರೆ. ಎಂದಿನಂತೆ ವ್ಯಾಪಾರ ಮುಗಿಸಿ ಮನೆಗೆ ಮಧ್ಯಾಹ್ನ ಮನೆಗೆ ನೆಡದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಹೊನ್ನಮ್ಮ ಅವರ ಹಿಂದಿನಿಂದ ಬಂದ ಯುವಕನೊಬ್ಬ ಕೊರಳಲಿದ್ದ ಸರ ಕಸಿದುಕೊಂಡು ಓಡಿಹೋಗಿದ್ದಾನೆ. ಸ್ವಲ್ಪ ದೂರದಲ್ಲಿ ಮತ್ತೊಬ್ಬ … Read more

ಶಿವಮೊಗ್ಗದ ಲಾಡ್ಜ್‌ ರೂಮಿನಲ್ಲಿ ಬೆಂಕಿ ಕೇಸ್‌, ಪುರುಷ, ಮಹಿಳೆ ವಿರುದ್ಧವೇ ಕೇಸ್‌, ಏನೇನಿದೆ ದೂರಿನಲ್ಲಿ?

Shimoga-Lodge-incident-Doddapete-police-visit-the-spot

ಶಿವಮೊಗ್ಗ: ಲಾಡ್ಜ್‌ನ ರೂಂನಲ್ಲಿ ಬೆಂಕಿಯಿಂದಾಗಿ ಮಹಿಳೆಗೆ ಗಂಭೀರ ಗಾಯ ಪ್ರಕರಣ ಸಂಬಂಧ ಲಾಡ್ಜ್‌ನ ಸೂಪರ್‌ ವೈಸರ್‌ ದೂರು ನೀಡಿದ್ದಾರೆ. ರೂಂನಲ್ಲಿದ್ದ ಪುರುಷ ಮತ್ತು ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ. ನ.18ರಂದು ಶಿವಮೊಗ್ಗದ ಲಾಡ್ಜ್‌ನ ರೂಂನಲ್ಲಿ ಬೆಂಕಿಗೆ ಮಹಿಳೆ ಗಂಭೀರ ಗಾಯಗೊಂಡಿದ್ದರು. ಜೊತೆಗಿದ್ದ ವ್ಯಕ್ತಿಗು ಗಾಯವಾಗಿತ್ತು. ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ದೂರಿನಲ್ಲಿ ಏನಿದೆ? ‘ಗಿರೀಶ್‌ ಎಂಬುವವರು ನ.18ರಂದು ಮಧ್ಯಾಹ್ನ ಒಬ್ಬರೆ ಲಾಡ್ಜ್‌ಗೆ ಬಂದು ರೂಂ ನಂಬರ್‌ 211ರಲ್ಲಿ ಉಳಿದಿದ್ದರು. … Read more

ದಿಢೀರ್‌ ಕಾರ್ಯಾಚರಣೆ, 24 ಮಂದಿಯನ್ನು ಠಾಣೆಗೆ ಕರೆದೊಯ್ದ ಪೊಲೀಸ್‌, ನಾಲ್ವರ ವಿರುದ್ಧ ಕೇಸ್‌

Shimoga-Police-Jeep

ಶಿವಮೊಗ್ಗ: ನಗರದಲ್ಲಿ ಪೊಲೀಸರು ದಿಢೀರ್‌ ವಿಶೇಷ ಏರಿಯಾ ಡಾಮಿನೇಷನ್‌ ಕಾರ್ಯಾಚರಣೆ ನಡೆಸಿದರು. ಅನುಮಾನಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು. ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಆರ್‌ಎಂಎಲ್‌ ನಗರ, ಬುದ್ಧನಗರ, ಮಿಳಘಟ್ಟ ಭಾಗದಲ್ಲಿ ಏರಿಯಾ ಡಾಮಿನೇಷನ್‌ ವಿಶೇಷ ಗಸ್ತು ನಡೆಸಲಾಯಿತು. ಈ ಸಂದರ್ಭ 24 ಮಂದಿಯನ್ನು ಠಾಣೆಗೆ ಕರೆಯಿಸಿ ವೈದ್ಯಕೀಯ ಪರೀಕ್ಷೆ ನಡೆಸಾಯಿತು. ಈ ಸಂದರ್ಭ ನಾಲ್ಕು ಮಂದಿ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಅವರ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ … Read more

ಆಟೋದಲ್ಲಿ ಬಂತು ಐದು ಬಾಳೆಗೊನೆ, ಪರಿಶೀಲಿಸಿದ ಪೊಲೀಸರಿಗೆ ಕಾದಿತ್ತು ಶಾಕ್‌, ಆಗಿದ್ದೇನು?

NDPS-Case-for-banana-supplier-to-shimoga-jail.

ಶಿವಮೊಗ್ಗ: ಕೇಂದ್ರ ಕಾರಾಗೃಹದ ಕ್ಯಾಂಟೀನ್‌ಗೆ ತಂದಿದ್ದ ಬಾಳೆಗೊನೆಗಳಲ್ಲಿ ಗಾಂಜಾ, ಸಿಗರೇಟ್‌ಗಳು ಪತ್ತೆಯಾಗಿವೆ. ಜೈಲು ಭದ್ರತೆ ನಿರ್ವಹಿಸುತ್ತಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಸಿಬ್ಬಂದಿ ಇದನ್ನು ಪತ್ತೆ ಹಚ್ಚಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನ.19ರಂದು ಮಧ್ಯಾಹ್ನ 2.15ರ ಹೊತ್ತೆಗೆ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಆಟೋ ಒಂದರಲ್ಲಿ ಐದು ಬಾಳೆಗೊನೆ ತರಲಾಗಿತ್ತು. ಕ್ಯಾಂಟೀನ್‌ನವರ ಸೂಚನೆ ಮೇರೆಗೆ ಇವುಗಳನ್ನು ತರಲಾಗಿದೆ ಎಂದು ಗೇಟ್‌ ಮುಂಭಾಗ ಇರಿಸಲಾಗಿತ್ತು. ಕೆಎಸ್‌ಐಎಸ್‌ಎಫ್‌ ಇನ್ಸ್‌ಪೆಕ್ಟರ್‌ ಜಗದೀಶ್‌, ಪಿಎಸ್‌ಐ ಪ್ರಭು, ಸಿಬ್ಬಂದಿ ಪ್ರವೀಣ್‌ ಮತ್ತು ನಿರೂಪಬಾಯಿ, … Read more